Ranji Trophy ಕ್ರಿಕೆಟ್:ಕರ್ನಾಟಕ ತಂಡಕ್ಕೆ ಅಗರ್ವಾಲ್ ನಾಯಕ
Team Udayavani, Dec 27, 2023, 11:40 PM IST
ಬೆಂಗಳೂರು: ಅನುಭವಿ ಆರಂಭಿಕ ಆಟಗಾರ ಮಾಯಾಂಕ್ ಅಗರ್ವಾಲ್ ಅವರು ಮುಂಬರುವ ರಣಜಿ ಟ್ರೋಫಿ ಋತುವಿನ ಮೊದಲೆರಡು ಪಂದ್ಯಗಳಿಗೆ ಕರ್ನಾಟಕ ತಂಡದ ನಾಯಕರನ್ನಾಗಿ ಹೆಸರಿಸಲಾಗಿದೆ. ಭರವಸೆಯ ಯುವ ಬ್ಯಾಟ್ಸ್ಮನ್ ನಿಕಿನ್ ಜೋಸ್ ಉಪನಾಯಕರಾಗಿ ನೇಮಕಗೊಂಡಿದ್ದಾರೆ.
ಆದರೆ ಕೆಎಲ್ ರಾಹುಲ್ ಅವರನ್ನು 16 ಸದಸ್ಯರ ರಣಜಿ ತಂಡದಲ್ಲಿ ಹೆಸರಿಸಲಾಗಿಲ್ಲ. ಭಾರತ ತಂಡವು ಮುಂದಿನ ದಿನಗಳಲ್ಲಿ ಅಘಾ^ನಿಸ್ಥಾನ ಮತ್ತು ಇಂಗ್ಲೆಂಡ್ ವಿರುದ್ಧ ಆಡಲಿರು ವುದರಿಂದ ಕೆಎಲ್ ರಾಹುಲ್ ಅವರನ್ನು ರಣಜಿಗೆ ಪರಿಗಣಿಸಲಾಗಿಲ್ಲ ಎಂದು ತಿಳಿದುಬಂದಿದೆ.
ಪಂಜಾಬ್ ಮೊದಲ ಎದುರಾಳಿ
ಕರ್ನಾಟಕ ತಂಡವು ಜ. 5ರಿಂದ 8ರ ವರೆಗೆ ಹುಬ್ಬಳ್ಳಿಯಲ್ಲಿ ನಡೆಯಲಿರುವ . ಮೊದಲ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಎದುರಿಸಲಿದೆ. ದ್ವಿತೀಯ ಪಂದ್ಯದಲ್ಲಿ ಕರ್ನಾಟಕವು ಅಹ್ಮದಾಬಾದ್ನಲ್ಲಿ ಗುಜರಾತ್ ವಿರುದ್ಧ ಆಡಲಿದೆ. ಈ ಪಂದ್ಯವು ಜ. 12ರಿಂದ 15ರ ವರೆಗೆ ಜರಗಲಿದೆ. ಮಾಜಿ ಬ್ಯಾಟ್ಸ್ ಮನ್ ಪಿ.ವಿ. ಶಶಿಕಾಂತ್ ತಂಡದ ಕೋಚ್ ಆಗಿ ಉಳಿಸಿಕೊಳ್ಳಲಾಗಿದೆ.
ಕರ್ನಾಟಕ ತಂಡ: ಅಗರ್ವಾಲ್ (ನಾಯಕ), ರವಿಕುಮಾರ್ ಸಮರ್ಥ, ಪಡಿಕ್ಕಲ್, ನಿಕಿನ್ ಜೋಸ್, ಮನಿಷ್ ಪಾಂಡೆ, ಶುಭಾಂಗ್ ಪಾಂಡೆ, ಶರತ್ ಶ್ರೀನಿವಾಸ್, ವೈಶಾಖ್ ವಿಜಯಕುಮಾರ್, ವಾಸುಕಿ ಕೌಶಿಕ್, ವಿದ್ವತ್ ಕಾವೇರಪ್ಪ, ಕೆ. ಶಶಿಕುಮಾರ್, ಸುಜಯ್ ಸಟೆರಿ, ಡಿ. ನಿಶ್ಚಲ್, ಎಂ. ವೆಂಕಟೇಶ್, ಕಿಶನ್ ಎಸ್. ಬದರೆ, ಎ.ಸಿ. ರೋಹಿತ್ ಕುಮಾರ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ