ರಣಜಿ ಫೈನಲ್‌ ಇಂದಿನಿಂದ: ಮಧ್ಯಪ್ರದೇಶ ಎದುರಾಳಿ; 42ನೇ ಪ್ರಶಸ್ತಿಗಾಗಿ ಮುಂಬಯಿ ಪ್ರಯತ್ನ


Team Udayavani, Jun 22, 2022, 6:45 AM IST

ರಣಜಿ ಫೈನಲ್‌ ಇಂದಿನಿಂದ: ಮಧ್ಯಪ್ರದೇಶ ಎದುರಾಳಿ; 42ನೇ ಪ್ರಶಸ್ತಿಗಾಗಿ ಮುಂಬಯಿ ಪ್ರಯತ್ನ

ಬೆಂಗಳೂರು: ರಣಜಿ ಟ್ರೋಫಿ ಕ್ರಿಕೆಟ್‌ ಕೂಟದ ಫೈನಲ್‌ ಹೋರಾಟವು ಬುಧ ವಾರದಿಂದ ಬೆಂಗಳೂರಿನಲ್ಲಿ ಆರಂಭವಾ ಗಲಿದೆ. ಬಲಿಷ್ಠ ಮುಂಬಯಿ ತಂಡವು 42ನೇ ಬಾರಿ ಪ್ರಶಸ್ತಿ ಗೆಲ್ಲುವ ಗುರಿಯೊಂದಿಗೆ ಮಧ್ಯ ಪ್ರದೇಶ ತಂಡವನ್ನು ಎದುರಿಸಲಿದೆ.

ತಂಡವು ಪ್ರಶಸ್ತಿ ಗೆಲ್ಲುವುದನ್ನು ಎದುರು ನೋಡುತ್ತಿದೆ. ಶರಣಾಗುವ ಅವಕಾಶವೇ ಇಲ್ಲ ಎಂದು ಮಧ್ಯಪ್ರದೇಶ ತಂಡದ ಮುಖ್ಯ ಕೋಚ್‌ ಚಂದ್ರಕಾಂತ್‌ ಪಂಡಿತ್‌ ಹೇಳಿದ್ದಾರೆ. ಆದರೆ ಅಮೋಲ್‌ ಮಜುಮಾªರ್‌ ಮಾರ್ಗದರ್ಶನ ಪಡೆದ ಮುಂಬಯಿ ತಂಡವು ಈ ಸರಣಿಯುದ್ದಕ್ಕೂ ಅಮೋಘ ಪ್ರದರ್ಶನ ನೀಡಿದ್ದು ಎಲ್ಲ ಪಂದ್ಯಗಳಲ್ಲೂ ಪ್ರಾಬಲ್ಯ ಮೆರೆದಿದ್ದಾರೆ. ಹೀಗಾಗಿ ಮುಂಬಯಿ ಸುಲಭವಾಗಿ ಶರಣಾಗುವ ಪ್ರಶ್ನೆಯೇ ಇಲ್ಲವೆಂದು ಹೇಳಬಹುದು.

 

ತಂಡದ ಆಟಗಾರರ ಸಾಮರ್ಥ್ಯವನ್ನು ಗಮನಿಸಿದರೆ ಮುಂಬಯಿ ತಂಡವೇ ಪ್ರಶಸ್ತಿ ಗೆಲ್ಲುವ ಫೇವರಿಟ್‌ ತಂಡವೆನಿಸಿದೆ. ನಾಯಕ ಪೃಥ್ವಿ ಶಾ, ಯಶಸ್ವಿ ಜೈಸ್ವಾಲ್‌, ಸರ್ಫರಾಜ್ ಖಾನ್ ಅಮೋಘ ಫಾರ್ಮ್ ನಲ್ಲಿದ್ದಾರೆ,

ಸರ್ಫರಾಜ್ ಖಾನ್ ಕೇವಲ 5 ಪಂದ್ಯಗಳಲ್ಲಿ 800 ಪ್ಲಸ್‌ ರನ್‌ ಗಳಿಸಿದ ಸಾಧನೆ ಮಾಡಿದ್ದಾರೆ. ಯಶಸ್ವಿ ಜೈಸ್ವಾಲ್‌ ಕ್ವಾರ್ಟರ್‌ಫೈನಲ್‌ ಮತ್ತು ಸೆಮಿಫೈನಲ್‌ನ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಮೂರು ಶತಕ ಬಾರಿಸಿದ ಸಾಧಕರಾಗಿದ್ದಾರೆ. ಅವರು ಐಪಿಎಲ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ ಪರ ಉತ್ತಮ ನಿರ್ವಹಣೆಯನ್ನೂ ನೀಡಿದ್ದರು. ಪೃಥ್ವಿ ಶಾ, ಅರ್ಮಾನ್‌ ಜಾಫ‌ರ್‌, ಸುವೇದ್‌ ಪಾರ್ಕರ್‌ ಇಷ್ಟರವರೆಗಿನ ಪಂದ್ಯಗಳಲ್ಲಿ ಉತ್ತಮ ನಿರ್ವಹಣೆ ದಾಖಲಿಸಿದ್ದಾರೆ.

ಮುಂಬಯಿಯ ಬ್ಯಾಟಿಂಗ್‌ ಬಲಿಷ್ಠವಾಗಿದ್ದು ಶ್ರೇಷ್ಠ ನಿರ್ವಹಣೆ ನೀಡುವ ಹಲವು ಆಟಗಾರರು ತಂಡದಲ್ಲಿದ್ದಾರೆ. ಆದರೆ ತಂಡದ ಬೌಲಿಂಗ್‌ ಅಷ್ಟೊಂದು ಪರಿಣಾಮಕಾರಿಯಾಗಿಲ್ಲ. ಶಾಮ್ಸ್‌ ಮುಲಾನಿ ಮತ್ತು ಆಫ್ ಸ್ಪಿನ್ನರ್‌ ತನುಷ್‌ ಕೋಟ್ಯಾನ್‌ ಅವರ ನಿರ್ವಹಣೆ ಉತ್ತಮವಾಗಿಲ್ಲ.

ಮಧ್ಯ ಪ್ರದೇಶ ಇತ್ತೀಚೆಗಿನ ದಿನಗಳಲ್ಲಿ ಹೆಚ್ಚು ಸುಧಾರಿತ ತಂಡಗಳಲ್ಲಿ ಒಂದಾಗಿದೆ ಮತ್ತು ಪಂಡಿತ್‌ ಅವರ ಮಾರ್ಗದರ್ಶನದಲ್ಲಿ ತಂಡವು ರಣಜಿ ಟ್ರೋಫಿಯ ಫೈನಲ್‌ ಹಂತಕ್ಕೇರಲು ಯಶಸ್ವಿಯಾಗಿದೆ.

ಬ್ಯಾಟಿಂಗ್‌ನಲ್ಲಿ ತಂಡ ವೆಂಕಟೇಶ್‌ ಅಯ್ಯರ್‌ ಅವರನ್ನು ಕಳೆದುಕೊಂಡಿರುವುದು ದೊಡ್ಡ ಪೆಟ್ಟಾಗಬಹುದು. ವೇಗಿ ಆವೇಶ್‌ ಖಾನ್‌ ಕೂಡ ತಂಡದಲ್ಲಿಲ್ಲ. ಕುಮಾರ್‌ ಕಾರ್ತಿಕೇಯ ಬಹಳಷ್ಟು ಸಮಯ ಬೌಲಿಂಗ್‌ ಮಾಡುವ ಸಾಮರ್ಥ್ಯ ಹೊಂದಿರುವುದು ತಂಡಕ್ಕೆ ಲಾಭವಾಗಲಿದೆ. ಹಿಮಾಂಶು ಮಂತ್ರಿ ಮತ್ತು ಅಕ್ಷತ್‌ ರಘುವಂಶಿ ಬ್ಯಾಟಿಂಗ್‌ನಲ್ಲಿ ಉತ್ತಮ ನಿರ್ವಹಣೆ ನೀಡುತ್ತಿದ್ದಾರೆ
ಅಂಕಣ ಹೇಗಿದೆ?
ಬೆಂಗಳೂರಿನಲ್ಲಿ ಇತ್ತೀಚೆಗೆ ಸತತವಾಗಿ ಮಳೆ ಬರುತ್ತಿದೆ. ಹಾಗಾಗಿ ಮಳೆ ಬಿಟ್ಟು ಕೊಟ್ಟರೆ ಮಾತ್ರ ಪಂದ್ಯ ನಡೆಯುತ್ತದೆ. ಜೂನ್‌ ತಿಂಗಳು ಸಾಮಾನ್ಯವಾಗಿ ಕರ್ನಾಟಕದಲ್ಲಿ ಮಳೆಯಿದ್ದೇ ಇರುತ್ತದೆ! ಸದ್ಯ ಅಂಕಣದಲ್ಲಿ ಅಲ್ಲಲ್ಲಿ ಸಣ್ಣಗೆ ಹುಲ್ಲಿದೆ. ಹಾಗಾಗಿ ಬೌನ್ಸ್‌ ಆಗುವುದು ಖಚಿತ. ತೇವಾಂಶದ ನೆರವೂ ಇರುವು ದರಿಂದ ವೇಗಿಗಳು ಮಿಂಚುವ ಎಲ್ಲ ಅವಕಾಶವಿದೆ.

ಪ್ರೇಕ್ಷಕರಿಗೆ ಉಚಿತ ಪ್ರವೇಶ
ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುವ ಅಂತಿಮ ಪಂದ್ಯವನ್ನು ವೀಕ್ಷಿಸಲು ಉಚಿತ ಅವಕಾಶವಿದೆ. ಭಾಗವಹಿಸುವ ಪ್ರೇಕ್ಷಕರು 15ನೇ ಸಂಖ್ಯೆಯ ಗೇಟ್‌ನಿಂದ ಒಳಪ್ರವೇಶಿಸಬಹುದು. ಪಿ.3 ಸ್ಟಾಂಡ್‌ನ‌ಲ್ಲಿ ಕುಳಿತು ಪಂದ್ಯವನ್ನು ವೀಕ್ಷಿಸಬಹುದು ಎಂದು ಕೆಎಸ್‌ಸಿಎ ತಿಳಿಸಿದೆ.

 

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.