![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಏಶ್ಯನ್ ಗೇಮ್ಸ್ ಟೆನ್ನಿಸ್ : ಭಾರತದ ಅಂಕಿತಾಗೆ ಕಂಚು
Team Udayavani, Aug 23, 2018, 2:14 PM IST
![ankitha-raina.jpg](https://www.udayavani.com/wp-content/uploads/2018/08/23/ankitha-raina-620x368.jpg)
ಪಾಲೆಂಬಾಗ್ : ಜಕಾರ್ತದಲ್ಲಿ ನಡೆಯುತ್ತಿರುವ 18ನೇ ಏಶ್ಯಾಡ್ ಗೇಮ್ಸ್ ನಲ್ಲಿ ಗುರುವಾರವೂ ಭಾರತದ ಪದಕ ಬೇಟೆ ಮುಂದುವರಿದಿದೆ. ಮಹಿಳಾ ಟೆನ್ನಿಸ್ ಸಿಂಗಲ್ಸ್ ವಿಭಾಗದಲ್ಲಿ ಅಂಕಿತಾ ರೈನಾ ಕಂಚಿನ ಪದಕ ಗೆದ್ದಿದ್ದಾರೆ.
ಇಂದು ಬೆಳಿಗ್ಗೆ ನಡೆದ ಸಿಂಗಲ್ಸ್ ವಿಭಾಗದ ಸೆಮಿ ಫೈನಲ್ ಪಂದ್ಯಾಟದಲ್ಲಿ ಭಾರತದ ಅಗ್ರ ಕ್ರಮಾಂಕದ ಸಿಂಗಲ್ಸ್ ಆಟಗಾರ್ತಿ ಅಂಕಿತಾ ಚೀನಾದ ಶುಯಿ ಜಾಂಗ್ ಅವರಿಗೆ 4-6,6-7 (6) ಸೆಟ್ಗಳ ಅಂತರದಿಂದ ಪರಾಭವಗೊಂಡರು.
ಅಂಕಿತಾ ರೈನಾ ಏಶ್ಯಾನ್ ಗೇಮ್ಸ್ ಇತಿಹಾಸದಲ್ಲಿ ಸಿಂಗಲ್ಸ್ ವಿಭಾಗದಲ್ಲಿ ಪದಕ ಗೆದ್ದ ಎರಡನೇ ಭಾರತೀಯ ಆಟಗಾರ್ತಿ. ಈ ಮೊದಲು ಸಾನಿಯಾ ಮಿರ್ಜಾ 2006ರಲ್ಲಿ ಬೆಳ್ಳಿ ಮತ್ತು 2010ರಲ್ಲಿ ಕಂಚಿನ ಪದಕ ಗೆದ್ದಿದ್ದರು.
ಅಹಮದಾಬಾದ್ ಮೂಲದ 25ರ ಹರೆಯದ ಅಂಕಿತಾ ರೈನಾ ಈವರೆಗೆ ಅಂತಾರಾಷ್ತ್ರೀಯ ಮಟ್ಟದಲ್ಲಿ 6 ಸಿಂಗಲ್ಸ್ ಮತ್ತು 13 ಡಬಲ್ಸ್ ವಿಭಾಗದ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.
ಟೆನ್ನಿಸ್ ಡಬಲ್ಸ್ ಪುರುಷರ ವಿಭಾಗದಲ್ಲಿ ಭಾರತದ ರೋಹನ್ ಬೋಪಣ್ಣ ಮತ್ತು ದಿವಿಜ್ ಶರಣ್ ಫೈನಲ್ ತಲುಪಿದ್ದು ಭಾರತಕ್ಕೆ ಬಂಗಾರ ಅಥವಾ ಬೆಳ್ಳಿ ಪದಕ ಖಾತ್ರಿಯಾಗಿದೆ.
ಒಟ್ಟಾರೆ ಭಾರತ 4 ಬಂಗಾರ,3 ಬೆಳ್ಳಿ ಮತ್ತು 9 ಕಂಚಿನ ಪದಕಗೊಳೊಂದಿಗೆ ಒಟ್ಟು 16 ಪದಕಗಳೊಂದಿಗೆ 9 ನೇ ಸ್ಥಾನದಲ್ಲಿದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.