ಭರ್ಜರಿ ಜಯದೊಂದಿಗೆ ರಾಹುಲ್-ರೋಹಿತ್ ಯುಗದ ಶುಭಾರಂಭ


Team Udayavani, Nov 18, 2021, 8:45 AM IST

ಭರ್ಜರಿ ಜಯದೊಂದಿಗೆ ರಾಹುಲ್-ರೋಹಿತ್ ಯುಗದ ಶುಭಾರಂಭ

ಜೈಪುರ: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಗೆಲ್ಲುವ ಮೂಲಕ ಕೊಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ಯುಗದ ಶುಭಾರಂಭವಾಗಿದೆ.

ಬ್ಯಾಟಿಂಗಿಗೆ ಇಳಿಸಲ್ಪಟ್ಟ ನ್ಯೂಜಿಲ್ಯಾಂಡ್‌ ಮಾರ್ಟಿನ್‌ ಗಪ್ಟಿಲ್‌, ಮಾರ್ಕ್‌ ಚಾಪ್‌ಮನ್‌ ಅವರ ಅರ್ಧ ಶತಕಗಳ ನೆರವಿನಿಂದ 6 ವಿಕೆಟಿಗೆ 164 ರನ್‌ ಗಳಿಸಿತು. ಗುರಿ ಬೆನ್ನತ್ತಿದ ಭಾರತ 19.4 ಓವರ್‌ಗಳಲ್ಲಿ 5 ವಿಕೆಟಿಗೆ 166 ರನ್‌ ಬಾರಿಸಿತು.

ಕಿವೀಸ್‌ ಆರಂಭ ಆಘಾತಕಾರಿಯಾಗಿತ್ತು. ಟಿ20 ವಿಶ್ವಕಪ್‌ ಸೆಮಿಫೈನಲ್‌ ಹೀರೋ ಡ್ಯಾರಿಲ್‌ ಮಿಚೆಲ್‌ “ಗೋಲ್ಡನ್‌ ಡಕ್‌’ ಸಂಕಟಕ್ಕೆ ಸಿಲುಕಿದರು. ಭುವನೇಶ್ವರ್‌ ಕುಮಾರ್‌ ಪಂದ್ಯದ ಮೊದಲ ಓವರಿನ 3ನೇ ಎಸೆತದಲ್ಲೇ ಆವರನ್ನು ಕ್ಲೀನ್‌ಬೌಲ್ಡ್‌ ಮಾಡಿದರು. ಒನ್‌ಡೌನ್‌ ಬ್ಯಾಟ್ಸ್‌ಮನ್‌ ಮಾರ್ಕ್‌ ಚಾಪ್‌ಮನ್‌ ತಂಡವನ್ನು ಮೇಲೆತ್ತುವ ಪ್ರಯತ್ನದಲ್ಲಿ ಧಾರಾಳ ಯಶಸ್ಸು ಕಾಣತೊಡಗಿದರು. ಪವರ್‌ ಪ್ಲೇ ಅವಧಿಯ ಬಹುತೇಕ ಎಸೆತಗಳನ್ನು ಎದುರಿಸಿ ಬಿರುಸಿನ ಆಟವಾಡಿದರು. ಮೊದಲ 6 ಓವರ್‌ಗಳಲ್ಲಿ ಕಿವೀಸ್‌ 41 ರನ್‌ ಮಾಡಿತು. ಇದರಲ್ಲಿ ಚಾಪ್‌ಮನ್‌ ಪಾಲೇ 30 ರನ್‌ ಆಗಿತ್ತು. ಗಪ್ಟಿಲ್‌ ಇನ್ನೊಂದೆಡೆ ನಿಂತು ಆಡುತ್ತ ಜತೆಗಾರನಿಗೆ ಉತ್ತಮ ಬೆಂಬಲ ನೀಡತೊಡಗಿದರು. ಭಾರತದ ಬೌಲರ್‌ಗಳ ಮೇಲೆ ಒತ್ತಡ ಹೆಚ್ಚುತ್ತ ಹೋಯಿತು. 10 ಓವರ್‌ ಮುಗಿಯುವಾಗ ಕಿವೀಸ್‌ ಸ್ಕೋರ್‌ ಒಂದೇ ವಿಕೆಟಿಗೆ 65ಕ್ಕೆ ಏರಿತ್ತು.

ಅಕ್ಷರ್‌ ಪಟೇಲ್‌ ಎಸೆತವನ್ನು ಸಿಕ್ಸರ್‌ಗೆ ಬಡಿದಟ್ಟುವ ಮೂಲಕ ಮಾರ್ಕ್‌ ಚಾಪ್‌ಮನ್‌ ನ್ಯೂಜಿಲ್ಯಾಂಡ್‌ ಪರ ತಮ್ಮ ಚೊಚ್ಚಲ ಅರ್ಧ ಶತಕ ಪೂರ್ತಿಗೊಳಿಸಿದರು. ಅವರ ಇನ್ನೊಂದು ಟಿ20 ಫಿಫ್ಟಿ ಹಾಂಕಾಂಗ್‌ ಪರ ದಾಖಲಾಗಿತ್ತು.

ಇದನ್ನೂ ಓದಿ:365 ದಿನಗಳಲ್ಲಿ 32 ಕೋಟಿ ಸ್ಮಾರ್ಟ್‌ಫೋನ್‌ ಬಳಕೆದಾರರು ಸೇರ್ಪಡೆ!

10ನೇ ಓವರ್‌ ಬಳಿಕ ಗಪ್ಟಿಲ್‌ ಕೂಡ ಮುನ್ನುಗ್ಗಿ ಬೀಸತೊಡಗಿದರು. 18ನೇ ಓವರ್‌ ತನಕ ಕ್ರೀಸ್‌ ಆಕ್ರಮಿಸಿಕೊಂಡ ಅವರು 42 ಎಸೆತಗಳಿಂದ 70 ರನ್‌ ಬಾರಿಸಿದರು. ಸಿಡಿಸಿದ್ದು 4 ಸಿಕ್ಸರ್‌ ಹಾಗೂ 3 ಫೋರ್‌. ಗಪ್ಟಿಲ್‌-ಚಾಮ್‌ಮನ್‌ ಜೋಡಿಯಿಂದ 2ನೇ ವಿಕೆಟಿಗೆ 109 ರನ್‌ ಹರಿದು ಬಂತು. ಇದು ಎಲ್ಲ ವಿಕೆಟ್‌ಗಳಿಗೂ ಅನ್ವಯವಾಗುವಂತೆ ಭಾರತದ ವಿರುದ್ಧ ನ್ಯೂಜಿಲ್ಯಾಂಡ್‌ ದಾಖಲಿಸಿದ ಅತೀ ದೊಡ್ಡ ಜತೆಯಾಟವಾಗಿದೆ. ಅಂತಿಮವಾಗಿ ಕಿವೀಸ್ 20 ಓವರ್ ನಲ್ಲಿ ಆರು ವಿಕೆಟ್ ಗೆ 164 ರನ್ ಗಳಿಸಿತು.

ಸಿಡಿದ ಸೂರ್ಯಕುಮಾರ್‌: ಮೂರನೇ ಕ್ರಮಾಂಕದಲ್ಲಿ ಸೂರ್ಯಕುಮಾರ್‌ ಯಾದವ್‌ ಅವರ ಸ್ಫೋಟಕ ಬ್ಯಾಟಿಂಗ್‌ ಭಾರತದ ಸರದಿಯ ಆಕರ್ಷಣೆ ಎನಿಸಿತು. 40 ಎಸೆತ ಎದುರಿಸಿದ ಸೂರ್ಯ 6 ಬೌಂಡರಿ ಹಾಗೂ 3 ಸಿಕ್ಸರ್‌ ನೆರವಿನಿಂದ 62 ರನ್‌ ಚಚ್ಚಿದರು. ನಾಯಕ ರೋಹಿತ್‌ ಶರ್ಮ 36 ಎಸೆತಗಳಿಂದ 48 ರನ್‌ ಹೊಡೆದರು (5 ಬೌಂಡರಿ, 2 ಸಿಕ್ಸರ್‌). ಕೆ.ಎಲ್. ರಾಹುಲ್‌ ಗಳಿಕೆ 15 ರನ್‌.

ರಾಹುಲ್‌ ಅವರೊಂದಿಗೆ ಮೊದಲ ವಿಕೆಟಿಗೆ 5.1 ಓವರ್‌ಗಳಿಂದ 50 ರನ್‌ ಪೇರಿಸಿದ ರೋಹಿತ್‌, ದ್ವಿತೀಯ ವಿಕೆಟಿಗೆ ಸೂರ್ಯಕುಮಾರ್‌ ಜತೆಗೂಡಿ 59 ರನ್‌ ಹೊಡೆದರು. ಟ್ರೆಂಟ್‌ ಬೌಲ್ಟ್ ಈ ಜೋಡಿಯನ್ನು ಬೇರ್ಪಡಿಸಿದರು.

ಅಂತಿಮ ಓವರ್‌ನಲ್ಲಿ 10 ರನ್‌ ತೆಗೆಯುವ ಸವಾಲು ಭಾರತಕ್ಕೆ ಎದುರಾಯಿತು. ಡ್ಯಾರಿಲ್‌ ಮಿಚೆಲ್‌ ಅವರ ಈ ಓವರ್‌ನ ಆರಂಭದಲ್ಲಿ ವೆಂಕಟೇಶ್‌ ಅಯ್ಯರ್‌ ಹಾಗೂ ಕೊನೆಯಲ್ಲಿ ರಿಷಭ್‌ ಪಂತ್‌ ಬೌಂಡರಿ ಬಾರಿಸಿ ತಂಡದ ಗೆಲುವನ್ನು ಸಾರಿದರು.

ಸೂರ್ಯಕುಮಾರ್ ಯಾದವ್ ಅವರು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಸರಣಿಯ 2ನೇ ಪಂದ್ಯ ಶುಕ್ರವಾರ ರಾಂಚಿಯಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.