ರಣಜಿ: ಸೌರಾಷ್ಟ್ರ ಮೇಲುಗೈ


Team Udayavani, Mar 12, 2020, 5:04 AM IST

ರಣಜಿ: ಸೌರಾಷ್ಟ್ರ ಮೇಲುಗೈ

ರಾಜ್‌ಕೋಟ್‌: ಸೌರಾಷ್ಟ್ರ-ಬಂಗಾಲ ನಡುವಿನ ರಣಜಿ ಫೈನಲ್‌ ಪಂದ್ಯ ಮೊದಲ ಇನ್ನಿಂಗ್ಸ್‌ ಮುನ್ನಡೆಯ ಸ್ಪರ್ಧೆಗೆ ಸೀಮಿತಗೊಳ್ಳುವ ಸಾಧ್ಯತೆ ಗೋಚರಿಸಿದೆ. ಎರಡೂ ತಂಡಗಳ ನಿಧಾನ ಗತಿಯ ಆಟವೇ ಇದಕ್ಕೆ ಸಾಕ್ಷಿ. 3ನೇ ದಿನದ ಆಟದಲ್ಲಿ ಆತಿಥೇಯ ಸೌರಾಷ್ಟ್ರ ಮೊದಲ ಇನ್ನಿಂಗ್ಸ್‌ನಲ್ಲಿ 425 ರನ್‌ ಪೇರಿಸಿದ್ದು, ಬಂಗಾಲ 134 ರನ್ನಿಗೆ 3 ವಿಕೆಟ್‌ ಕಳೆದುಕೊಂಡಿದೆ. ಈವರೆಗೆ ಒಟ್ಟು 236.5 ಓವರ್‌ಗಳ ಆಟ ಸಾಗಿದೆ.

ಬುಧವಾರದ ಆಟದಲ್ಲಿ ಬಂಗಾಲದ ಸುದೀಪ್‌ ಚಟರ್ಜಿ (ಅಜೇಯ 47 ರನ್‌, 145 ಎಸೆತ, 5 ಬೌಂಡರಿ) ಹಾಗೂ ಮನೋಜ್‌ ತಿವಾರಿ (35 ರನ್‌, 116 ಎಸೆತ, 2 ಬೌಂಡರಿ) ಎಚ್ಚರಿಕೆಯ ಬ್ಯಾಟಿಂಗ್‌ ಪ್ರದರ್ಶಿಸಿದರು. ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಆದರೆ ದಿನದ ಕೊನೆಯಲ್ಲಿ ಉತ್ತಮವಾಗಿ ಬ್ಯಾಟ್‌ ಬೀಸುತ್ತಿದ್ದ ತಿವಾರಿ ವಿಕೆಟ್‌ ಬಿದ್ದದ್ದು ಬಂಗಾಲಕ್ಕೆ ಹಿನ್ನಡೆಯಾಗಿ ಪರಿಣಮಿಸಿದೆ. ಸುದೀಪ್‌ ಚಟರ್ಜಿ ಜತೆಗೆ ಅನುಭವಿ ವೃದ್ಧಿªಮಾನ್‌ ಸಾಹಾ (4) ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ. ಬಂಗಾಲ ಇನ್ನೂ 291 ರನ್‌ ಹಿನ್ನಡೆಯಲ್ಲಿದೆ.

ಬಂಗಾಲಕ್ಕೆ ಆರಂಭಿಕ ಆಘಾತ
ಬೃಹತ್‌ ಮೊತ್ತವನ್ನು ಬೆನ್ನಟ್ಟತೊಡಗಿದ ಬಂಗಾಲಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಸುದೀಪ್‌ ಕುಮಾರ್‌ ಘರಮಿ (26) ಹಾಗೂ ಅಭಿಮನ್ಯು ಈಶ್ವರನ್‌ (9) ತಂಡದ ಮೊತ್ತ 35 ರನ್‌ ಆಗುವಷ್ಟರಲ್ಲಿ ಪೆವಿಲಿಯನ್‌ ಸೇರಿ ಆಗಿತ್ತು. ಅನಂತರ ಸುದೀಪ್‌ ಚಟರ್ಜಿ, ಮನೋಜ್‌ ತಿವಾರಿ ರಕ್ಷಣೆ ನೀಡಿದರು. ಸುಮಾರು 37 ಓವರ್‌ ಜತೆಯಾಟ ನಿಭಾಯಿಸಿದ ಇವರು 3ನೇ ವಿಕೆಟಿಗೆ 89 ರನ್‌ ಪೇರಿಸಿ ಹೋರಾಟ ಜಾರಿಯಲ್ಲಿರಿಸಿದರು. ಸೌರಾಷ್ಟ್ರ ಪರ ಧರ್ಮೇಂದ್ರ ಸಿನ್ಹ ಜಡೇಜ, ಪ್ರೇರಕ್‌ ಮಂಕಡ್‌ ಹಾಗೂ ಚಿರಾಗ್‌ ಜಾನಿ ತಲಾ ಒಂದೊಂದು ವಿಕೆಟ್‌ ಕಿತ್ತರು.

425 ರನ್‌ ಪೇರಿಸಿದ ಸೌರಾಷ್ಟ್ರ
2ನೇ ದಿನದ ಅಂತ್ಯಕ್ಕೆ 8 ವಿಕೆಟಿಗೆ 384 ರನ್‌ ಒಟ್ಟುಗೂಡಿಸಿದ್ದ ಸೌರಾಷ್ಟ್ರ ಮತ್ತೆ 41 ರನ್‌ ಸೇರಿಸಿ ಆಲೌಟ್‌ ಆಯಿತು. ಧರ್ಮೇಂದ್ರ ಸಿನ್ಹ ಜಡೇಜ (ಅಜೇಯ 33) ಹಾಗೂ ಜೈದೇವ್‌ ಉನಾದ್ಕತ್‌ (20) ಅಂತಿಮ ವಿಕೆಟ್‌ಗೆ 38 ರನ್‌ ಪೇರಿಸಿದರು.

ಸಂಕ್ಷಿಪ್ತ ಸ್ಕೋರ್‌: ಸೌರಾಷ್ಟ್ರ-425 (ವಸವಾಡ 106, ಪೂಜಾರ 66, ಬರೋಟ್‌ 54, ವಿ. ಜಡೇಜ 54, ಡಿ. ಜಡೇಜ ಔಟಾಗದೆ 33, ಆಕಾಶ್‌ ದೀಪ್‌ 98ಕ್ಕೆ 4, ಶಾಬಾಜ್‌ 103ಕ್ಕೆ 3, ಮುಕೇಶ್‌ 103ಕ್ಕೆ 2). ಬಂಗಾಲ-3 ವಿಕೆಟಿಗೆ 134 (ಸುದೀಪ್‌ ಬ್ಯಾಟಿಂಗ್‌ 47, ತಿವಾರಿ 35, ಘರಮಿ 26).

ಟಾಪ್ ನ್ಯೂಸ್

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.