Ranchi Test ನಾಟಕೀಯ ತಿರುವು; ರಾಹುಲ್‌ ಲಭ್ಯರಿಲ್ಲ: ತಂಡಕ್ಕೆ ಮುಕೇಶ್‌ ವಾಪಸ್‌


Team Udayavani, Feb 22, 2024, 6:00 AM IST

1-rahul

ರಾಂಚಿ: ಟೀಮ್‌ ಇಂಡಿಯಾದ ಟೆಸ್ಟ್‌ ತಂಡ ಮತ್ತೂಂದು ನಾಟಕೀಯ ತಿರುವು ಪಡೆದಿದೆ. ರಾಂಚಿಯಲ್ಲಿ ನಡೆಯುವ 4ನೇ ಟೆಸ್ಟ್‌ ಪಂದ್ಯದಲ್ಲಿ ಆಡುವುದು ಬಹುತೇಕ ಖಚಿತ ಎಂಬಂತಿದ್ದ ಕೆ.ಎಲ್‌. ರಾಹುಲ್‌ ಈಗ ಅಧಿಕೃತವಾಗಿ ಹೊರಬಿದ್ದಿದ್ದಾರೆ. ಅವರು ತೊಡೆ ಸಂದು ನೋವಿನಿಂದ ಸಂಪೂರ್ಣ ಚೇತರಿಸಿ ಕೊಂಡಿಲ್ಲ ಎಂಬುದಾಗಿ ಬಿಸಿಸಿಐ ತಿಳಿಸಿದೆ.

ರಾಹುಲ್‌ ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಷ್ಟೇ ಆಡಿದ್ದರು. ಇಲ್ಲಿ ಅವರ ಗಳಿಕೆ 86 ಮತ್ತು 22 ರನ್‌. ರಾಜ್‌ಕೋಟ್‌ ಟೆಸ್ಟ್‌ ಪಂದ್ಯಕ್ಕೂ ಮುನ್ನ ಪ್ರಕಟನೆಯೊಂದನ್ನು ನೀಡಿದ ಬಿಸಿಸಿಐ, ಬೆಂಗಳೂರಿನ ನ್ಯಾಶನಲ್‌ ಕ್ರಿಕೆಟ್‌ ಅಕಾಡೆಮಿಯಲ್ಲಿರುವ ರಾಹುಲ್‌ ಶೇ. 90ರಷ್ಟು ಚೇತರಿಕೆ ಕಂಡಿದ್ದಾರೆ ಎಂದು ತಿಳಿಸಿತ್ತು. ರಾಂಚಿ ಟೆಸ್ಟ್‌ ವೇಳೆ ಸಂಪೂರ್ಣ ಫಿಟ್‌ನೆಸ್‌ಗೆ ಮರಳುವ ಅವರು ತಂಡಕ್ಕೆ ಮರಳಲಿ ದ್ದಾರೆ ಎಂಬ ರೀತಿಯಲ್ಲಿ ವರದಿಯಾಗಿತ್ತು. ಆದರೀಗ ರಾಹುಲ್‌ ರಾಂಚಿ ಟೆಸ್ಟ್‌ನಿಂದಲೂ ಬೇರ್ಪಡಲಿದ್ದಾರೆ. ಇದರೊಂದಿಗೆ ಅವರು ಈ ಸರಣಿಯ ಸತತ 3 ಟೆಸ್ಟ್‌ ಪಂದ್ಯಗಳನ್ನು ಕಳೆದುಕೊಂಡಂತಾಗುತ್ತದೆ. ಫಿಟ್‌ ಆದರಷ್ಟೇ ಧರ್ಮಶಾಲಾದ ಅಂತಿಮ ಟೆಸ್ಟ್‌ನಲ್ಲಿ ಆಡುವರು ಎಂದೂ ಬಿಸಿಸಿಐ ತಿಳಿಸಿದೆ.
ಬುಮ್ರಾಗೆ ರೆಸ್ಟ್‌
ನಿರೀಕ್ಷೆಯಂತೆ ಪ್ರಧಾನ ವೇಗಿ ಜಸ್‌ಪ್ರೀತ್‌ ಬುಮ್ರಾ ಆವರಿಗೆ ವಿಶ್ರಾಂತಿ ನೀಡಲಾಗಿದೆ. ಕಳೆದ ಕೆಲವು ಸಮಯದಿಂದ ಸತತವಾಗಿ ಆಡುತ್ತಲೇ ಇರುವ ಅವರಿಗೆ ಇದೊಂದು ಪುಟ್ಟ ಬ್ರೇಕ್‌ ಆಗಿದೆ. ಮುಂಬರುವ ಐಪಿಎಲ್‌ ಹಾಗೂ ಟಿ20 ವಿಶ್ವಕಪ್‌ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

ಇಂಗ್ಲೆಂಡ್‌ ಎದುರಿನ ಸರಣಿಯಲ್ಲಿ ಈಗಾಗಲೇ 80.5 ಓವರ್‌ ಎಸೆದಿರುವ ಬುಮ್ರಾ, 13.64ರ ಸರಾಸರಿಯಲ್ಲಿ ಸರ್ವಾಧಿಕ 17 ವಿಕೆಟ್‌ ಕೆಡವಿದ್ದಾರೆ.

ಬುಮ್ರಾ ಸ್ಥಾನಕ್ಕೆ ಬಂಗಾಲದ ವೇಗಿ ಮುಕೇಶ್‌ ಕುಮಾರ್‌ ಅವರನ್ನು ಮರಳಿ ಕರೆಸಲಾಗಿದೆ. 2ನೇ ಟೆಸ್ಟ್‌ ಪಂದ್ಯದ ಬಳಿಕ ಮುಕೇಶ್‌ ಅವರನ್ನು ರಣಜಿ ತಂಡಕ್ಕೆ ಬಿಟ್ಟುಕೊಡಲಾಗಿತ್ತು. ಬಿಹಾರ ವಿರುದ್ಧ ಅಮೋಘ ಪ್ರದರ್ಶನ ನೀಡಿದ ಅವರು 50 ರನ್ನಿಗೆ 10 ವಿಕೆಟ್‌ ಉಡಾಯಿಸಿ ಜೀವನಶ್ರೇಷ್ಠ ಪ್ರದರ್ಶನ ನೀಡಿದ್ದರು.

4ನೇ ಟೆಸ್ಟ್‌ಗೆ ಭಾರತ ತಂಡ: ರೋಹಿತ್‌ ಶರ್ಮ (ನಾಯಕ), ಯಶಸ್ವಿ ಜೈಸ್ವಾಲ್‌, ಶುಭಮನ್‌ ಗಿಲ್‌, ರಜತ್‌ ಪಾಟಿದಾರ್‌, ಸರ್ಫರಾಜ್‌ ಖಾನ್‌, ದೇವದತ್ತ ಪಡಿಕ್ಕಲ್‌, ರವೀಂದ್ರ ಜಡೇಜ, ಆರ್‌. ಅಶ್ವಿ‌ನ್‌, ಅಕ್ಷರ್‌ ಪಟೇಲ್‌, ಕುಲದೀಪ್‌ ಯಾದವ್‌, ವಾಷಿಂಗ್ಟನ್‌ ಸುಂದರ್‌, ಧ್ರುವ ಜುರೆಲ್‌, ಕೆ.ಎಸ್‌. ಭರತ್‌, ಮೊಹಮ್ಮದ್‌ ಸಿರಾಜ್‌, ಮುಕೇಶ್‌ ಕುಮಾರ್‌. ಆಕಾಶ್‌ ದೀಪ್‌.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.