22ನೇ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ: ನಡಾಲ್‌ಗೆ 14ನೇ ಫ್ರೆಂಚ್‌ ಕಿರೀಟ

ಸಾಟಿಯಾಗದ ಕ್ಯಾಸ್ಪರ್‌ ರೂಡ್‌

Team Udayavani, Jun 5, 2022, 10:40 PM IST

22ನೇ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ: ನಡಾಲ್‌ಗೆ 14ನೇ ಫ್ರೆಂಚ್‌ ಕಿರೀಟ

ಪ್ಯಾರಿಸ್‌: “ಆವೆಯಂಗಳದ ದೊರೆ’ ರಫೆಲ್‌ ನಡಾಲ್‌ ಅವರ ಆಕ್ರಮಣಕಾರಿ ಆಟಕ್ಕೆ ನಾರ್ವೆಯ ಕ್ಯಾಸ್ಪರ್‌ ರೂಡ್‌ ಸಾಟಿಯಾಗಲೇ ಇಲ್ಲ. ರವಿವಾರದ ಫೈನಲ್‌ ಹಣಾಹಣಿಯನ್ನು 6  -3, 6-3, 6-0 ಅಂತರದಿಂದ ಗೆದ್ದ ನಡಾಲ್‌ 14ನೇ ಬಾರಿಗೆ ಫ್ರೆಂಚ್‌ ಓಪನ್‌ ಪ್ರಶಸ್ತಿ ಗೆದ್ದು ಸಂಭ್ರಮಿಸಿದರು. ಇದರೊಂದಿಗೆ ಪ್ಯಾರಿಸ್‌ ಫೈನಲ್‌ನಲ್ಲಿ ಅಜೇಯರಾಗಿ ಉಳಿದರು.

ಇದು ಸ್ಪೇನಿಗನಿಗೆ ಒಲಿದ 22ನೇ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ. ಇದರೊಂದಿಗೆ ಅವರು ಸಮಕಾಲೀನ ಟೆನಿಸ್‌ ದಿಗ್ಗಜರಾದ ನೊವಾಕ್‌ ಜೊಕೋವಿಕ್‌ ಮತ್ತು ರೋಜರ್‌ ಫೆಡರರ್‌ ಅವರಿಗಿಂತ ಎರಡು ಹೆಜ್ಜೆ ಮುಂದೆ ಸಾಗಿದರು. ಇವರಿಬ್ಬರೂ ತಲಾ 20 ಪ್ರಶಸ್ತಿ ಜಯಿಸಿದ್ದಾರೆ.

ರೂಡ್‌ ನಿರುತ್ತರ…
ನಡಾಲ್‌ ಅನುಭವಕ್ಕೆ ರೂಡ್‌ ಸಂಪೂರ್ಣ ನಿರುತ್ತರವಾಗಿದ್ದರು. ಅವರಿಗೆ ಯಾವ ಹಂತದಲ್ಲೂ ತಿರುಗಿ ಬೀಳಲು ಸಾಧ್ಯವಾಗಲಿಲ್ಲ. ತೃತೀಯ ಸೆಟ್‌ನಲ್ಲಂತೂ ರೂಡ್‌ ಅವರದು ಸಂಪೂರ್ಣ ಶರಣಾಗತಿ. ಇಲ್ಲಿ ಅವರಿಗೆ ಒಂದೂ ಅಂಕ ಗಳಿಸಲಾಗಲಿಲ್ಲ!

ಇದು ರಫೆಲ್‌ ನಡಾಲ್‌-ಕ್ಯಾಸ್ಪರ್‌ ರೂಡ್‌ ನಡುವಿನ ಮೊದಲ ಮುಖಾಮುಖಿ ಎಂಬುದು ಉಲ್ಲೇಖನೀಯ. ಆದರೆ ಇಬ್ಬರೂ ಬಹಳಷ್ಟು ಪ್ರ್ಯಾಕ್ಟೀಸ್‌ ಮ್ಯಾಚ್‌ ಆಡಿದ್ದಾರೆ. ರೂಡ್‌ ಸ್ಪೇನಿನ “ಮಲ್ಲೋರ್ಕ ಟೆನಿಸ್‌ ಅಕಾಡೆಮಿ’ಯಲ್ಲಿ ಬಹಳಷ್ಟು ವರ್ಷ ಅಭ್ಯಾಸ ನಡೆಸಿದ್ದರು. ನಡಾಲ್‌ ಅವರೇ ರೂಡ್‌ ಪಾಲಿನ ಐಡಲ್‌.

2013ರ ಫ್ರೆಂಚ್‌ ಓಪನ್‌ ಫೈನಲ್‌ನಲ್ಲಿ ರಫೆಲ್‌ ನಡಾಲ್‌ ಆಟವನ್ನು ಕಣ್ತುಂಬಿಸಿಕೊಂಡ 14ರ ಹರೆಯದ ರೂಡ್‌ ಅಂದಿನಿಂದ ಸ್ಪೇನಿಗನ ಆಟವನ್ನೇ ಅನುಸರಿಸುತ್ತ ಮೇಲೇರುತ್ತ ಹೋದರು. ಹೀಗಾಗಿ ರವಿವಾರದ ಫೈನಲ್‌ ಎಂಬುದು ಗುರು-ಶಿಷ್ಯರ ನಡುವಿನ ಮುಖಾಮುಖೀ ಆಗಿತ್ತು.

ಹಿರಿಯ ಟೆನಿಸಿಗ
ಈ ಜಯದೊಂದಿಗೆ ರಫೆಲ್‌ ನಡಾಲ್‌ ಫ್ರೆಂಚ್‌ ಓಪನ್‌ ಪ್ರಶಸ್ತಿ ಗೆದ್ದ ಅತೀ ಹಿರಿಯ ಟೆನಿಸಿಗನೆನಿಸಿದರು (36 ವರ್ಷ). 1972ರಲ್ಲಿ ಆ್ಯಂಡ್ರೆಸ್‌ ಜಿಮೆನೊ 34ನೇ ವರ್ಷದಲ್ಲಿ ಚಾಂಪಿಯನ್‌ ಆದದ್ದು ಪ್ಯಾರಿಸ್‌ ದಾಖಲೆಯಾಗಿತ್ತು.

ಇನ್ನೊಂದೆಡೆ 23ರ ಹರೆಯದ ರೂಡ್‌ಗೆ
ಇದು ಮೊದಲ ಗ್ರ್ಯಾನ್‌ಸ್ಲಾಮ್‌ ಫೈನಲ್‌. ಅಷ್ಟೇ ಅಲ್ಲ, ನಾರ್ವೆಯ ಟೆನಿಸಿಗನೋರ್ವ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ ಸುತ್ತಿಗೇರಿದ ಮೊದಲ ನಿದರ್ಶನವೂ ಇದಾಗಿದೆ. ಆದರೆ ನಡಾಲ್‌ ವಿರುದ್ಧ ಪ್ರಶಸ್ತಿ ಸಮರದಲ್ಲಿ ಕಾಣಿಸಿಕೊಂಡದ್ದೇ ರೂಡ್‌ ಪಾಲಿನ ಹೆಮ್ಮೆಯ ಸಂಗತಿ ಎನಿಸಿತು.

ಫೈನಲ್‌ಗಿಂತ ರಫೆಲ್‌ ನಡಾಲ್‌- ಅಲೆಕ್ಸಾಂಡರ್‌ ಜ್ವೆರೇವ್‌ ನಡುವಿನ ಸೆಮಿಫೈನಲ್‌ ಪಂದ್ಯವೇ ಭಾರೀ ಜೋಶ್‌ನಿಂದ ಕೂಡಿತ್ತು. ಇದು 2 ಸೆಟ್‌ ಕಾಣದೇ ಹೋದರೂ ನೀಡಿದ ಥ್ರಿಲ್‌ ಸಾಟಿಯಿಲ್ಲದ್ದು. ಇದರ ಮುಂದೆ ಫೈನಲ್‌ ಏಕಪಕ್ಷೀಯವೆನಿಸಿ, ತೀರಾ ಸಪ್ಪೆ ಎನಿಸಿತು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.