ಇನ್ನಿಂಗ್ಸ್‌ ಮುನ್ನಡೆಗಾಗಿ ರೈಲ್ವೇಸ್‌ ಹೋರಾಟ


Team Udayavani, Nov 27, 2017, 12:16 PM IST

27-24.jpg

ಹೊಸದಿಲ್ಲಿ: ರಣಜಿ ಟ್ರೋಫಿ ಕ್ರಿಕೆಟ್‌ ಕೂಟದ ಅಂತಿಮ ಲೀಗ್‌ ಪಂದ್ಯದಲ್ಲಿ ವಿನಯ್‌ ಕುಮಾರ್‌ ನೇತೃತ್ವದ ಕರ್ನಾಟಕ ಪಡೆ ನೀಡಿರುವ ಸವಾಲಿಗೆ ರೈಲ್ವೇಸ್‌ ದಿಟ್ಟ ಉತ್ತರ ನೀಡುತ್ತಿದೆ. ದ್ವಿತೀಯ ದಿನದಾಟದ ಅಂತ್ಯಕ್ಕೆ ರೈಲ್ವೇಸ್‌ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 4 ವಿಕೆಟಿಗೆ 241 ರನ್‌ ಗಳಿಸಿದೆ. ರೈಲ್ವೇಸ್‌ ಇನ್ನಿಂಗ್ಸ್‌ ಮುನ್ನಡೆ ಪಡೆಯಬೇಕಾದರೆ ಇನ್ನು ಉಳಿದ 6 ವಿಕೆಟ್‌ನಲ್ಲಿ 194 ರನ್‌ ಬಾರಿಸಬೇಕಾಗಿದೆ.

ಮೊದಲ ದಿನದ ಅಂತ್ಯಕ್ಕೆ ಕರ್ನಾಟಕ 6 ವಿಕೆಟ್‌ಗೆ 355 ರನ್‌ ಬಾರಿಸಿ ಬ್ಯಾಟಿಂಗ್‌ ಕಾಯ್ದುಕೊಂಡಿತ್ತು. ರವಿವಾರ ಬ್ಯಾಟಿಂಗ್‌ ಮುಂದುವರಿಸಿದ ಕರ್ನಾಟಕ ತನ್ನ ಮೊತ್ತವನ್ನು 434 ರನ್ನಿಗೆ ವಿಸ್ತರಿಸಿತು. ಶ್ರೇಯಸ್‌, ಮಿಥುನ್‌ ವೇಗದ ಆಟ: ಒಂದು ಹಂತದಲ್ಲಿ ಕರ್ನಾಟಕ ತಂಡ 9 ವಿಕೆಟ್‌ಗೆ 388 ರನ್‌ ಬಾರಿಸಿ ಇನ್ನೇನು 400 ಗಡಿ ದಾಟುವುದು ಅನುಮಾನದಲ್ಲಿತ್ತು. ಆದರೆ ಶ್ರೇಯಸ್‌ ಗೋಪಾಲ್‌ ಮತ್ತು ಅಭಿಮನ್ಯು ಮಿಥುನ್‌ ಅಂತಿಮ ವಿಕೆಟಿಗೆ 46 ರನ್‌ಗಳ ಜತೆಯಾಟ ನೀಡಿದರು. ಆದರೆ ಮಿಥುನ್‌ ಅವರನ್ನು ಔಟ್‌ ಮಾಡುವ ಮೂಲಕ ಅಮಿತ್‌ ಮಿಶ್ರಾ ಈ ಜೋಡಿಯನ್ನು ಬೇರ್ಪಡಿಸಿದರು. ಶ್ರೇಯಸ್‌ 65 ಎಸೆತದಲ್ಲಿ ಅಜೇಯ 44 ರನ್‌ ಬಾರಿಸಿದರು. ಮಿಥುನ್‌ 30 ಎಸೆತದಲ್ಲಿ 31 ರನ್‌ ಬಾರಿಸಿ ಔಟ್‌ ಆದರು.

ಆರಂಭದಲ್ಲಿ ಎಡವಿದ ರೈಲ್ವೇಸ್‌: ಇನ್ನಿಂಗ್ಸ್‌ ಆರಂಭಿಸಿದ ರೈಲ್ವೇಸ್‌ಗೆ ಕರ್ನಾಟಕ ಬೌಲರ್‌ಗಳು ಆರಂಭದಲ್ಲಿಯೇ ಆಘಾತ ನೀಡಿದ್ದರು. ಶಿವಕಾಂತ್‌ ಶುಕ್ಲಾ (28 ರನ್‌), ಮ್ರುನಲ್‌ ದೇವಧರ್‌ (7 ರನ್‌), ಪ್ರಥಮ್‌ ಸಿಂಗ್‌ (35 ರನ್‌), ನಿತಿನ್‌ ಭಿಲ್ಲೆ (7 ರನ್‌) ಅಲ್ಪ ಮೊತ್ತಕ್ಕೆ ವಿಕೆಟ್‌ ಕಳೆದುಕೊಂಡು ಪೆವಿಲಿಯನ್‌ ಸೇರಿದರು. ಈ ಹಂತದಲ್ಲಿ ತಂಡದ ಮೊತ್ತ 4 ವಿಕೆಟಿಗೆ 83 ರನ್‌. ಮಿಥುನ್‌ ಮತ್ತು ಕೆ.ಗೌತಮ್‌ ತಲಾ 2 ವಿಕೆಟ್‌ ಪಡೆದು ಭರ್ಜರಿ ಆಘಾತ ನೀಡಿದ್ದರು.

ರೈಲ್ವೇಸ್‌ ಹಳಿ ಹತ್ತಿಸಿದ ಘೋಷ್‌, ರಾವತ್‌: ಹಳಿ ತಪ್ಪಿದ ರೈಲ್ವೇಸ್‌ ತಂಡವನ್ನು ಪುನಃ ಹಳಿಗೆ ತಂದ ಕೀರ್ತಿ ಅರಿಂದಮ್‌ ಘೋಷ್‌ ಮತ್ತು ಮಹೇಶ್‌ ರಾವತ್‌ಗೆ ಸೇರುತ್ತದೆ. 5ನೇ ವಿಕೆಟಿಗೆ ಈ ಜೋಡಿ ಕರ್ನಾಟಕ ಬೌಲರ್‌ಗಳಿಗೆ ದಿಟ್ಟ ಪ್ರತ್ಯುತ್ತರ ನೀಡಿದರು. ಆರಂಭದಲ್ಲಿ ನಿಧಾನವಾಗಿ ಆಡಿದ ಈ ಜೋಡಿ ಅನಂತರ ರನ್‌ ವೇಗವನ್ನು ಹೆಚ್ಚಿಸಿದರು. 

ಅಂತಿಮವಾಗಿ ಈ ಜೋಡಿ 158 ರನ್‌ಗಳ ಜತೆಯಾಟ ಆಡಿ 3ನೇ ದಿನಕ್ಕೆ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ. ಘೋಷ್‌ 133 ಎಸೆತದಲ್ಲಿ 10 ಬೌಂಡರಿ, 2 ಸಿಕ್ಸರ್‌ ಸೇರಿದಂತೆ ಅಜೇಯ 70 ರನ್‌ ಬಾರಿಸಿದ್ದಾರೆ. ರಾವತ್‌ 97 ಎಸೆತದಲ್ಲಿ 10 ಬೌಂಡರಿ, 2 ಸಿಕ್ಸರ್‌ ಸೇರಿದಂತೆ ಅಜೇಯ 86 ರನ್‌ ಬಾರಿಸಿದ್ದಾರೆ.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.