ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್: ಕರ್ನಾಟಕದ ಎದುರಾಳಿ ಜಮ್ಮು ಮತ್ತು ಕಾಶ್ಮೀರ
Team Udayavani, Feb 16, 2020, 3:57 PM IST
ಬೆಂಗಳೂರು: 2019-20ನೇ ಸಾಲಿನ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ನಾಕೌಟ್ ಹಂತದ ಚಿತ್ರಣವೀಗ ಸ್ಪಷ್ಟಗೊಂಡಿದೆ. ಲೀಗ್ ಹಂತದ ಮುಖಾಮುಖೀಗಳೆಲ್ಲ ಶನಿವಾರಕ್ಕೆ ಕೊನೆಗೊಳ್ಳುವುದರೊಂದಿಗೆ ಕ್ವಾರ್ಟರ್ ಫೈನಲ್ ಹಣಾಹಣಿಗೆ ಕ್ಷಣಗಣನೆ ಮೊದಲ್ಗೊಂಡಿದೆ.
ಫೆ. 20ರಿಂದ 24ರ ತನಕ ದೇಶದ 4 ಕೇಂದ್ರಗಳು ಈ ಪಂದ್ಯಗಳನ್ನು ಆಯೋಜಿಸಲಿವೆ. ಇದರಂತೆ “ಎಲೈಟ್ ಎ-ಬಿ’ ಹಂತದ ತೃತೀಯ ಸ್ಥಾನಿ ಕರ್ನಾಟಕ “ಎಲೈಟ್ ಸಿ’ ಹಂತದ ಅಗ್ರಸ್ಥಾನಿಯಾದ ಜಮ್ಮು ಕಾಶ್ಮೀರವನ್ನು ಎದುರಿ ಸಲಿದೆ. ಈ ಮುಖಾಮುಖೀ ಜಮ್ಮುವಿನಲ್ಲಿ ನಡೆಯಲಿದೆ.
ಶುಕ್ರವಾರದ ತನಕ ಕರ್ನಾಟಕ ಅಂಕಪಟ್ಟಿ ಯಲ್ಲಿ ದ್ವಿತೀಯ ಸ್ಥಾನಿಯಾಗಿತ್ತು. ಆದರೆ ಗುಜರಾತ್ ತಂಡ ಆಂಧ್ರಪ್ರದೇಶವನ್ನು 8 ವಿಕೆಟ್ಗಳಿಂದ ಮಣಿಸಿ ಅಗ್ರಸ್ಥಾನಕ್ಕೆ ನೆಗೆ ಯಿತು. ಮೊದಲ ಸ್ಥಾನದಲ್ಲಿದ್ದ ಬಂಗಾಲ ಎರಡಕ್ಕೆ, ಎರಡರಲ್ಲಿದ್ದ ಕರ್ನಾಟಕ ಮೂರಕ್ಕೆ ಇಳಿಯಿತು. ಸೌರಾಷ್ಟ್ರ 4ನೇ ಸ್ಥಾನ ಪಡೆದರೆ, ಆಂಧ್ರ ಪ್ರದೇಶ 5ನೇ ಸ್ಥಾನದೊಂದಿಗೆ ನಾಕೌಟ್ ಟಿಕೆಟ್ ಸಂಪಾದಿಸಿತು. ನಿರ್ಣಾಯಕ ಪಂದ್ಯ ವೊಂದರಲ್ಲಿ ಬಂಗಾಲ ವಿರುದ್ಧ ಪಂಜಾಬ್ ಸೋತ ಕಾರಣ ಆಂಧ್ರಕ್ಕೆ ಅದೃಷ್ಟ ಕೈ ಹಿಡಿಯಿತು.
3 ವಿಭಾಗಗಳ ಲೀಗ್ ಸ್ಪರ್ಧೆ
ರಣಜಿ ತಂಡಗಳನ್ನು ಒಟ್ಟು 3 ಗುಂಪುಗಳಾಗಿ ವಿಂಗಡಿಸಿ ಲೀಗ್ ಪಂದ್ಯಗಳನ್ನು ಆಯೋಜಿಸಲಾಗಿತ್ತು. ಇದರಂತೆ “ಎಲೈಟ್ ಎ-ಬಿ ವಿಭಾಗ’ದ 5 ಅಗ್ರಸ್ಥಾನಿ ತಂಡಗಳು, “ಎಲೈಟ್ ಸಿ ವಿಭಾಗ’ದ ಅಗ್ರ 2 ತಂಡಗಳು ಹಾಗೂ ಪ್ಲೇಟ್ ವಿಭಾಗದಲ್ಲಿ ಮೊದಲ ಸ್ಥಾನ ಪಡೆದ ತಂಡ ಸೇರಿದಂತೆ ಒಟ್ಟು 8 ತಂಡಗಳು ನಾಕೌಟ್ ಹಂತಕ್ಕೆ ತೇರ್ಗಡೆಯಾಗಿವೆ.
ರಣಜಿ ಕಿಂಗ್ ಖ್ಯಾತಿಯ ಮುಂಬಯಿ, ಕಳೆದೆರಡು ಬಾರಿಯ ಚಾಂಪಿಯನ್ ವಿದರ್ಭ ಮೊದಲಾದ ದೊಡ್ಡ ಹಾಗೂ ಬಲಿಷ್ಠ ತಂಡಗಳೆಲ್ಲ ಈ ಸಲ ಲೀಗ್ ಹಂತದಲ್ಲೇ ಉದುರಿ ಹೋದವು. ಕಾಶ್ಮೀರ, ಗೋವಾದಂಥ ತಂಡಗಳು ಇವನ್ನು ಮೀರಿ ನಿಂತದ್ದು ವಿಶೇಷ. ಇದರಿಂದ ರಣಜಿ ಲೀಗ್ ಮಾದರಿಯ ಬಗ್ಗೆ ಅಪಸ್ವರವೆದ್ದಿದ್ದು, ಇದು ಚರ್ಚೆಗೆ ಗ್ರಾಸವಾಗಿದೆ.
ಸಿ ವಿಭಾಗದ ಅಗ್ರಸ್ಥಾನಿ ಜಮ್ಮು ಕಾಶ್ಮೀರ 9ರಲ್ಲಿ 6 ಪಂದ್ಯಗಳನ್ನು ಗೆದ್ದು 39 ಅಂಕ ಸಂಪಾದಿಸಿದೆ. ಒಡಿಶಾ ಐದನ್ನು ಗೆದ್ದು ದ್ವಿತೀಯ ಸ್ಥಾನಿಯಾಯಿತು (38 ಅಂಕ). ಪ್ಲೇಟ್ ವಿಭಾಗದ ಅಗ್ರ ತಂಡವಾದ ಗೋವಾ 9ರಲ್ಲಿ 7 ಗೆಲುವು ಸಂಪಾದಿಸಿ ಕೂಟದಲ್ಲೇ ಸರ್ವಾಧಿಕ 50 ಅಂಕ ಗಳಿಸಿದ ಹೆಗ್ಗಳಿಕೆಗೆ ಪಾತ್ರವಾಯಿತು.
5 ದಿನಗಳ ನಾಕೌಟ್ ಪಂದ್ಯ
ನಾಕೌಟ್ ಹಂತದಿಂದ ರಣಜಿ ಪಂದ್ಯಗಳು 5 ದಿನಗಳ ಕಾಲ ನಡೆಯಲಿವೆ. ನಾಲ್ಕೂ ಕ್ವಾರ್ಟರ್ ಫೈನಲ್ ಪಂದ್ಯಗಳು ಫೆ. 20ರಿಂದ ಆರಂಭಗೊಂಡು ಫೆ. 24ಕ್ಕೆ ಕೊನೆಗೊಳ್ಳುತ್ತವೆ. ಹೀಗಾಗಿ ಎಲ್ಲ ಪಂದ್ಯಗಳು ಸ್ಪಷ್ಟ ಫಲಿತಾಂಶ ಕಾಣುವುದರಲ್ಲಿ ಅನುಮಾನವಿಲ್ಲ. ಇಲ್ಲವಾದರೆ ಮೊದಲ ಇನ್ನಿಂಗ್ಸ್ ಮುನ್ನಡೆ ನಿರ್ಣಾಯಕವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ