ಒಟ್ಟಿಗೇ ಅಭ್ಯಾಸ ನಡೆಸಿದ ರಾಹುಲ್‌, ಶುಭಮನ್‌ ಗಿಲ್‌


Team Udayavani, Feb 28, 2023, 8:00 AM IST

ಒಟ್ಟಿಗೇ ಅಭ್ಯಾಸ ನಡೆಸಿದ ರಾಹುಲ್‌, ಗಿಲ್‌

ಇಂದೋರ್‌: ಆಸ್ಟ್ರೇಲಿಯ ಎದುರಿನ 3ನೇ ಟೆಸ್ಟ್‌ ಪಂದ್ಯಕ್ಕಾಗಿ ಟೀಮ್‌ ಇಂಡಿಯಾ ಆಟಗಾರು ಸೋಮವಾರ ಕಠಿನ ಅಭ್ಯಾಸ ನಡೆಸಿದರು. ವಿಶೇಷವೆಂದರೆ, ಆರಂಭಿಕರಾದ ಕೆ.ಎಲ್‌. ರಾಹುಲ್‌ ಮತ್ತು ಶುಭಮನ್‌ ಗಿಲ್‌ ಅವರಿಗೆ ಕೋಚ್‌ ರಾಹುಲ್‌ ದ್ರಾವಿಡ್‌ ಒಟ್ಟಿಗೇ ಕ್ಲಾಸ್‌ ತೆಗೆದುಕೊಂಡದ್ದು. ಇಬ್ಬರೂ ಸುಮಾರು ಅರ್ಧ ಗಂಟೆ ಕಾಲ ಒಟ್ಟೊಟ್ಟಿಗೇ ಬ್ಯಾಟಿಂಗ್‌ ಅಭ್ಯಾಸ ನಡೆಸಿದರು.

ಈಗಾಗಲೇ ಕಳಪೆ ಫಾರ್ಮ್ನಿಂದಾಗಿ ಆಡುವ ಬಳಗದಲ್ಲಿ ಕೆ.ಎಲ್‌. ರಾಹುಲ್‌ ಸ್ಥಾನ ಅಲುಗಾಡುತ್ತಿದೆ. ಅವರನ್ನು ಉಪನಾಯಕತ್ವದಿಂದಲೂ ಕೆಳಗಿಳಿಸ ಲಾಗಿದೆ. 47 ಟೆಸ್ಟ್‌ಗಳಲ್ಲಿ 33.44ರ ಸಾಮಾನ್ಯ ಸರಾಸರಿಯನ್ನಷ್ಟೇ ಹೊಂದಿದ್ದಾರೆ. ಸರಣಿಯ ಮೊದಲೆರಡು ಟೆಸ್ಟ್‌ಗಳಲ್ಲಿ ಗಳಿಸಿದ್ದು 20, 17 ಮತ್ತು ಒಂದು ರನ್‌ ಮಾತ್ರ. ಇವರ ಸ್ಥಾನಕ್ಕೆ ಇನ್‌ಫಾರ್ಮ್ ಬ್ಯಾಟರ್‌ ಶುಭಮನ್‌ ಗಿಲ್‌ ಬರಬಹುದು ಎಂಬ ನಿರೀಕ್ಷೆ ದಟ್ಟವಾಗಿದೆ. ಹೀಗಾಗಿ ಇವರಿಬ್ಬರು ಒಟ್ಟಿಗೇ ಅಭ್ಯಾಸ ನಡೆಸಿದ್ದು ಕುತೂಹಲಕ್ಕೆ ಕಾರಣವಾಗಿದೆ.

ರಾಹುಲ್‌ ಮತ್ತು ಗಿಲ್‌ ಅಕ್ಕಪಕ್ಕದ ನೆಟ್ಸ್‌ ನಲ್ಲಿ ಏಕಕಾಲಕ್ಕೆ ಬ್ಯಾಟಿಂಗ್‌ ಅಭ್ಯಾಸ ನಡೆಸಿದರು. ರಾಹುಲ್‌ ಮೊದಲ 18 ಎಸೆತಗಳನ್ನು ರಕ್ಷಣಾತ್ಮಕವಾಗಿ ಆಡಿದರು. ಬಳಿಕ ಸ್ಪಿನ್‌ ಎಸೆತಗಳಲ್ಲಿ ಏರಿಯಲ್‌ ಶಾಟ್‌ ಬಾರಿಸಿದರು. ಈ ಸಂದರ್ಭದಲ್ಲಿ ಅವರು ಆರ್‌. ಅಶ್ವಿ‌ನ್‌ ಎಸೆತಗಳನ್ನು ಎದುರಿಸಿದರು.

ರೋಹಿತ್‌, ಕೊಹ್ಲಿ…
ನಾಯಕ ರೋಹಿತ್‌ ಶರ್ಮ ಮತ್ತು ವಿರಾಟ್‌ ಕೊಹ್ಲಿ ಕೂಡ ಸುದೀರ್ಘ‌ ಬ್ಯಾಟಿಂಗ್‌ ಅಭ್ಯಾಸ ನಡೆಸಿದರು. ಇಬ್ಬರೂ ಸ್ಪಿನ್ನರ್‌ಗಳ ವಿರುದ್ಧ ಆಕ್ರಮಣಕಾರಿ ಹೊಡೆತ ಬಾರಿಸಿದರು.

ವಿರಾಟ್‌ ಕೊಹ್ಲಿ ಎಡಗೈ ಸ್ಪಿನ್ನರ್‌ಗಳ ಎಸೆತವನ್ನು ನೇರವಾಗಿ ಬೌಂಡರಿಗೆ ಬಡಿದಟ್ಟಿದರೆ, ರೋಹಿತ್‌ ಪುಲ್‌, ಸ್ವೀಪ್‌ ಮತ್ತು ರಿವರ್ಸ್‌ ಸ್ವೀಪ್‌ ಹೊಡೆತಗಳನ್ನು ಅಭ್ಯಸಿಸಿದರು.

ವಿರಾಟ್‌ ಕೊಹ್ಲಿ, ರವೀಂದ್ರ ಜಡೇಜ, ಕೆ.ಎಸ್‌. ಭರತ್‌ ರವಿವಾರವೇ ಹೋಳ್ಕರ್‌ ಅಂಗಳದಲ್ಲಿ ಅಭ್ಯಾಸ ಆರಂಭಿಸಿದ್ದರು. ಉಳಿದವರು ಸೋಮವಾರ ನೆಟ್‌ ಪ್ರಾಕ್ಟೀಸ್‌ಗೆ ಇಳಿದರು.

ಸ್ಟಾರ್ಕ್‌ ಬೌಲಿಂಗ್‌
ಕೈಬೆರಳಿನ ಗಾಯದಿಂದ ಮೊದಲೆರಡು ಟೆಸ್ಟ್‌ ಪಂದ್ಯಗಳಿಂದ ಹೊರಗುಳಿದಿದ್ದ ಎಡಗೈ ವೇಗಿ ಮಿಚೆಲ್‌ ಸ್ಟಾರ್ಕ್‌ ಕೂಡ ಬೌಲಿಂಗ್‌ ಅಭ್ಯಾಸ ನಡೆಸಿದರು. ಆದರೆ ಅವರು ಪೂರ್ತಿ ಫಿಟ್‌ನೆಸ್‌ ಹೊಂದಿಲ್ಲ. ಆದರೂ ನಾಯಕ ಪ್ಯಾಟ್‌ ಕಮಿನ್ಸ್‌ ಜಾಗದಲ್ಲಿ ಕಾಣಿಸಿಕೊಳ್ಳುವುದು ಖಚಿತ ಎನ್ನಲಾಗಿದೆ.

ಆಸ್ಟ್ರೇಲಿಯನ್ನರಿಗೆ ಸ್ಪಿನ್‌ ಚಿಂತೆ
ಮೊದಲೆರಡು ಟೆಸ್ಟ್‌ ಪಂದ್ಯಗಳಲ್ಲಿ ಭಾರತದ ಸ್ಪಿನ್‌ ಎಸೆತಗಳನ್ನು ಎದುರಿಸಲಾಗದೆ ಸೋಲನುಭವಿಸಿದ್ದ ಆಸ್ಟ್ರೇಲಿಯಕ್ಕೆ ಇಂದೋರ್‌ನಲ್ಲೂ ಸ್ಪಿನ್‌ ಭೀತಿ ಎದುರಾಗಿದೆ. ಈ ಅಂಗಳದಲ್ಲಿ ಆರ್‌. ಅಶ್ವಿ‌ನ್‌ ಉತ್ತಮ ದಾಖಲೆ ಹೊಂದಿದ್ದಾರೆ. ಆಡಿದ 2 ಟೆಸ್ಟ್‌ಗಳಲ್ಲಿ 12.5 ಸರಾಸರಿಯೊಂದಿಗೆ 18 ವಿಕೆಟ್‌ ಉಡಾಯಿಸಿದ ಸಾಧನೆ ಅಶ್ವಿ‌ನ್‌ ಅವರದು.

ನಾಗ್ಪುರ ಮತ್ತು ಹೊಸದಿಲ್ಲಿ ಟೆಸ್ಟ್‌ಗಳಲ್ಲಿ ಸ್ಪಿನ್‌ ವಿರುದ್ಧ ಎರ್ರಾಬಿರ್ರಿ ಬ್ಯಾಟ್‌ ಬೀಸುವ ಮೂಲಕ ಆಸೀಸ್‌ ಪಡೆ ಮೂರೇ ದಿನಗಳಲ್ಲಿ ಶರಣಾಗಿತ್ತು. ಸ್ಪಿನ್‌ ಎಸೆತಗಳನ್ನು ನಿಭಾಯಿಸುವಲ್ಲಿ ಪರಿಪೂರ್ಣತೆ ಸಾಧಿಸದ ಹೊರತು ಆಸೀಸ್‌ಗೆ ಈ ಸರಣಿಯಲ್ಲಿ ಉಳಿಗಾಲವಿಲ್ಲ ಎಂಬುದೊಂದು ಸಾಮಾನ್ಯ ಲೆಕ್ಕಾಚಾರ.

ಸೋಮವಾರ ಉಸ್ಮಾನ್‌ ಖ್ವಾಜಾ ಮತ್ತು ಸ್ಟೀವನ್‌ ಸ್ಮಿತ್‌ ಸುಮಾರು ಒಂದು ಗಂಟೆ ಕಾಲ ನಥನ್‌ ಲಿಯಾನ್‌ ಮತ್ತು ಮ್ಯಾಥ್ಯೂ ಕನೇಮನ್‌ ಅವರ ಸ್ಪಿನ್‌ ಎಸೆತಗಳನ್ನು ನಿಭಾಯಿಸಿದರು. ಇವರಲ್ಲಿ ಲಿಯಾನ್‌ ಎಸೆತಗಳು ಇಬ್ಬರಿಗೂ ಸಾಕಷ್ಟು ಉಪಟಳ ನೀಡಿದವು. ಆದರೆ ಕನೇಮನ್‌ ಎಸೆತಗಳಲ್ಲಿ ದೊಡ್ಡ ಹೊಡೆತ ಬಾರಿಸಿದರು.

ಮಾರ್ನಸ್‌ ಲಬುಶೇನ್‌, ಅಲೆಕ್ಸ್‌ ಕ್ಯಾರಿ ಮತ್ತು ಪೀಟರ್‌ ಹ್ಯಾಂಡ್ಸ್‌ಕಾಂಬ್‌ ಅವರು ಸ್ಪಿನ್ನರ್‌ಗಳಾದ ಟಾಡ್‌ ಮರ್ಫಿ ಹಾಗೂ ಮಿಚೆಲ್‌ ಸ್ವೆಪ್ಸನ್‌ ಎಸೆತಗಳನ್ನು ಎದುರಿಸಿದರು.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.