
ವಿರಾಟ್ ಕೊಹ್ಲಿ ಟಿ20 ತಂಡದಲ್ಲಿ ಯಾಕಿಲ್ಲ? ಕೋಚ್ ದ್ರಾವಿಡ್ ಉತ್ತರ ನೋಡಿ
Team Udayavani, Jan 24, 2023, 9:11 AM IST

ಇಂಧೋರ್: ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಇದೀಗ ಮತ್ತೆ ಅದ್ಭುತ ಫಾರ್ಮ್ ನಲ್ಲಿದ್ದಾರೆ. ಕಳೆದ ಏಷ್ಯಾಕಪ್ ನಲ್ಲಿ ಶತಕದೊಂದಿಗೆ ಫಾರ್ಮ್ ಗೆ ಮರಳಿದ ವಿರಾಟ್ ಬಳಿಕ ಟಿ20 ವಿಶ್ವಕಪ್ ನಲ್ಲೂ ಉತ್ತಮ ಆಟವಾಡಿದರು. ಇದೀಗ ಐಸಿಸಿ ವರ್ಷದ ಟಿ20 ತಂಡದಲ್ಲೂ ವಿರಾಟ್ ಸ್ಥಾನ ಪಡೆದಿದ್ದಾರೆ.
ಆದರೆ ಟಿ20 ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ ಅವರನ್ನು ಟಿ20 ತಂಡದಿಂದ ಕೈಬಿಡಲಾಗಿದೆ. ಭವಿಷ್ಯದ ತಂಡವನ್ನು ಕಟ್ಟುವ ದಿಸೆಯಿಂದ ಯುವ ಆಟಗಾರರಿಗೆ ಜಾಗ ನೀಡಲಾಗುತ್ತಿದೆ. ಮುಂಬರುವ ಕಿವೀಸ್ ವಿರುದ್ಧದ ಸರಣಿಗೂ ವಿರಾಟ್ ಆಯ್ಕೆಯಾಗಿಲ್ಲ.
ಅಂತಿಮ ಏಕದಿನ ಪಂದ್ಯಕ್ಕಾಗಿ ಇಂಧೋರ್ ಗೆ ಬಂದ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಪ್ರಶ್ನೆ ಎದುರಾಯಿತು. “ಕಳೆದ ವರ್ಷದವರೆಗೂ ಟಿ20 ತಂಡದಲ್ಲಿ ವಿರಾಟ್ ಸ್ಥಾನ ಪ್ರಶ್ನೆಯಾಗಿತ್ತು…’’ ಎಂದು ಪತ್ರಕರ್ತರೊಬ್ಬರು ಕೇಳಿದರು. ಆದರೆ ನಡುವಲ್ಲೇ ಉತ್ತರಿಸಿದ ದ್ರಾವಿಡ್, “ ನಮ್ಮಿಂದ ಅಲ್ಲ ಸರ್, ಅಲ್ಲವೇ ಅಲ್ಲ.. ನಮ್ಮಿಂದ ಅಲ್ಲ” ಎಂದರು.
ಐಸಿಸಿ ವರ್ಷದ ಟಿ20 ತಂಡದಲ್ಲಿ ಸ್ಥಾನ ಪಡೆದರೂ ವಿರಾಟ್ ಟಿ20 ತಂಡದಲ್ಲಿ ಯಾಕಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, “ನಿರ್ದಿಷ್ಟ ವೈಟ್-ಬಾಲ್ ಪಂದ್ಯಾವಳಿಗಳಿಗೆ ನಿರ್ದಿಷ್ಟ ಸಮಯದ ಕೆಲವು ಹಂತಗಳಲ್ಲಿ ನಾವು ನೀಡಬೇಕಾದ ಕೆಲವು ಆದ್ಯತೆಗಳಿವೆ. ನಾವು ಬಾರ್ಡರ್-ಗವಾಸ್ಕರ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಆಡುತ್ತಿದ್ದೇವೆ. ನಮಗೆ ಇವು ಪ್ರಮುಖ ಪಂದ್ಯಗಳು. ಕೆಲವು ವೈಟ್-ಬಾಲ್ ಪಂದ್ಯಾವಳಿಗಳಿಗೆ ನಾವು ಆದ್ಯತೆ ನೀಡಬೇಕಾಗಿತ್ತು, ಟಿ20 ವಿಶ್ವಕಪ್ ನಂತರದ ಆದ್ಯತೆಯು ಈ ಆರು ಪಂದ್ಯಗಳಾಗಿವೆ” ಎಂದರು.
— Anna 24GhanteChaukanna (@Anna24GhanteCh2) January 23, 2023
“ ವಿರಾಟ್ ಈ ಎಲ್ಲಾ ಆರು ಪಂದ್ಯಗಳನ್ನು ಆಡಿದ್ದಾನೆ. ಮುಂದಿನ ಒಂದೆರಡು ಪಂದ್ಯಗಳಿಗೆ ರೋಹಿತ್ ಜತೆಗೆ ಆತ ವಿಶ್ರಾಂತಿ ಪಡೆಯಲಿದ್ದಾನೆ. ಆಸ್ಟ್ರೇಲಿಯಾ ಸರಣಿಗೂ ಮೊದಲು ನಾವು ಒಟ್ಟಿಗೆ ಸೇರಲಿದ್ದೇವೆ. ಅದಕ್ಕಾಗಿ ವಿರಾಟ್ ಉತ್ತಮ ವಿಶ್ರಾಂತಿ ಪಡೆದು ಬರಲಿದ್ದಾನೆ. ನಾವು ಕೆಲವು ಫಾರ್ಮ್ಯಾಟ್ ಗಳನ್ನು ಆದ್ಯತೆಯ ಮೇಲೆ ನೋಡಬೇಕಾಗಿದೆ” ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್ ಘೀ ರೋಸ್ಟ್

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
ಹೊಸ ಸೇರ್ಪಡೆ

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

ಬೊರಿವಲಿಯ ರೋಹಿತ್ ಪೂಜಾರಿ ಡಾನ್ಸ್ ಅಕಾಡೆಮಿ: ಮಂಥನ್-2023 ಸಂಭ್ರಮ

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

ಸಾಗರ ದಿನಾಚರಣೆ; ಕೊಳೆಯದ ವಸ್ತುಗಳ ಬಳಕೆ ಬೇಡ; ಜಿಲ್ಲಾಧಿಕಾರಿ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತಮಾಡಿದ ಚಿತ್ರತಂಡ