ಲಂಕಾ ಪ್ರವಾಸಕ್ಕೆ ದ್ರಾವಿಡ್ ಕೋಚ್
Team Udayavani, May 21, 2021, 6:30 AM IST
ಹೊಸದಿಲ್ಲಿ: ಮಾಜಿ ಕ್ರಿಕೆಟಿಗ, “ದಿ ವಾಲ್’ ಖ್ಯಾತಿಯ ರಾಹುಲ್ ದ್ರಾವಿಡ್ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡದ ಕೋಚ್ ಆಗಿರಲಿದ್ದಾರೆ ಎಂದು ಬಿಸಿಸಿಐ ಪ್ರಕಟಿಸಿದೆ.
ಬೌಲಿಂಗ್ ಕೋಚ್ ಪರಸ್ ಮ್ಹಾಂಬ್ರೆ ಕೂಡ ತಂಡದ ಜತೆ ತೆರಳಲಿದ್ದಾರೆ. ಉಳಿದಂತೆ ದ್ರಾವಿಡ್ ತಮ್ಮದೇ ಆದ ಸಹಾಯಕ ಹಾಗೂ ಕೋಚಿಂಗ್ ಸಿಬಂದಿಯನ್ನು ಲಂಕಾ ಪ್ರವಾಸಕ್ಕೆ ಕರೆದೊಯ್ಯುವುದೂ ಖಚಿತಗೊಂಡಿದೆ.
3 ಏಕದಿನ ಹಾಗೂ 3 ಟಿ20 ಪಂದ್ಯಗಳ ಸರಣಿಗಾಗಿ ಭಾರತದ “ದ್ವಿತೀಯ ದರ್ಜೆ’ಯ ತಂಡ ಶ್ರೀಲಂಕಾಕ್ಕೆ ತೆರಳಲಿದೆ. ಇದೇ ವೇಳೆ ವಿರಾಟ್ ಕೊಹ್ಲಿ ನಾಯಕತ್ವದ ಪ್ರಧಾನ ತಂಡ ಇಂಗ್ಲೆಂಡ್ ಪ್ರವಾಸದಲ್ಲಿರುತ್ತದೆ. ಕೋಚ್ ರವಿಶಾಸ್ತ್ರಿ ಈ ತಂಡದ ಜತೆ ಇರುವುದರಿಂದ ರಾಹುಲ್ ದ್ರಾವಿಡ್ ಅವರನ್ನು ಲಂಕಾ ಸರಣಿಗಾಗಿ ಕೋಚ್ ಆಗಿ ನೇಮಿಸಲಾಗಿದೆ.
ದ್ರಾವಿಡ್ ಹುಡುಗರು…
ಕಳೆದ ಕೆಲವು ದಿನಗಳಿಂದ ಈ ಪ್ರವಾಸದ ಕೋಚ್ ಹುದ್ದೆಗೆ ರಾಹುಲ್ ದ್ರಾವಿಡ್ ಹೆಸರು ಕೇಳಿಬರುತ್ತಿತ್ತು. ದ್ರಾವಿಡ್ ಭಾರತ “ಎ’ ಮತ್ತು ಅಂಡರ್-19 ತಂಡಗಳ ಕೋಚ್ ಹುದ್ದೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಈಗಿನ ಭಾರತ ತಂಡದಲ್ಲಿರುವ ಯುವ ಆಟಗಾರರೆಲ್ಲ ದ್ರಾವಿಡ್ ಗರಡಿಯಲ್ಲೇ ಪಳಗಿದವರಾಗಿದ್ದಾರೆ. ಬೆಂಗಳೂರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥ ಸ್ಥಾನಕ್ಕೇರಿದ ಬಳಿಕ ದ್ರಾವಿಡ್ ಕಿರಿಯರ ತಂಡಗಳಿಂದ ದೂರಾಗಿದ್ದರು.
ಕಲಾತ್ಮಕ ಬ್ಯಾಟ್ಸ್ಮನ್ ರಾಹುಲ್ ದ್ರಾವಿಡ್ ಸೀನಿಯರ್ ತಂಡದ ಕೋಚ್ ಆಗುತ್ತಿರುವುದು ಇದೇ ಮೊದಲು. 2014ರಲ್ಲೊಮ್ಮೆ ಇಂಗ್ಲೆಂಡ್ ಪ್ರವಾಸದ ವೇಳೆ ತಂಡದ ಸಲಹೆಗಾರನಾಗಿ ಕೆಲಸ ಮಾಡಿದ್ದರು. ಬಳಿಕ ಇವರ ನಂಟು ಪ್ರತಿಭಾನ್ವಿತ ಕ್ರಿಕೆಟಿಗರನ್ನು ರೂಪುಗೊಳಿಸುವುದಕ್ಕೆ ಮೀಸಲಾಗಿತ್ತು.
ಏಕಕಾಲದಲ್ಲಿ ಎರಡು ಪ್ರವಾಸ :
ಏಕಕಾಲದಲ್ಲಿ ಭಾರತದ ತಂಡಗಳೆರಡು ಎರಡು ದೇಶಗಳಿಗೆ ಪ್ರವಾಸ ಹೋಗುತ್ತಿರುವ ಅಪರೂಪದ ವಿದ್ಯಮಾನ ಇದಾಗಿದೆ. ಲಂಕಾ ಪ್ರವಾಸಕ್ಕಾಗಿ ಈ ತಿಂಗಳ ಕೊನೆಯಲ್ಲಿ ತಂಡವನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಶಿಖರ್ ಧವನ್, ಪೃಥ್ವಿ ಶಾ, ಭುವನೇಶ್ವರ್ ಕುಮಾರ್, ಪಾಂಡ್ಯ ಬ್ರದರ್, ಸೂರ್ಯಕುಮಾರ್ ಯಾದವ್, ಮನೀಷ್ ಪಾಂಡೆ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ದೇವದತ್ತ ಪಡಿಕ್ಕಲ್, ರಾಹುಲ್ ತೇವಟಿಯಾ, ವರುಣ್ ಚಕ್ರವರ್ತಿ, ಖಲೀಲ್ ಅಹ್ಮದ್, ಹರ್ಷಲ್ ಪಟೇಲ್, ಚಹಲ್ ಸೋದರರು, ಯಜುವೇಂದ್ರ ಚಹಲ್ ಮೊದಲಾದವರು ಲಂಕಾ ಪ್ರವಾಸದ ರೇಸ್ನಲ್ಲಿದ್ದಾರೆ.
ಆದರೆ ಶ್ರೀಲಂಕಾದಲ್ಲೂ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಸರಣಿ ನಡೆದೀತೇ ಎಂಬ ಪ್ರಶ್ನೆಯೊಂದು ಕಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ