Ranji ಟ್ರೋಫಿ ಕ್ರಿಕೆಟ್‌:ಕರ್ನಾಟಕಕ್ಕೆ ಬಲಿಷ್ಠ ತಮಿಳುನಾಡು ಸವಾಲು


Team Udayavani, Feb 8, 2024, 11:33 PM IST

1-sadsada

ಚೆನ್ನೈ:  ರಣಜಿ ಟ್ರೋಫಿ ಕ್ರಿಕೆಟ್‌ ಕೂಟದ “ಸಿ’ ಬಣದ ಮೊದಲೆರಡು ಸ್ಥಾನದಲ್ಲಿರುವ ತಮಿಳುನಾಡು ಮತ್ತು ಕರ್ನಾಟಕ ತಂಡಗಳು ಶುಕ್ರವಾರದಿಂದ ನಡೆಯುವ ಆರನೇ ಸುತ್ತಿನ ಹೋರಾಟದಲ್ಲಿ ಪರಸ್ಪರ ಮುಖಾಮುಖೀಯಾಗಲಿವೆ.

ಆಡಿದ ಐದು ಪಂದ್ಯಗಳಿಂದ ತಲಾ ಮೂರರಲ್ಲಿ ಗೆದ್ದಿರುವ ತಮಿಳುನಾಡು ಮತ್ತು ಕರ್ನಾಟಕ ಸದ್ಯ ತಲಾ 21 ಅಂಕಗಳನ್ನು ಹೊಂದಿದೆ. ಆದರೆ ಉತ್ತಮ ರನ್‌ಧಾರಣೆಯ ಆಧಾರದಲ್ಲಿ ತಮಿಳುನಾಡು ಅಗ್ರಸ್ಥಾನ ದಲ್ಲಿದೆ. ಮೂರನೇ ಸ್ಥಾನದಲ್ಲಿರುವ ತ್ರಿಪುರ 14 ಅಂಕ ಹೊಂದಿದೆ.

ಚಂಡೀಗಢ ಎದುರಾಳಿ
ಇನ್ನೆರಡು ಸುತ್ತಿನ ಪಂದ್ಯಗಳು ಬಾಕಿ ಉಳಿದಿದ್ದು ಪ್ರತಿ ಬಣದ ಅಗ್ರ ಎರಡು ತಂಡ ಗಳು ಕ್ವಾರ್ಟರ್‌ಫೈನಲಿಗೇರಲಿವೆ. ಕರ್ನಾಟಕ ಅಂತಿಮ ಸುತ್ತಿನಲ್ಲಿ ಚಂಡೀ ಗಢ ತಂಡವನ್ನು ಹುಬ್ಬಳ್ಳಿಯಲ್ಲಿ ಎದುರಿಸಲಿದೆ.
ಆರೋಗ್ಯ ಸಮಸ್ಯೆಯಿಂದ ಗುಣಮುಖರಾಗಿರುವ ನಾಯಕ ಮಯಾಂಕ್‌ ಅಗರ್ವಾಲ್‌ ಮತ್ತೆ ತಂಡಕ್ಕೆ ಮರಳಿದ್ದು ತಮಿಳು ನಾಡು ವಿರುದ್ಧ ತಂಡವನ್ನು ಮುನ್ನಡೆಸ ಲಿದ್ದಾರೆ. ಅವರ ಆಗಮನದಿಂದ ತಂಡದ ಬ್ಯಾಟಿಂಗ್‌ ಶಕ್ತಿ ಬಲ ಗೊಂಡಿದೆ. ತಮಿಳುನಾಡು ವಿರುದ್ಧ ಕನಿಷ್ಠ ಪಕ್ಷ ಡ್ರಾ ಸಾಧಿಸಿದರೂ ಕರ್ನಾಟಕ ಮುಂದಿನ ಸುತ್ತಿಗೇರುವ ಸಾಧ್ಯತೆಯಿದೆ. ತಮಿಳುನಾಡು ಅಂತಿಮ ಸುತ್ತಿನಲ್ಲಿ ಪಂಜಾಬ್‌ ತಂಡ ವನ್ನು ಎದುರಿಸಲಿದೆ. ಪಂಜಾಮ್‌ ಇಷ್ಟರವರೆಗೆ ಒಂದೇ ಪಂದ್ಯದಲ್ಲಿ ಗೆಲುವು ಸಾಧಿಸಿದೆ.

ಶಿವಂ ದುಬೆಗೆ ವಿಶ್ರಾಂತಿ
ಆಡಿದ ಐದು ಪಂದ್ಯಗಳಿಂದ ನಾಲ್ಕರಲ್ಲಿ ಗೆಲುವು ಸಾಧಿಸಿ 27 ಅಂಕ ಹೊಂದಿರುವ ಮುಂಬಯಿ ತಂಡವು “ಬಿ’ ಬಣದಲ್ಲಿ ಅಗ್ರಸ್ಥಾನದಲ್ಲಿದೆ. ಮುಂಬಯಿ ಮುಂದಿನ ಪಂದ್ಯದಲ್ಲಿ ಛತ್ತೀಸ್‌ಗಢ ತಂಡವನ್ನು ಎದುರಿಸಲಿದ್ದು ಗೆಲ್ಲುವ ವಿಶ್ವಾಸದಲ್ಲಿದೆ.

ಈಗಾಗಲೇ ಮುಂದಿನ ಹಂತಕ್ಕೇರುವುದನ್ನು ಖಚಿತಪಡಿಸಿಕೊಂಡಿರುವ ಮುಂಬಯಿ ಈ ಪಂದ್ಯಕ್ಕಾಗಿ ಅನುಭವಿ ಶಿವಂ ದುಬೆ ಅವರಿಗೆ ವಿಶ್ರಾಂತಿ ನೀಡಿದೆ. ಕಾಲಿನ ಸ್ನಾಯು ಬಿಗಿತದ ಸಮಸ್ಯೆಯಿಂದ ಬಳಲುತ್ತಿರುವ ಅವರು ಈ ಪಂದ್ಯದಲ್ಲಿ ಆಡುವುದಿಲ್ಲ. ಆದರೆ ಅಂತಿಮ ಲೀಗ್‌ ಮತ್ತು ಮುಂದಿನ ನಾಕೌಟ್‌ ಪಂದ್ಯಗಳಿಗಾಗಿ ತಂಡಕ್ಕೆ ಮರಳಲಿದ್ದಾರೆ.

ಗಾಯದ ಸಮಸ್ಯೆಯಿಂದಾಗಿ ಬಂಗಾಲ ವಿರುದ್ಧದ ಪಂದ್ಯವನ್ನು ಕಳೆದುಕೊಂಡಿದ್ದ ಅಜಿಂಕ್ಯ ರಹಾನೆ ಇದೀಗ ತಂಡಕ್ಕೆ ಮರಳಿದ್ದಾರೆ. ರಹಾನೆ ಅನುಪಸ್ಥಿತಿಯಲ್ಲಿ ದುಬೆ ಬಂಗಾಲ ವಿರುದ್ಧದ ಪಂದ್ಯದ ವೇಳೆ ತಂಡವನ್ನು ಮುನ್ನಡೆಸಿದ್ದರು.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.