ರಣಜಿ ಟ್ರೋಫಿ ಕ್ವಾರ್ಟರ್‌ ಫೈನಲ್‌

ಕರ್ನಾಟಕದ ಎದುರಾಳಿ ಜಮ್ಮು ಮತ್ತು ಕಾಶ್ಮೀರ

Team Udayavani, Feb 6, 2020, 6:00 AM IST

jammu-kshmir

ಬೆಂಗಳೂರು: 2019-20ನೇ ಸಾಲಿನ ರಣಜಿ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿಯ ನಾಕೌಟ್‌ ಹಂತದ ಚಿತ್ರಣವೀಗ ಸ್ಪಷ್ಟಗೊಂಡಿದೆ. ಲೀಗ್‌ ಹಂತದ ಮುಖಾಮುಖೀಗಳೆಲ್ಲ ಶನಿವಾರಕ್ಕೆ ಕೊನೆಗೊಳ್ಳುವುದರೊಂದಿಗೆ ಕ್ವಾರ್ಟರ್‌ ಫೈನಲ್‌ ಹಣಾಹ ಣಿಗೆ ಕ್ಷಣಗಣನೆ ಮೊದಲ್ಗೊಂಡಿದೆ. ಫೆ. 20ರಿಂದ 24ರ ತನಕ ದೇಶದ 4 ಕೇಂದ್ರಗಳು ಈ ಪಂದ್ಯಗಳನ್ನು ಆಯೋಜಿಸಲಿವೆ.

ಇದರಂತೆ “ಎಲೈಟ್‌ ಎ-ಬಿ’ ಹಂತದ ತೃತೀಯ ಸ್ಥಾನಿ ಕರ್ನಾಟಕ “ಎಲೈಟ್‌ ಸಿ’ ಹಂತದ ಅಗ್ರಸ್ಥಾನಿಯಾದ ಜಮ್ಮು ಕಾಶ್ಮೀರವನ್ನು ಎದುರಿ ಸಲಿದೆ. ಈ ಮುಖಾಮುಖೀ ಜಮ್ಮುವಿನಲ್ಲಿ ನಡೆಯಲಿದೆ.

ಶುಕ್ರವಾರದ ತನಕ ಕರ್ನಾಟಕ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿತ್ತು. ಆದರೆ ಗುಜರಾತ್‌ ತಂಡ ಆಂಧ್ರಪ್ರದೇಶವನ್ನು 8 ವಿಕೆಟ್‌ಗಳಿಂದ ಮಣಿಸಿ ಅಗ್ರಸ್ಥಾನಕ್ಕೆ ನೆಗೆ ಯಿತು. ಮೊದಲ ಸ್ಥಾನದಲ್ಲಿದ್ದ ಬಂಗಾಲ ಎರಡಕ್ಕೆ, ಎರಡರಲ್ಲಿದ್ದ ಕರ್ನಾಟಕ ಮೂರಕ್ಕೆ ಇಳಿಯಿತು. ಸೌರಾಷ್ಟ್ರ 4ನೇ ಸ್ಥಾನ ಪಡೆದರೆ, ಆಂಧ್ರ ಪ್ರದೇಶ 5ನೇ ಸ್ಥಾನದೊಂದಿಗೆ ನಾಕೌಟ್‌ ಟಿಕೆಟ್‌ ಸಂಪಾದಿಸಿತು. ನಿರ್ಣಾಯಕ ಪಂದ್ಯ ವೊಂದರಲ್ಲಿ ಬಂಗಾಲ ವಿರುದ್ಧ ಪಂಜಾಬ್‌ ಸೋತ ಕಾರಣ ಆಂಧ್ರಕ್ಕೆ ಅದೃಷ್ಟ ಕೈ ಹಿಡಿಯಿತು.

5 ದಿನಗಳ ನಾಕೌಟ್‌ ಪಂದ್ಯ
ನಾಕೌಟ್‌ ಹಂತದಿಂದ ರಣಜಿ ಪಂದ್ಯಗಳು 5 ದಿನಗಳ ಕಾಲ ನಡೆಯಲಿವೆ. ನಾಲ್ಕೂ ಕ್ವಾರ್ಟರ್‌ ಫೈನಲ್‌ ಪಂದ್ಯಗಳು ಫೆ. 20ರಿಂದ ಆರಂಭಗೊಂಡು ಫೆ. 24ಕ್ಕೆ ಕೊನೆಗೊಳ್ಳುತ್ತವೆ. ಹೀಗಾಗಿ ಎಲ್ಲ ಪಂದ್ಯಗಳು ಸ್ಪಷ್ಟ ಫ‌ಲಿತಾಂಶ ಕಾಣುವುದರಲ್ಲಿ ಅನುಮಾನವಿಲ್ಲ. ಇಲ್ಲವಾದರೆ ಮೊದಲ ಇನ್ನಿಂಗ್ಸ್‌ ಮುನ್ನಡೆ ನಿರ್ಣಾಯಕವಾಗಲಿದೆ.

3 ವಿಭಾಗಗಳ ಲೀಗ್‌ ಸ್ಪರ್ಧೆ
ರಣಜಿ ತಂಡಗಳನ್ನು ಒಟ್ಟು 3 ಗುಂಪುಗಳಾಗಿ ವಿಂಗಡಿಸಿ ಲೀಗ್‌ ಪಂದ್ಯಗಳನ್ನು ಆಯೋಜಿಸಲಾಗಿತ್ತು. ಇದರಂತೆ “ಎಲೈಟ್‌ ಎ-ಬಿ ವಿಭಾಗ’ದ 5 ಅಗ್ರಸ್ಥಾನಿ ತಂಡಗಳು, “ಎಲೈಟ್‌ ಸಿ ವಿಭಾಗ’ದ ಅಗ್ರ 2 ತಂಡಗಳು ಹಾಗೂ ಪ್ಲೇಟ್‌ ವಿಭಾಗದಲ್ಲಿ ಮೊದಲ ಸ್ಥಾನ ಪಡೆದ ತಂಡ ಸೇರಿದಂತೆ ಒಟ್ಟು 8 ತಂಡಗಳು ನಾಕೌಟ್‌ ಹಂತಕ್ಕೆ ತೇರ್ಗಡೆಯಾಗಿವೆ.

ರಣಜಿ ಕಿಂಗ್‌ ಖ್ಯಾತಿಯ ಮುಂಬಯಿ, ಕಳೆದೆರಡು ಬಾರಿಯ ಚಾಂಪಿಯನ್‌ ವಿದರ್ಭ ಮೊದಲಾದ ದೊಡ್ಡ ಹಾಗೂ ಬಲಿಷ್ಠ ತಂಡಗಳೆಲ್ಲ ಈ ಸಲ ಲೀಗ್‌ ಹಂತದಲ್ಲೇ ಉದುರಿ ಹೋದವು. ಕಾಶ್ಮೀರ, ಗೋವಾದಂಥ ತಂಡಗಳು ಇವನ್ನು ಮೀರಿ ನಿಂತದ್ದು ವಿಶೇಷ. ಇದರಿಂದ ರಣಜಿ ಲೀಗ್‌ ಮಾದರಿಯ ಬಗ್ಗೆ ಅಪಸ್ವರವೆದ್ದಿದ್ದು, ಇದು ಚರ್ಚೆಗೆ ಗ್ರಾಸವಾಗಿದೆ.

ಸಿ ವಿಭಾಗದ ಅಗ್ರಸ್ಥಾನಿ ಜಮ್ಮು ಕಾಶ್ಮೀರ 9ರಲ್ಲಿ 6 ಪಂದ್ಯಗಳನ್ನು ಗೆದ್ದು 39 ಅಂಕ ಸಂಪಾದಿಸಿದೆ. ಒಡಿಶಾ ಐದನ್ನು ಗೆದ್ದು ದ್ವಿತೀಯ ಸ್ಥಾನಿಯಾಯಿತು (38 ಅಂಕ). ಪ್ಲೇಟ್‌ ವಿಭಾಗದ ಅಗ್ರ ತಂಡವಾದ ಗೋವಾ 9ರಲ್ಲಿ 7 ಗೆಲುವು ಸಂಪಾದಿಸಿ ಕೂಟದಲ್ಲೇ ಸರ್ವಾಧಿಕ 50 ಅಂಕ ಗಳಿಸಿದ ಹೆಗ್ಗಳಿಕೆಗೆ ಪಾತ್ರವಾಯಿತು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.