
ಗಿಲ್ -ಸೂರ್ಯಕುಮಾರ್ ಭರ್ಜರಿ ಆಟ: ಮಳೆಯಿಂದ ರದ್ದಾದ 2ನೇ ಏಕದಿನ ಪಂದ್ಯ
Team Udayavani, Nov 27, 2022, 3:36 PM IST

ಹ್ಯಾಮಿಲ್ಟನ್: ಇಲ್ಲಿ ಭಾನುವಾರ ನಡೆದ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಎರಡನೇ ಏಕದಿನ ಪಂದ್ಯ ಪ್ರತಿಕೂಲ ಹವಾಮಾನದಿಂದ ರದ್ದಾಗಿದೆ. ಸೊಗಸಾದ ಶುಭ್ ಮನ್ ಗಿಲ್ ಮತ್ತು ಸೂರ್ಯಕುಮಾರ್ ಯಾದವ್ ಸ್ವಲ್ಪ ಸಮಯದವರೆಗೆ ಪ್ರೇಕ್ಷಕರನ್ನು ರಂಜಿಸಿದರು.
ನಿಗದಿತ ಕಟ್-ಆಫ್ ಸಮಯದೊಳಗೆ ಪ್ರತಿ ತಂಡಕ್ಕೆ ಕನಿಷ್ಠ 20-ಓವರ್ ಪಂದ್ಯವನ್ನು ನಡೆಸುವ ಸಾಧ್ಯತೆಯಿಲ್ಲದ ಕಾರಣ ಎರಡನೇ ಬಾರಿ ಪಂದ್ಯ ನಿಲ್ಲಿಸಿದಾಗ ಭಾರತ 12.5 ಓವರ್ಗಳಲ್ಲಿ 1 ವಿಕೆಟ್ಗೆ 89 ರನ್ ಗಳಿಸಿತ್ತು.
ಮೊದಲ ಬಾರಿ ಮಳೆ ಅಡ್ಡಿಯಾದಾಗ ನಾಲ್ಕು ಗಂಟೆಗಳ ವಿರಾಮವನ್ನು ಉಂಟುಮಾಡಿದ ಕಾರಣ ಪಂದ್ಯವನ್ನು 29-ಓವರ್ಗಳಿಗೆ ಇಳಿಸಲಾಯಿತು. ಆ ವೇಳೆಗೆ ಭಾರತ ಐದನೇ ಓವರ್ನಲ್ಲಿ ವಿಕೆಟ್ ನಷ್ಟವಿಲ್ಲದೆ 22 ರನ್ ಗಳಿಸಿತ್ತು. ಪುನರಾರಂಭದ ನಂತರ ನಾಯಕ ಶಿಖರ್ ಧವನ್ 10 ಎಸೆತಗಳಲ್ಲಿ 3 ರನ್ ಗಳಿಸಿ ಔಟಾದರು.
ಗಿಲ್ ಔಟಾಗದೆ 45( 42 ಎಸೆತ) ಮತ್ತು ಸೂರ್ಯಕುಮಾರ್ ಔಟಾಗದೆ 34( 25 ಎಸೆತ) ಎಂಟು ಓವರ್ಗಳಲ್ಲಿ 66 ರನ್ ಜತೆಯಾಟವಾಡಿದ್ದರು. ಆ ವೇಳೆ ಮಳೆ ಪಂದ್ಯವನ್ನು ನುಂಗಿತು.
ನ್ಯೂಜಿ ಲ್ಯಾಂಡ್ ವಿರುದ್ಧದ ಸರಣಿಯು ಇತ್ತೀಚಿನ ದಿನಗಳಲ್ಲಿ ಹೆಚ್ಚು ಮಳೆಯಿಂದ ಅಡ್ಡಿಪಡಿಸಿದ ಸರಣಿಗಳಲ್ಲಿ ಒಂದಾಗಿದೆ. ವೆಲ್ಲಿಂಗ್ಟನ್ನಲ್ಲಿ ನಡೆದ ಮೊದಲ ಟಿ20 ಪಂದ್ಯವೂ ಒಂದು ಚೆಂಡಿನ ಎಸೆತವನ್ನು ಕಾಣದೆಯೇ ಕೈಬಿಡಲಾಗಿತ್ತು. ನೇಪಿಯರ್ನಲ್ಲಿ ನಡೆದ ಮೂರನೇ ಟ್ವೆಂಟಿ-20 ಪಂದ್ಯ ಕೂಡ ಮಳೆಯಿಂದ ಹಾನಿಗೊಳಗಾಗಿತ್ತು. ಏಕದಿನ ಸರಣಿಯ ಅಂತಿಮ ಪಂದ್ಯ ನವೆಂಬರ್ 30 ರಂದು ಕ್ರೈಸ್ಟ್ಚರ್ಚ್ನಲ್ಲಿ ನಡೆಯಲಿದೆ. ಮೊದಲ ಪಂದ್ಯವನ್ನು ನ್ಯೂಜಿಲ್ಯಾಂಡ್ ಗೆದ್ದಿದೆ.
ಅಂತಾರಾಷ್ಟ್ರೀಯ ತಂಡಗಳು ಸಾಮಾನ್ಯವಾಗಿ ಡಿಸೆಂಬರ್ ಮತ್ತು ಮಾರ್ಚ್ ನಡುವೆ ನ್ಯೂಜಿ ಲ್ಯಾಂಡ್ ಪ್ರವಾಸ ಮಾಡುತ್ತವೆ ಮತ್ತು ಹವಾಮಾನದ ವ್ಯತ್ಯಾಸಗಳು ಕಾರಣವಾಗದ ಕಳಪೆ ವೇಳಾಪಟ್ಟಿ, ಸೀಮಿತ-ಓವರ್ಗಳ ಸರಣಿಯನ್ನು ಹಾಳುಮಾಡಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿರಾಟ್, ಸಚಿನ್, ಗಾವಸ್ಕರ್ ರಂತಹ ಆಟಗಾರರನ್ನು ಮತ್ತೆ ತಯಾರಿಸಲು ಸಾಧ್ಯವಿಲ್ಲ: ಕೋಚ್ ಗುರುಚರಣ್ ಸಿಂಗ್

ಇವನಂತಹ ಆಟಗಾರನನ್ನು ನೋಡಿಲ್ಲ..: ಭಾರತೀಯನನ್ನು ಹಾಡಿ ಹೊಗಳಿದ ರಿಕಿ ಪಾಂಟಿಂಗ್

ಐಸಿಸಿ ವನಿತಾ ಟಿ20 ವಿಶ್ವಕಪ್: ಮತ್ತೊಂದು ಎತ್ತರಕ್ಕೆ ತಲುಪಿದ ವನಿತಾ ಕ್ರಿಕೆಟ್

ಆಸ್ಟ್ರೇಲಿಯನ್ ಓಪನ್: ನೊವಾಕ್ ಜೊಕೋವಿಕ್-ಸಿಸಿಪಸ್ ಪ್ರಶಸ್ತಿ ರೇಸ್

ಇಂಡೋನೇಷ್ಯಾ ಮಾಸ್ಟರ್: ಲಕ್ಷ್ಯ ಸೇನ್ ಪರಾಭವ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಕ್ಯಾಮೇನಹಳ್ಳಿ ಶ್ರೀಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವಕ್ಕೆ 25 ಸಾವಿರಕ್ಕೂ ಅಧಿಕ ಭಕ್ತರ ದಂಡು

ಸಮಾಜದಲ್ಲಿ ತುಳಿತಕ್ಕೆ ಒಳಗಾದ ಪ್ರತಿ ವರ್ಗದ ಅಭಿವೃದ್ಧಿಗೆ ಬದ್ಧ: ಮೋದಿ

ಬಸ್ ಚಾಲಕನ ವೇಗಕ್ಕೆ ಕಳಚಿ ಹೋದ ಚಕ್ರ: ಅಪಾಯದಿಂದ ಪಾರಾದ ಪ್ರಯಾಣಿಕರು

ಕುಂದಾಪುರ: ತಾಯಿ ಜೊತೆ ಆಸ್ಪತ್ರೆಗೆ ಬಂದಿದ್ದ ವ್ಯಕ್ತಿ ನದಿಗೆ ಹಾರಿ ಆತ್ಮಹತ್ಯೆ

ಅಂಬೇಡ್ಕರ್ ಪ್ರತಿಮೆ ಭಗ್ನ: ಪೊಲೀಸರಿಂದ ವ್ಯಕ್ತಿ ಬಂಧನ