ಯುಎಸ್‌ ಸಾಮ್ರಾಜ್ಯಕ್ಕೆ ನಡಾಲ್‌ ಸಾಮ್ರಾಟ್‌


Team Udayavani, Sep 12, 2017, 6:20 AM IST

Rafael-Nadal,-US-Open-Champ.jpg

ನ್ಯೂಯಾರ್ಕ್‌: ವಿಶ್ವದ ನಂಬರ್‌ ವನ್‌ ಟೆನಿಸಿಗ, ಸ್ಪೇನಿನ ರಫೆಲ್‌ ನಡಾಲ್‌ ನ್ಯೂಯಾರ್ಕ್‌ನಲ್ಲಿ “ಯುಎಸ್‌ ಓಪನ್‌ ಚಾಂಪಿಯನ್‌’ ನಗುವನ್ನು ಹೊಮ್ಮಿಸಿದ್ದಾರೆ. ರವಿವಾರ ಪ್ರಶಸ್ತಿ ಕಾಳಗದಲ್ಲಿ, ಇದೇ ಮೊದಲ ಸಲ ಗ್ರ್ಯಾನ್‌ಸ್ಲಾಮ್‌ ಫೈನಲಿಗೆ ಬಂದ ದಕ್ಷಿಣ ಆಫ್ರಿಕಾದ ಕೆವಿನ್‌ ಆ್ಯಂಡರ್ಸನ್‌ ಅವರನ್ನು ನಡಾಲ್‌ 6 3, 6 3, 6 4 ನೇರ ಸೆಟ್‌ಗಳಿಂದ ಸುಲಭದಲ್ಲಿ ಹಿಮ್ಮೆಟ್ಟಿಸಿದರು.

ಇದು ರಫೆಲ್‌ ನಡಾಲ್‌ ಗೆದ್ದ 3ನೇ ಯುಎಸ್‌ ಓಪನ್‌ ಪ್ರಶಸ್ತಿಯಾದರೆ, ಒಟ್ಟಾರೆಯಾಗಿ ಏರಿಸಿಕೊಂಡ 16ನೇ ಗ್ರ್ಯಾನ್‌ಸ್ಲಾಮ್‌ ಕಿರೀಟ. ಈ ಲೆಕ್ಕಾಚಾರದಲ್ಲಿ, ಪುರುಷರ ವಿಭಾಗದಲ್ಲಿ ನಡಾಲ್‌ಗಿಂತ ಮುಂದಿರುವ ಏಕೈಕ ಆಟಗಾರನೆಂದರೆ ರೋಜರ್‌ ಫೆಡರರ್‌ (19).

2017ರಲ್ಲೇ ಮರಳಿ ನಂ.1 ಪಟ್ಟ ಅಲಂಕರಿಸಿದ ರಫೆಲ್‌ ನಡಾಲ್‌ ಈ ವರ್ಷ ಗೆದ್ದ 2ನೇ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ ಇದಾಗಿದೆ. ಫ್ರೆಂಚ್‌ ಓಪನ್‌ನಲ್ಲಿ ಸ್ಟಾನಿಸ್ಲಾಸ್‌ ವಾವ್ರಿಂಕ ಅವರನ್ನು ಮಣಿಸುವ ಮೂಲಕ ದಾಖಲೆ 10ನೇ ಸಲ “ರೊಲ್ಯಾಂಡ್‌ ಗ್ಯಾರಸ್‌ ಕಿಂಗ್‌’ ಆಗಿ ಮೂಡಿಬಂದಿದ್ದರು.

ಹಿಂದಿನ ಎದುರಾಳಿ ಜೊಕೋ
ರಫೆಲ್‌ ನಡಾಲ್‌ ಇದಕ್ಕೂ ಮುನ್ನ 2010 ಮತ್ತು 2013ರಲ್ಲಿ ಯುಎಸ್‌ ಓಪನ್‌ ಚಾಂಪಿಯನ್‌ ಆಗಿದ್ದರು. ಹಿಂದಿನೆರಡೂ ಸಲ ಅವರು ಫೈನಲ್‌ನಲ್ಲಿ ನೊವಾಕ್‌ ಜೊಕೋವಿಕ್‌ ಅವರನ್ನು 4 ಸೆಟ್‌ಗಳ ಕಾದಾಟದಲ್ಲಿ ಮಣಿಸಿದ್ದರು. ಈವರೆಗೆ ಒಟ್ಟು 23 ಸಲ ಗ್ರ್ಯಾನ್‌ಸ್ಲಾಮ್‌ ಫೈನಲ್‌ ಪ್ರವೇಶಿಸಿದ್ದು, 7 ಸಲ ಪ್ರಶಸ್ತಿ ವಂಚಿತರಾಗಿದ್ದಾರೆ.

ಜೊಕೋವಿಕ್‌, ಮರ್ರೆ, ವಾವ್ರಿಂಕ ಮೊದಲಾದ ಸ್ಟಾರ್‌ ಟೆನಿಸಿಗರು ಗಾಯಾಳಾಗಿ ಈ ಬಾರಿಯ ಯುಎಸ್‌ ಓಪನ್‌ನಿಂದ ಹಿಂದೆ ಸರಿದುದರಿಂದ ರೋಜರ್‌ ಫೆಡರರ್‌ ಮತ್ತು ರಫೆಲ್‌ ನಡಾಲ್‌ ನೆಚ್ಚಿನ ಆಟಗಾರರಾಗಿದ್ದರು. ಆದರೆ ಫೆಡರರ್‌ ಕ್ವಾರ್ಟರ್‌ ಫೈನಲ್‌ನಲ್ಲೇ ಹೊರಬಿದ್ದರು. ಕೆವಿನ್‌ ಆ್ಯಂಡರ್ಸನ್‌ ಅಚ್ಚರಿಯೆಂಬಂತೆ ಫೈನಲಿಗೆ ಏರಿ ಬಂದರು. ಇವರೆದುರು ನಡಾಲ್‌ ಸೊಲುವ ಪ್ರಶ್ನೆಯೇ ಇಲ್ಲ ಎಂಬ ಟೆನಿಸ್‌ ಪಂಡಿತರ ಲೆಕ್ಕಾಚಾರ ಸುಳ್ಳಾಗಲಿಲ್ಲ!
“ವೈಯಕ್ತಿಕವಾಗಿ ಹೇಳುವುದಾದರೆ ಈ ವರ್ಷದಲ್ಲಿ ಏನು ಸಂಭವಿಸಿತೋ ಅದನ್ನು ನಾನು ನಂಬುವ ಸ್ಥಿತಿಯಲ್ಲಿಲ್ಲ. 2 ವರ್ಷಗಳ ಗಾಯದ ಸಮಸ್ಯೆಯಿಂದಾಗಿ ನನಗೆ ಅಷ್ಟೇನೂ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ. ಆದರೂ 2 ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ ನನ್ನ ಪಾಲಾಯಿತು…’ ಎಂಬುದಾಗಿ ರಫೆಲ್‌ ನಡಾಲ್‌ ಪ್ರತಿಕ್ರಿಯಿಸಿದ್ದಾರೆ.

“ನಡಾಲ್‌ ನನ್ನ ಐಡಲ್‌’
32ರಷ್ಟು ಕೆಳ ರ್‍ಯಾಂಕಿಂಗಿನ ಕೆವಿನ್‌ ಆ್ಯಂಡರ್ಸನ್‌ ಈವರೆಗೆ ಗ್ರ್ಯಾನ್‌ಸ್ಲಾಮ್‌ನಲ್ಲಿ ಕ್ವಾರ್ಟರ್‌ ಫೈನಲ್‌ ದಾಟಿದವರಲ್ಲ. ಅವರು ಫೈನಲ್‌ ತಲುಪಲು 34 ಗ್ರ್ಯಾನ್‌ಸ್ಲಾಮ್‌ ಪಂದ್ಯಾವಳಿಗಳ ತನಕ ಕಾಯಬೇಕಾಯಿತು.
“ನಡಾಲ್‌, ನೀವು ನನ್ನ ಪಾಲಿನ ನಿಜವಾದ ಐಡಲ್‌. ನಿಮ್ಮೆದುರು ಆಡುವುದು ಅತ್ಯಂತ ಕಷ್ಟ. ಅದು ಈ ರಾತ್ರಿ ಸಾಬೀತಾಯಿತು. ನಾವಿಬ್ಬರೂ ಒಂದೇ ವಯಸ್ಸಿನವರು. ಆದರೆ ಜೀವಮಾನವಿಡೀ ನಿಮ್ಮ ಆಟವನ್ನು ಆಸ್ವಾದಿಸುತ್ತಲೇ ಬಂದಂತೆ ನನಗನಿಸುತ್ತದೆ…’ ಎಂಬುದು ಗ್ರ್ಯಾನ್‌ಸ್ಲಾಮ್‌ ಚರಿತ್ರೆಯಲ್ಲೇ ಫೈನಲ್‌ ತಲುಪಿದ ಅತ್ಯಂತ ಎತ್ತರದ ಆಟಗಾರನಾದ (6 ಅಡಿ, 8 ಇಂಚು) ಕೆವಿನ್‌ ಆ್ಯಂಡರ್ಸನ್‌ ಪ್ರತಿಕ್ರಿಯೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.