Ranji ಟ್ರೋಫಿ ಕ್ರಿಕೆಟ್ : ಕರ್ನಾಟಕಕ್ಕೆ ಚಂಡೀಗಢ, ಮುಂಬಯಿಗೆ ಅಸ್ಸಾಂ ಸವಾಲು
Team Udayavani, Feb 16, 2024, 6:00 AM IST
ಹುಬ್ಬಳ್ಳಿ: ರಣಜಿ ಟ್ರೋಫಿ ಕ್ರಿಕೆಟ್ ಕೂಟದ ಅಂತಿಮ ಸುತ್ತಿನ ಪಂದ್ಯಗಳು ನಾಳೆ ಯಿಂದ ವಿವಿಧ ಸ್ಥಳಗಳಲ್ಲಿ ನಡೆ ಯಲಿವೆ. “ಸಿ’ ಬಣದಲ್ಲಿ 24 ಅಂಕಗ ಳೊಂದಿಗೆ ಅಗ್ರಸ್ಥಾನದಲ್ಲಿರುವ ಕರ್ನಾಟಕ ತಂಡವು ಹುಬ್ಬಳ್ಳಿಯಲ್ಲಿ ನಡೆಯಲಿರುವ ಪಂದ್ಯದಲ್ಲಿ ಚಂಡೀಗಢ ತಂಡದ ಸವಾಲನ್ನು ಎದುರಿಸಲಿದೆ.
“ಸಿ’ ಬಣದಲ್ಲಿ ಸದ್ಯ 22 ಅಂಕಗ ಳೊಂದಿಗೆ ದ್ವಿತೀಯ ಸ್ಥಾನದಲ್ಲಿರುವ ತಮಿಳುನಾಡು ತಂಡವು ಪಂಜಾಬ್ ತಂಡವನ್ನು ಎದುರಿಸಲಿದ್ದರೆ 19 ಅಂಕಗಳೊಂದಿಗೆ ಮೂರನೇ ಸ್ಥಾನ ದಲ್ಲಿರುವ ಗುಜರಾತ್ ತಂಡ ಗೋವಾ ತಂಡವನ್ನು ಎದುರಿಸಲಿದೆ. ಪಂಜಾಬ್ ಆಡಿದ ಆರು ಪಂದ್ಯಗಳಲ್ಲಿ ಒಂದರಲ್ಲಿ ಜಯ ಸಾಧಿಸಿದ್ದರೆ ಚಂಡೀಗಢ ಮತ್ತು ಗೋವಾ ಗೆಲುವು ಕಾಣಲಿಲ್ಲ. ಹೀಗಾಗಿ ಕರ್ನಾಟಕ, ತಮಿಳುನಾಡು ಮತ್ತು ಗುಜರಾತ್ ಈ ಮಹತ್ವದ ಪಂದ್ಯದಲ್ಲಿ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ. ಒಂದು ವೇಳೆ ಫಲಿತಾಂಶದಲ್ಲಿ ಏನಾ ದರೂ ಬದಲಾವಣೆಯಾದರೆ “ಸಿ’ ಬಣದಿಂದ ಯಾರು ಮುಂದಿನ ಸುತ್ತಿಗೇರು ತ್ತಾರೆ ಎಂಬುದು ಕುತೂಹಲಕ್ಕೆ ಕಾರಣವಾಗಲಿದೆ.
ಮುಂಬಯಿಗೆ ಅಸ್ಸಾಂ
“ಬಿ’ ಬಣದಲ್ಲಿ ಆಡಿದ ಆರು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದು 30 ಅಂಕ ಪಡೆದಿರುವ ಮುಂಬಯಿ ತಂಡವು ಮುಂದಿನ ಹಂತಕ್ಕೇರಿದೆ. ಅದು ಅಂತಿಮ ಸುತ್ತಿನ ಪಂದ್ಯದಲ್ಲಿ ಅಸ್ಸಾಂ ವಿರುದ್ಧ ಆಡಲಿದೆ. 25 ಅಂಕ ಹೊಂದಿರುವ ಆಂಧ್ರ ಪ್ರದೇಶ ಕೂಡ ಮುನ್ನಡೆಯುವುದು ಖಚಿತವಾಗಿದೆ. ಆಂಧ್ರ ಅಂತಿಮ ಸುತ್ತಿನ ಪಂದ್ಯದಲ್ಲಿ ಕೇರಳವನ್ನು ಎದುರಿಸಲಿದೆ. ಮೂರನೇ ಸ್ಥಾನದಲ್ಲಿರುವ ಕೇರಳ 14 ಅಂಕ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್