ಜಮ್ಮು ವಿರುದ್ಧ ಜಬರ್ದಸ್ತ್ ಪ್ರದರ್ಶನ: ಕರ್ನಾಟಕ ವಿಶ್ವಾಸ


Team Udayavani, Feb 20, 2020, 6:30 AM IST

PTI2_19_2020_000023A

ಜಮ್ಮು: ರಣಜಿ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿಯ ನಾಕೌಟ್‌ ಹಣಾಹಣಿಗೆ ದೇಶದ 4 ಮೈದಾನಗಳು ಸಜ್ಜಾಗಿ ನಿಂತಿವೆ. ಗುರುವಾರದಿಂದ ಏಕಕಾಲಕ್ಕೆ 5 ದಿನಗಳ ಕ್ವಾರ್ಟರ್‌ ಫೈನಲ್‌ ಮುಖಾಮುಖೀ ಆರಂಭವಾಗಲಿದ್ದು, ಜಮ್ಮುವಿನಲ್ಲಿ ನೆಚ್ಚಿನ ಕರ್ನಾಟಕ ಆತಿಥೇಯ ಜಮ್ಮು ಮತ್ತು ಕಾಶ್ಮೀರ ವಿರುದ್ಧ ಜಬರ್ದಸ್ತ್ ಪ್ರದರ್ಶನ ನೀಡುವ ಉತ್ಸಾಹದಲ್ಲಿದೆ.

ಕರ್ನಾಟಕ ಲೀಗ್‌ ಹಂತದಲ್ಲಿ ಎಲೈಟ್‌ ಎ-ಬಿ ವಿಭಾಗದ ಅಜೇಯ ತಂಡವಾದರೆ, ಆಲ್‌ರೌಂಡರ್‌ ಪರ್ವೇಜ್‌ ರಸೂಲ್‌ ನಾಯಕತ್ವದ ಜಮ್ಮು ಕಾಶ್ಮೀರ ಎಲೈಟ್‌ ಸಿ ವಿಭಾಗದ ಅಗ್ರಸ್ಥಾನಿ ಯಾಗಿದೆ. ಮೇಲ್ನೋಟಕ್ಕೆ ಕರ್ನಾಟಕ ಅನುಭವಿ ತಂಡವಾದರೆ, ಜಮ್ಮು ಕಾಶ್ಮೀರ ಹೊಸ ಹುರುಪಿನ ಯುವ ಪಡೆಯಾಗಿ ಗೋಚರಿಸುತ್ತದೆ.

ಕಪ್ತಾನ ರಸೂಲ್‌ 403 ರನ್‌ ಪೇರಿಸುವ ಜತೆಗೆ 25 ವಿಕೆಟ್‌ ಕಿತ್ತು ಆಲ್‌ರೌಂಡ್‌ ಪ್ರದರ್ಶನ ನೀಡಿದ್ದಾರೆ. ಅಬ್ದುಲ್‌ ಸಮದ್‌ ಪ್ರಚಂಡ ಫಾರ್ಮ್ ನಲ್ಲಿರುವ ಮತ್ತೂಬ್ಬ ಆಟಗಾರ. ಅವರು ಲೀಗ್‌ನಲ್ಲಿ 547 ರನ್‌ ಪೇರಿಸಿ ತಂಡದ ಯಶಸ್ಸಿನಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಲೀಗ್‌ ಹಂತದಲ್ಲಿ ಅದು ಹರ್ಯಾಣ ವಿರುದ್ಧವಷ್ಟೇ ಸೋತಿತ್ತು.

ಕರ್ನಾಟಕಕ್ಕೆ ಪಾಂಡೆ ಬಲ
ನ್ಯೂಜಿಲ್ಯಾಂಡ್‌ ಪ್ರವಾಸ ಮುಗಿಸಿ ಬಂದಿರುವ ಮನೀಷ್‌ ಪಾಂಡೆ ಮರಳಿ ತಂಡವನ್ನು ಸೇರಿಕೊಂಡಿರುವುದರಿಂದ ಕರ್ನಾಟಕದ ಬ್ಯಾಟಿಂಗ್‌ ವಿಭಾಗಕ್ಕೆ ಹೆಚ್ಚಿನ ಬಲ ಬಂದಿದೆ. ಸಮರ್ಥ್, ಪಡಿಕ್ಕಲ್‌, ನಾಯರ್‌, ದೇಶಪಾಂಡೆ ಬ್ಯಾಟಿಂಗ್‌ ವಿಭಾಗದ ಉಳಿದ ಪ್ರಮುಖರು. ಸ್ಪಿನ್‌ ಆಲ್‌ರೌಂಡರ್‌ಗಳಾದ ಕೆ. ಗೌತಮ್‌, ಶ್ರೇಯಸ್‌ ಗೋಪಾಲ್‌; ವೇಗಿಗಳಾದ ಮಿಥುನ್‌, ಪ್ರಸಿದ್ಧ್ ಕೃಷ್ಣ, ಮೋರೆ ಅವರನ್ನೊಳಗೊಂಡ ತಂಡ ಹೆಚ್ಚು ವೈವಿಧ್ಯಮಯವೂ ಹೌದು.

ಕರ್ನಾಟಕ ಲೀಗ್‌ ಹಂತದ 8 ಪಂದ್ಯಗಳಲ್ಲಿ ನಾಲ್ಕನ್ನು ಗೆದ್ದಿದೆ. ಸೋಲಿನ ಮುಖ ಕಂಡಿಲ್ಲ. ಉಳಿದ ನಾಲ್ಕನ್ನು ಡ್ರಾ ಮಾಡಿಕೊಂಡಿದೆ. ಸೋಲನ್ನು ತಪ್ಪಿಸಿಕೊಂಡದ್ದು, ಸೋಲಲಿರುವ ಪಂದ್ಯವನ್ನು ಗೆದ್ದದ್ದು ಕರ್ನಾಟಕದ ಅಭಿಯಾನದ ಪ್ರಮುಖ ಅಂಶಗಳು.

ಈ ಬಾರಿ ದೊಡ್ಡ ದೊಡ್ಡ ತಂಡಗಳು ನಾಕೌಟ್‌ ರೇಸ್‌ನಿಂದ ಹೊರಬಿದ್ದಿದ್ದು, ಕೆಲವೇ ಬಲಿಷ್ಠ ತಂಡಗಳು ಉಳಿದು ಕೊಂಡಿವೆ. ಹೀಗಾಗಿ ಕ್ವಾರ್ಟರ್‌ ಫೈನಲ್‌ನಲ್ಲಿ ಜಮ್ಮು ಕಾಶ್ಮೀರ ವಿರುದ್ಧ ಹೆಚ್ಚು ಎಚ್ಚರಿಕೆಯಿಂದ ಆಡಬೇಕಾದ ಅಗತ್ಯವಿದೆ.

ರಣಜಿ ಸಂಭಾವ್ಯ ತಂಡಗಳು

ಕರ್ನಾಟಕ:
ಆರ್‌. ಸಮರ್ಥ್, ದೇವದತ್ತ ಪಡಿಕ್ಕಲ್‌, ಮನೀಷ್‌ ಪಾಂಡೆ, ಕರುಣ್‌ ನಾಯರ್‌ (ನಾಯಕ), ಪವನ್‌ ದೇಶಪಾಂಡೆ, ಬಿ.ಆರ್‌. ಶರತ್‌, ಶ್ರೇಯಸ್‌ ಗೋಪಾಲ್‌, ಕೃಷ್ಣಪ್ಪ ಗೌತಮ್‌, ಅಭಿಮನ್ಯು ಮಿಥುನ್‌, ರೋನಿತ್‌ ಮೋರೆ, ಪ್ರಸಿದ್ಧ್ ಕೃಷ್ಣ/ಪ್ರತೀಕ್‌ ಜೈನ್‌.

ಜಮ್ಮು ಕಾಶ್ಮಿರ:
ಸೂರ್‍ಯಾಂಶ್‌ ರೈನಾ, ಜಿಯಾದ್‌ ಮಗ್ರಿ, ಶುಭಂ ಖಜುರಿಯಾ, ಶುಭಂ ಪುಂದಿರ್‌, ಪರ್ವೇಜ್‌ ರಸೂಲ್‌ (ನಾಯಕ), ಅಬ್ದುಲ್‌ ಸಮದ್‌, ಫ‌ಝಿಲ್‌ ರಶೀದ್‌, ಆಕಿಬ್‌ ನಬಿ, ರಾಮ್‌ ದಯಾಲ್‌, ಅಬಿದ್‌ ಮುಷ್ತಾಕ್‌/ಉಮರ್‌ ನಜೀರ್‌ ಮಿರ್‌, ಮುಜ¤ಬಾ ಯೂಸುಫ್.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.