ಜ್ವರಪೀಡಿತ ರಾಹುಲ್‌ ಗಾಲೆ ಟೆಸ್ಟ್‌ ಪಂದ್ಯಕ್ಕಿಲ್ಲ


Team Udayavani, Jul 25, 2017, 8:50 AM IST

KL.jpg

ಕೊಲಂಬೊ: ಭುಜದ ನೋವಿನಿಂದ ಚೇತರಿಸಿಕೊಂಡು 4 ತಿಂಗಳ ಬಳಿಕ ಟೀಮ್‌ ಇಂಡಿಯಾಕ್ಕೆ ಬಂದ ಆರಂಭಕಾರ ಕೆ.ಎಲ್‌. ರಾಹುಲ್‌ ಈಗ ಮತ್ತೂಂದು ಸಮಸ್ಯೆಗೆ ಸಿಲುಕಿದ್ದಾರೆ. ಅವರು ತೀವ್ರ ಜ್ವರದಿಂದ ನರಳುತ್ತಿದ್ದು, ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆಡುವುದಿಲ್ಲ ಎಂದು ಬಿಸಿಸಿಐ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.

ಸರಣಿಯ ಪ್ರಥಮ ಟೆಸ್ಟ್‌ ಬುಧವಾರದಿಂದ ಗಾಲೆಯಲ್ಲಿ ಆರಂಭವಾಗಲಿದೆ. ತಂಡದ ಉಳಿದ ಸದ್ಯಸರೆಲ್ಲ ಸೋಮವಾರ 3 ಗಂಟೆಗಳ ಬಸ್‌ ಪ್ರಯಾಣದ ಮೂಲಕ ಕೊಲಂಬೋದಿಂದ ಗಾಲೆ ತಲುಪಿದರೂ ರಾಹುಲ್‌ ಮಾತ್ರ ವೈದ್ಯಕೀಯ ತಪಾಸಣೆ ಹಾಗೂ ವಿಶ್ರಾಂತಿ ಪಡೆಯುವ ಸಲುವಾಗಿ ಕೊಲಂಬೋದಲ್ಲೇ ಉಳಿದಿದ್ದಾರೆ.

ಆರಂಭಿಕ ವರದಿಗಳ ಪ್ರಕಾರ ರಾಹುಲ್‌ ನ್ಯುಮೋನಿಯಾ ಅಥವಾ ಡೆಂಗ್ಯೂಗೆ ಒಳಗಾಗಿದ್ದಾರೆಂದು ಶಂಕಿಸಲಾಗಿತ್ತು. ಆದರೆ ಇದು “ವೈರಲ್‌ ಫಿವರ್‌’ ಎಂಬುದಾಗಿ ತಂಡದ ವೈದ್ಯಕೀಯ ವರದಿ ತಿಳಿಸಿದೆ.

ರಾಹುಲ್‌ ಆಸ್ಟ್ರೇಲಿಯ ವಿರುದ್ಧ ಧರ್ಮಶಾಲಾದಲ್ಲಿ ಕೊನೆಯ ಸಲ ಟೆಸ್ಟ್‌ ಆಡಿದ್ದರು. ಅನಂತರ ಭುಜದ ಶಸ್ತ್ರಚಿಕಿತ್ಸೆಯಿಂದ ಐಪಿಎಲ್‌ ಮತ್ತು ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿಯಿಂದ ಹೊರಗುಳಿದಿದ್ದರು. ಆದರೆ ಶ್ರೀಲಂಕಾ ಅಧ್ಯಕ್ಷರ ಬಳಗದ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆಡಿದ್ದ ರಾಹುಲ್‌ 58 ಎಸೆತಗಳಿಂದ 54 ರನ್‌ ಬಾರಿಸಿ ತಮ್ಮ ಫಾರ್ಮ್ಗೆ ಯಾವುದೇ ಧಕ್ಕೆ ಆಗಿಲ್ಲ ಎಂಬುದನ್ನು ಸಾಬೀತುಪಡಿಸಿದ್ದರು. ಜತೆಗೆ ತಾನು ಫಿಟ್‌ನೆಸ್‌ ಸಮಸ್ಯೆಯಿಂದ ಪೂರ್ತಿ ಮುಕ್ತನಾಗಿಲ್ಲ ಎಂಬ ಸೂಚನೆಯನ್ನೂ ರವಾನಿಸಿದ್ದರು.

ರಾಹುಲ್‌ ಗೈರಿನಿಂದಾಗಿ ಭಾರತ ಇಬ್ಬರು ಆರಂಭಿಕರ ಸೇವೆಯಿಂದ ವಂಚಿತವಾದಂತಾಗಿದೆ. ಇದಕ್ಕೂ ಮುನ್ನ ಲಂಕಾ ಪ್ರವಾಸಕ್ಕೆ ಆಯ್ಕೆಯಾಗಿದ್ದ ಮುರಳಿ ವಿಜಯ್‌ ಗಾಯಾಳಾಗಿ ತಂಡದಿಂದ ಬೇರ್ಪಟ್ಟಿದ್ದರು. ವಿಜಯ್‌ ಬದಲು ಶಿಖರ್‌ ಧವನ್‌ ಅವರನ್ನು ಸೇರಿಸಿಕೊಳ್ಳಲಾಗಿತ್ತು. ಗಾಲೆ ಟೆಸ್ಟ್‌ನಲ್ಲಿ ಶಿಖರ್‌ ಧವನ್‌ ಮತ್ತು ಅಭಿನವ್‌ ಮುಕುಂದ್‌ ಭಾರತದ ಇನ್ನಿಂಗ್ಸ್‌ ಆರಂಭಿಸುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.