ಕರ್ನಾಟಕಕ್ಕೆ ಇನ್ನಿಂಗ್ಸ್‌ ಮುನ್ನಡೆ ಕನಸು


Team Udayavani, Dec 11, 2019, 12:45 AM IST

kannnartaka

ದಿಂಡಿಗಲ್‌ (ತ.ನಾ.): ವಾರಗಳ ಹಿಂದೆ ಗೃಹಸ್ಥಾಶ್ರಮಕ್ಕೆ ಕಾಲಿಟ್ಟಿದ್ದ ಕೆ.ಗೌತಮ್‌ ಅವರ ಆಲ್‌ರೌಂಡ್‌ ಪರಾಕ್ರಮದಿಂದಾಗಿ ಆತಿಥೇಯ ತಮಿಳುನಾಡು ವಿರುದ್ಧ ಕರ್ನಾಟಕ ತಂಡ ರಣಜಿ ಕ್ರಿಕೆಟ್‌ ಎಲೈಟ್‌ “ಬಿ’ ಗುಂಪಿನ ಪಂದ್ಯದಲ್ಲಿ ಮೇಲುಗೈ ಸಾಧಿಸುವ ಮುನ್ಸೂಚನೆ ನೀಡಿದೆ.

ದ್ವಿತೀಯ ದಿನವಾದ ಮಂಗಳವಾರ ಬ್ಯಾಟಿಂಗ್‌ ಮುಂದುವರಿಸಿದ ಕರ್ನಾಟಕ 336 ರನ್‌ ಗಳಿಸಿ ಆಲೌಟಾಯಿತು. 6 ವಿಕೆಟಿಗೆ 259 ರನ್ನುಗಳಿಂದ ಎರಡನೇ ದಿನದ ಬ್ಯಾಟಿಂಗ್‌ ಮುಂದುವರಿಸಿದ ಕರ್ನಾಟಕಕ್ಕೆ ಕೆ.ಗೌತಮ್‌ (51 ರನ್‌) ಅರ್ಧಶತಕ ಬಾರಿಸಿ ನೆರವಾದರು. ಇವರಿಗೆ ಡೇವಿಡ್‌ ಮಥಾಯಿಸ್‌ (26 ರನ್‌) ಕೆಳ ಕ್ರಮಾಂಕದಲ್ಲಿ ಸಾಥ್‌ ನೀಡಿದರು.

ಇದಕ್ಕುತ್ತರವಾಗಿ ತಮಿಳುನಾಡು ತಂಡ ದ್ವಿತೀಯ ದಿನದ ಅಂತ್ಯಕ್ಕೆ ಮೊದಲ ಇನ್ನಿಂಗ್ಸ್‌ ನಲ್ಲಿ 4 ವಿಕೆಟಿಗೆ 165 ರನ್‌ ಗಳಿಸಿ ಸಂಕಷ್ಟದ ಸ್ಥಿತಿಯಲ್ಲಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಲು ತಮಿಳುನಾಡು ಇನ್ನೂ 171 ರನ್‌ ಗಳಿಸಬೇಕಾಗಿದೆ. ಕೈಯಲ್ಲಿ 6 ವಿಕೆಟ್‌ ಉಳಿದಿದೆ. ದಿನೇಶ್‌ ಕಾರ್ತಿಕ್‌ (ಅಜೇಯ 23 ರನ್‌) ಹಾಗೂ ಜಗದೀಶನ್‌ (ಅಜೇಯ 6 ರನ್‌) ಮೂರನೇ ದಿನಕ್ಕೆ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

ಗೌತಮ್‌ ಬ್ಯಾಟಿಂಗ್‌ ನೆರವು
2ನೇ ದಿನ ಬ್ಯಾಟಿಂಗ್‌ ಮುಂದುವರಿಸಿದ ಕರ್ನಾಟಕ ತಂಡ ಒಟ್ಟು 77 ರನ್‌ ಗಳಿಸಿ ತನ್ನೆಲ್ಲ ವಿಕೆಟ್‌ ಕಳೆದುಕೊಂಡಿತು. ಶ್ರೇಯಸ್‌ ಗೋಪಾಲ್‌ ಒಂದೂ ರನ್‌ ಸೇರಿಸಲಾಗದೆ ವಿಘ್ನೇಶ್‌ಗೆ ವಿಕೆಟ್‌ ಒಪ್ಪಿಸಿದರು. ಆದರೆ ಕೆ.ಗೌತಮ್‌-ಡೇವಿಡ್‌ ಮಥಾಯಿಸ್‌ 8ನೇ ವಿಕೆಟ್‌ಗೆ 52 ರನ್‌ ಜತೆಯಾಟ ನಿರ್ವಹಿಸಿ ತಂಡವನ್ನು 300ರ ಗಡಿ ದಾಟಿಸಿದರು. 39 ಎಸೆತ ಎದುರಿಸಿದ ಗೌತಮ್‌ 4 ಬೌಂಡರಿ, 4 ಸಿಕ್ಸರ್‌ ಹೊಡೆದರು. ಮತ್ತೋರ್ವ ಬ್ಯಾಟ್ಸ್‌ಮನ್‌ ಡೇವಿಡ್‌ ಮಥಾಯಿಸ್‌ 62 ಎಸೆತ ಎದುರಿಸಿ ತಾಳ್ಮೆಯ ಬ್ಯಾಟಿಂಗ್‌ ಪ್ರದರ್ಶಿಸಿದರು. ಆರ್‌.ಅಶ್ವಿ‌ನ್‌ 79ಕ್ಕೆ 4 ವಿಕೆಟ್‌ ಕಬಳಿಸಿದರೆ ವಿಘ್ನೇಶ್‌, ಸಿದ್ಧಾರ್ಥ್ ತಲಾ 2 ವಿಕೆಟ್‌ ಪಡೆದರು.

ಬೌಲಿಂಗ್‌ನಲ್ಲೂ ಗೌತಮ ವಿಕ್ರಮ
ತಮಿಳುನಾಡು ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಭಾರೀ ಆಘಾತ ಅನುಭವಿಸಿದೆ. ಬ್ಯಾಟಿಂಗ್‌ನಲ್ಲಿ ಆತಿಥೇಯರಿಗೆ ಕಾಡಿದ್ದ ಕೆ.ಗೌತಮ್‌ ಬೌಲಿಂಗ್‌ನಲ್ಲೂ ವಿಜಯ್‌ ಶಂಕರ್‌ ಪಡೆಗೆ ಸಿಂಹಸ್ವಪ್ನವಾಗಿ ಪರಿಣಮಿಸಿದರು. ತಮಿಳುನಾಡು ತಂಡ ಈಗಾಗಲೇ 4 ವಿಕೆಟ್‌ ಕಳೆದುಕೊಂಡಿದೆ. ಈ ನಾಲ್ಕು ವಿಕೆಟ್‌ಗಳಲ್ಲಿ ಮೂರು ವಿಕೆಟನ್ನು ಗೌತಮ್‌ ಉರುಳಿಸಿದ್ದಾರೆ. ಒಂದು ವಿಕೆಟ್‌ ರೋನಿತ್‌ ಮೋರೆ ಪಾಲಾಗಿದೆ. ಆರಂಭಿಕ ಬ್ಯಾಟ್ಸ್‌ಮನ್‌ ಅಭಿನವ್‌ ಮುಕುಂದ್‌ (47 ರನ್‌, 75 ಎಸೆತ, 6 ಬೌಂಡರಿ), ಮುರಳಿ ವಿಜಯ್‌ (32 ರನ್‌, 74 ಎಸೆತ, 3 ಬೌಂಡರಿ) ಕೆ.ಗೌತಮ್‌ ಸ್ಪಿನ್‌ ಮಾಯೆ ಅರಿಯದೆ ವಿಕೆಟ್‌ ಕಳೆದುಕೊಂಡರು. ಬಾಬಾ ಅಪರಾಜಿತ್‌ (37 ರನ್‌, 86 ಎಸೆತ, 3 ಬೌಂಡರಿ, 1 ಸಿಕ್ಸರ್‌) ಮೋರೆ ಎಸೆತದಲ್ಲಿ ಔಟಾದರು. ನಾಯಕ ವಿಜಯ್‌ ಶಂಕರ್‌ 12 ರನ್‌ ವೇಳೆ ಗೌತಮ್‌ಗೆ ಎಲ್‌ಬಿಡಬ್ಲ್ಯು ಆಗಿ ಹೊರ ನಡೆದರು.

ಇನ್ನಿಂಗ್ಸ್‌ ಮುನ್ನಡೆಯ ನಿರೀಕ್ಷೆಯಲ್ಲಿ ಮುಂಬಯಿ
ವಡೋದರ: ದೇಶೀಯ ದೈತ್ಯ ಮುಂಬಯಿ ತಂಡವು ಇಲ್ಲಿ ಸಾಗುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಬರೋಡ ತಂಡದೆದುರು ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸುವ ನಿರೀಕ್ಷೆಯಲ್ಲಿದೆ.

8 ವಿಕೆಟಿಗೆ 362 ರನ್ನುಗಳಿಂದ ದ್ವಿತೀಯ ದಿನದ ಆಟ ಆರಂಭಿಸಿದ ಮುಂಬಯಿ ತಂಡವು 69 ರನ್‌ ಪೇರಿಸಿ 431 ರನ್ನಿಗೆ ಆಲೌಟಾಯಿತು. ಇದಕ್ಕುತ್ತರವಾಗಿ ಬರೋಡ ತಂಡವು ದಿನದಾಟದ ಅಂತ್ಯಕ್ಕೆ ಶಾಮ್ಸ್‌ ಮುಲಾನಿ ದಾಳಿಗೆ ಕುಸಿದು 9 ವಿಕೆಟ್‌ ಕಳೆದುಕೊಂಡಿದ್ದು 301 ರನ್‌ ಗಳಿಸಿದೆ. ಮುನ್ನಡೆ ಸಾಧಿಸುವ ನಿಟ್ಟಿನಲ್ಲಿ ಆರಂಭಿಕ ಕೇದಾರ್‌ ದೇವಧರ್‌ ಹೋರಾಡುತ್ತಿದ್ದಾರೆ.

ಏಕಾಂಗಿಯಾಗಿ ಹೋರಾಡುತ್ತಿರುವ ಅವರು 154 ರನ್‌ ಗಳಿಸಿ ಆಡುತ್ತಿದ್ದಾರೆ. ಬರೋಡ ಮುನ್ನಡೆ ಸಾಧಿಸಲು ಇನ್ನೂ 130 ರನ್‌ ಗಳಿಸಬೇಕಾಗಿದೆ. ಬಿಗು ದಾಳಿ ಸಂಘಟಿಸಿದ ಮುಲಾನಿ 99 ರನ್ನಿಗೆ 5 ವಿಕೆಟ್‌ ಉರುಳಿಸಿದ್ದಾರೆ.

ಕೇರಳ ಬೃಹತ್‌ ಮೊತ್ತ
ತಿರುವನಂತಪುರ: ನಾಯಕ ಸಚಿನ್‌ ಬೇಬಿ (155) ಅವರ ಭರ್ಜರಿ ಶತಕದ ನೆರವಿನಿಂದ ಕೇರಳ ತಂಡ ದಿಲ್ಲಿ ವಿರುದ್ಧದ ರಣಜಿ ಪಂದ್ಯದಲ್ಲಿ 9 ವಿಕೆಟಿಗೆ 525 ರನ್‌ ಪೇರಿಸಿ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿಕೊಂಡಿದೆ. ಇದಕ್ಕುತ್ತರವಾಗಿ ದಿಲ್ಲಿ ತಂಡವು ದಿನದಾಟದ ಅಂತ್ಯಕ್ಕೆ ಎರಡು ವಿಕೆಟ್‌ ಕಳೆದುಕೊಂಡಿದ್ದು 23 ರನ್‌ ಗಳಿಸಿದೆ. ಫಾಲೋ ಆನ್‌ ತಪ್ಪಿಸಲು ದಿಲ್ಲಿ ತಂಡವು 376 ರನ್‌ ಗಳಿಸಲು ಪ್ರಯತ್ನಿಸಲಿದೆ.

ಮೊದಲ ದಿನ ರಾಬಿನ್‌ ಉತ್ತಪ್ಪ ಅವರ ಶತಕ ಮತ್ತು ಪೂನಂ ರಾಹುಲ್‌ ಅವರ 97 ರನ್‌ ನೆರವಿನಿಂದ ಉತ್ತಮ ಮೊತ್ತ ಪೇರಿಸುವತ್ತ ಹೆಜ್ಜೆ ಹಾಕಿದ್ದ ಕೇರಳ ತಂಡಕ್ಕೆ ನಾಯಕ ಬೇಬಿ ಉತ್ತಮ ನೆರವು ನೀಡಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.