ಎನ್‌ಸಿಎನಲ್ಲಿ ರಾಹುಲ್‌ ದಾ‹ವಿಡ್‌ಗೆ ಮಹತ್ವದ ಹೊಣೆ?

ತರಬೇತು ವಿಭಾಗ ಪುನರೂಪಿಸುವ ಜವಾಬ್ದಾರಿ?

Team Udayavani, Apr 3, 2019, 5:45 AM IST

Udayavani Kannada Newspaper

ಬೆಂಗಳೂರು: ಭಾರತ ಕ್ರಿಕೆಟ್‌ ಕಂಡ ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾಗಿರುವ ರಾಹುಲ್‌ ದ್ರಾವಿಡ್‌, ಪ್ರಸ್ತುತ ಭಾರತ 19 ವಯೋಮಿತಿ ಹಾಗೂ ಎ ತಂಡದ ತರಬೇತುದಾರ. ಕಿರಿಯರನ್ನು ತರಬೇತುಗೊಳಿಸುವ ಕಾರ್ಯದಲ್ಲಿ ಯಶಸ್ವಿಯಾಗಿರುವ ಅವರಿಗೆ, ಇನ್ನೊಂದು ಮಹತ್ತರ ಹೊಣೆಗಾರಿಕೆಯನ್ನು ಬಿಸಿಸಿಐ ನೀಡಲಿದೆ ಎಂದು ಮೂಲಗಳು ತಿಳಿಸಿವೆ. ಅದು ಯಾವ ಜವಾಬ್ದಾರಿ ಎನ್ನುವುದು ಇನ್ನೂ ಖಚಿತಗೊಂಡಿಲ್ಲ. ಮೂಲಗಳ ಪ್ರಕಾರ, ಬೆಂಗಳೂರಿನ ಚಿನ್ನಸ್ವಾಮಿಯಲ್ಲಿರುವ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಯ ತರಬೇತು ವಿಭಾಗವನ್ನು ಪುನರೂಪಿಸುವ ಹೊಣೆಗಾರಿಕೆ ಸಿಗಲಿದೆ.

ಎನ್‌ಸಿಎ ತರಬೇತು ವಿಭಾಗವನ್ನು ಸಂಪೂರ್ಣ ಸಿದ್ಧಪಡಿಸುವುದು, ಹೊಸ ತರಬೇತುದಾರರನ್ನು ನೇಮಕ ಮಾಡಿಕೊಳ್ಳುವುದು ಇದೆಲ್ಲ ರಾಹುಲ್‌ ಹೊಣೆಗಾರಿಕೆಯಾಗಿರಬಹುದು. ದೇಶಾದ್ಯಂತ ವಲಯಾಧಾರಿತವಾಗಿ
ದ್ರಾವಿಡ್‌ ತರಬೇತುದಾರರನ್ನು ಸಿದ್ಧಪಡಿಸಲಿದ್ದಾರೆ. ಒಟ್ಟಾರೆ ಮುಂದಿನ ದಿನಗಳಲ್ಲಿ ಎನ್‌ಸಿಎ ದ್ರಾವಿಡ್‌ ಕೂಸಾಗಿರಲಿದೆ ಎನ್ನುವುದು ಈ ಬೆಳವಣಿಗೆಯ ಬಗ್ಗೆ ಮಾಹಿತಿ ಹೊಂದಿರುವ ಮೂಲಗಳ ಹೇಳಿಕೆ. ಹೀಗೆಂದು ಆಂಗ್ಲ ಮಾಧ್ಯಮಗಳಲ್ಲಿ ವರದಿಯಾಗಿದೆ. ರಾಹುಲ್‌ ದ್ರಾವಿಡ್‌ ಸಾಮರ್ಥ್ಯಕ್ಕೆ ಈ ಜವಾಬ್ದಾರಿ ಬಹಳ ದೊಡ್ಡದ್ದೇನಲ್ಲ. ಭಾರತ ಮಾತ್ರವೇಕೆ ವಿಶ್ವ ಕಂಡ ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟಿಗರ ಸಾಲಿನಲ್ಲಿ ದ್ರಾವಿಡ್‌ ಕೂಡ ಇದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ ಅವರಾಡಿದ ಅಸಾಮಾನ್ಯ ಇನಿಂಗ್ಸ್‌ಗಳನ್ನು, ಅವರನ್ನು ಬಿಟ್ಟರೆ ದೇವರು ಮಾತ್ರ ಆಡಲು ಸಾಧ್ಯವೆಂದು ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಸೌರವ್‌ ಗಂಗೂಲಿ ಒಮ್ಮೆ ವರ್ಣಿಸಿದ್ದರು. ಗಂಗೂಲಿ ನಾಯಕತ್ವದಲ್ಲಿದ್ದಾಗ ಭಾರತ ತಂಡ ಕೋಲ್ಕತ
ಮತ್ತು ಆಸ್ಟ್ರೇಲಿಯದಲ್ಲಿ ಟೆಸ್ಟ್‌ ಪಂದ್ಯವನ್ನು ಯಾರೂ ಕಲ್ಪನೆ ಮಾಡದ ರೀತಿಯಲ್ಲಿ ಗೆದ್ದುಕೊಂಡಿತ್ತು. ಇದಕ್ಕೆ ದ್ರಾವಿಡ್‌ ಬ್ಯಾಟಿಂಗ್‌ ನಿರ್ಣಾಯಕ ಕಾರಣವಾಗಿತ್ತು.

ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾದ ನಂತರ ಕೆಲ
ಐಪಿಎಲ್‌ ಆವೃತ್ತಿಗಳಲ್ಲಿ ಕಾಣಿಸಿಕೊಂಡಿದ್ದರು. ಆರ್‌ಸಿಬಿ ತಂಡದಿಂದ ಹೊರಬಿದ್ದ ನಂತರ, ರಾಜಸ್ಥಾನ್‌ ತಂಡವನ್ನು ಕೂಡಿ  ಕೊಂಡು ಸರಾಸರಿ ಯಶಸ್ಸು ಸಾಧಿಸಿದರು. ದೆಹಲಿ ತಂಡದ ಮೆಂಟರ್‌ ಆಗಿಯೂ ಇದ್ದರು. ಮುಂದೆ ಭಾರತ 19 ವಯೋಮಿತಿ, ಎ ತಂಡದ ತರಬೇತುದಾರರಾದರು.
ಅವರ ಅವಧಿಯಲ್ಲಿ ಭಾರತ 19 ವಯೋಮಿತಿ ತಂಡ 2016ರ ವಿಶ್ವಕಪ್‌ ಫೈನಲ್‌ಗೇರಿ ಸೋತಿದ್ದರೆ, 2018ರಲ್ಲಿ ವಿಶ್ವಕಪ್‌ ಗೆದ್ದಿತ್ತು. ಭಾರತ ಎ ತಂಡವೂ ವಿಶ್ವದ ವಿವಿಧ ರಾಷ್ಟ್ರಗಳಿಗೆ ಪ್ರವಾಸ ಹೋಗಿ ಯಶಸ್ವಿಯಾಗಿತ್ತು. ಅವರ ಕಾಲದಲ್ಲಿ ಬಂದ ನಿಯಮವೊಂದು ಅಂತಾರಾಷ್ಟ್ರೀಯ ತಂಡದ ಆಯ್ಕೆಯಲ್ಲಿ ಮಹತ್ವದ ಪಾತ್ರವಹಿಸಿದೆ. ಎಷ್ಟೇ ಉತ್ತಮವಾಗಿ ಆಡುವ ಕ್ರಿಕೆಟಿಗರಾಗಿದ್ದರೂ, ಅವರು ಭಾರತ ಎ ತಂಡದಲ್ಲಿ ಆಡಿ ಅನುಭವಿಗಳಿಸಿದ ನಂತರವೇ ಹಿರಿಯರ ತಂಡಕ್ಕೆ ಆಯ್ಕೆಯಾಗಬೇಕು ಎನ್ನುವುದು ಅವರ ಅಭಿಪ್ರಾಯ. ಅದನ್ನು ಬಿಸಿಸಿಐ ಗಂಭೀರವಾಗಿ ಅದರಂತೆ ಆಯ್ಕೆ ಪ್ರಕ್ರಿಯೆ ನಡೆಸುತ್ತಿದೆ. ಇದರಿಂದ ಕ್ರಿಕೆಟಿಗರಿಗೂ ಲಾಭವಾಗಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.