ಇನ್ನಿಂಗ್ಸ್‌ ಮುನ್ನಡೆಗೆ ದಿಲ್ಲಿ ಪ್ರಯತ್ನ


Team Udayavani, Dec 9, 2017, 11:15 AM IST

09-31.jpg

ವಿಜಯವಾಡ: ಮಧ್ಯ ಪ್ರದೇಶ ತಂಡ ದೆದುರಿನ ರಣಜಿ ಟ್ರೋಫಿ ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ದಿಲ್ಲಿ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಲು ಪ್ರಯತ್ನಿಸುತ್ತಿದೆ.

ಮಧ್ಯ ಪ್ರದೇಶ ತಂಡದ 338 ರನ್ನಿಗೆ ಉತ್ತರವಾಗಿ ದಿಲ್ಲಿ ತಂಡವು ದ್ವಿತೀಯ ದಿನದಾಟದ ಅಂತ್ಯಕ್ಕೆ ಎರಡು ವಿಕೆಟ್‌ ಕಳೆದುಕೊಂಡಿದ್ದು 180 ರನ್‌ ಗಳಿಸಿದೆ. ಮೊದಲ ಇನ್ನಿಂಗ್ಸ್‌ ನಲ್ಲಿ ಮುನ್ನಡೆ ಪಡೆಯಲು ತಂಡ ಇನ್ನುಳಿದ 8 ವಿಕೆಟ್‌ ನೆರವಿನಿಂದ 158 ರನ್‌ ಗಳಿಸಬೇಕಾಗಿದೆ.

6 ವಿಕೆಟಿಗೆ 223 ರನ್ನುಗಳಿಂದ ದಿನದಾಟ ಆರಂಂಭಿ ಸಿದ ಮಧ್ಯ ಪ್ರದೇಶ ತಂಡಕ್ಕೆ ಹರ್‌ಪ್ರೀತ್‌ ಸಿಂಗ್‌ ಆಸರೆ ಯಾದರು. ಅವರ ಶತಕದಿಂದಾಗಿ ಮಧ್ಯ ಪ್ರದೇಶದ ಮೊತ್ತ 300ರ ಗಡಿ ದಾಟುವಂತಾಯಿತು. 47 ರನ್ನಿನಿಂದ ದ್ವಿತೀಯ ದಿನದ ಆಟ ಮುಂದುವರಿಸಿದ ಹರ್‌ಪ್ರೀತ್‌ ತಂಡ ಆಲೌಟ್‌ ಆದಾಗ 107 ರನ್‌ ಗಳಿಸಿ ಅಜೇಯರಾಗಿ ಉಳಿದರು. 200 ಎಸೆತ ಎದುರಿಸಿದ ಅವರು 15 ಬೌಂಡರಿ ಬಾರಿಸಿದ್ದರು. 

ಹರ್‌ಪ್ರೀತ್‌ ಮತ್ತು ಪುನೀತ್‌ ದತೆ 7ನೇ ವಿಕೆಟಿಗೆ 73 ರನ್‌ ಪೇರಿಸಿದರು. ಈ ಹಂತದಲ್ಲಿ 35 ರನ್‌ ಗಳಿಸಿದ ದತೆ ಔಟಾದರು.  ಹರ್‌ಪ್ರೀತ್‌ ಆಬಳಿಕ ಮಿಹಿರ್‌ ಹಿರ್ವಾನಿ ಜತೆಗೂಡಿ 8ನೇ ವಿಕೆಟಿಗೆ 58 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡು ಮಧ್ಯಪ್ರದೇಶದ ರನ್‌ ಮೊತ್ತ ಏರಿಸಲು ನೆರವಾದರು. ಈ ಜೋಡಿ ಮುರಿದ ಬಳಿಕ ಮಧ್ಯ ಪ್ರದೇಶ 338 ರನ್ನಿಗೆ ಆಲೌಟಾಯಿತು.

ವಿಕಾಸ್‌ ಮಿಶ್ರಾ 58 ರನ್ನಿಗೆ 3 ವಿಕೆಟ್‌ ಕಿತ್ತರೆ ಮನನ್‌ ಶರ್ಮ 46 ರನ್ನಿಗೆ 4 ವಿಕೆಟ್‌ ಕಿತ್ತು ಮಧ್ಯ ಪ್ರದೇಶ ಬೇಗನೇ ಆಲೌಟ್‌ ಆಗಲು ಕಾರಣರಾದರು.

ದಿಲ್ಲಿ ಆರಂಭಿಕ ಆಘಾತ: ಅನುಭವಿ ಆಟಗಾರ ಗೌತಮ್‌ ಗಂಭೀರ್‌ ಅವರನ್ನು ಬೇಗನೇ ಕಳೆದುಕೊಂಡಾಗ ದಿಲ್ಲಿ ಆಘಾತ ಅನುಭವಿಸಿತು. ಆದರೆ ಕುನಾಲ್‌ ಚಾಂಡೇಲ ಮತ್ತು ದ್ರುವ್‌ ಶೋರೆ ದ್ವಿತೀಯ ವಿಕೆಟಿಗೆ 145 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡು ತಂಡವನ್ನು ಆಧರಿಸಿದರು. ಇದರಿಂದ ದಿಲ್ಲಿ ಆರಂಭಿಕ ಆಘಾತದಿಂದ ಚೇತರಿಸಿಕೊಳ್ಳುವಂತಾಯಿತು. ದಿನದ ಅಂತಿಮ ಅವಧಿಯ ಆಟದಲ್ಲಿ 78 ರನ್‌ ಗಳಿಸಿದ ದ್ರುವ್‌ ಔಟಾದರೆ ಚಾಂಡೇಲ 73 ರನ್ನುಗಳಿಂದ ಮೂರನೇ ದಿನದ ಆಟ ಮುಂದುವರಿಸಲಿದ್ದಾರೆ.

ಸಂಕ್ಷಿಪ್ತ ಸ್ಕೋರು: ಮಧ್ಯ ಪ್ರದೇಶ 338 (ಹರ್‌ಪ್ರೀತ್‌ ಸಿಂಗ್‌ 107 ಔಟಾಗದೆ, ಅಂಕಿತ್‌ ದಾನೆ 59, ನುವನ್‌ ಓಜಾ 49, ಪುನೀತ್‌ ದಾತೆ 35, ವಿಕಾಸ್‌ ಮಿಶ್ರಾ 58ಕ್ಕೆ 3, ಮನನ್‌ ಶರ್ಮ  46ಕ್ಕೆ 4); ದಿಲ್ಲಿ 2 ವಿಕೆಟಿಗೆ 180 (ಕುನಾಲ್‌ ಚಾಂಡೇಲ 73 ಬ್ಯಾಟಿಂಗ್‌, ದ್ರುವ್‌ ಶೋರೆ 78).

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.