ರಣಜಿ ಕ್ರಿಕೆಟ್‌: ಕರ್ನಾಟಕಕ್ಕೆ ಶಿವಂ ದುಬೆ ತಡೆ


Team Udayavani, Nov 22, 2018, 6:00 AM IST

22.jpg

ಬೆಳಗಾವಿ: ಮುಂಬಯಿ ಎದುರಿನ ರಣಜಿ ಕ್ರಿಕೆಟ್‌ ಪಂದ್ಯದ 2ನೇ ದಿನದಾಟದಲ್ಲಿ ಮಧ್ಯಮ ವೇಗಿ ಶಿವಂ ದುಬೆ ದಾಳಿಗೆ ಕರ್ನಾಟಕ ಆರಂಭದಲ್ಲಿಯೇ ಮುಗ್ಗರಿಸಿತಾದರೂ ಬಳಿಕ ಚೇತರಿಸಿಕೊಂಡು 400 ರನ್‌ ಪೇರಿಸುವಲ್ಲಿ ಯಶಸ್ವಿಯಾಗಿದೆ. ಜವಾಬು ನೀಡಲಾರಂಭಿಸಿದ ಮುಂಬಯಿ 2 ವಿಕೆಟಿಗೆ 99 ರನ್‌ ಗಳಿಸಿದೆ.

ರಾಜ್ಯ ಬ್ಯಾಟ್ಸಮನ್‌ಗಳನ್ನು ಕಟ್ಟಿ ಹಾಕಿದ ಮುಂಬಯಿಯ ಭರವಸೆಯ ಬೌಲರ್‌ ಶಿವಂ ದುಬೆ 53ಕ್ಕೆ 7 ವಿಕೆಟ್‌ ಪಡೆದರು. ಭೋಜನ ವಿರಾಮದ ಬಳಿಕ ಇನ್ನಿಂಗ್ಸ್‌ ಆರಂಭಿಸಿದ್ದ ಮುಂಬಯಿ ಅಖೀಲ್‌ ಹೆರ್ವಾಡ್ಕರ್‌ ಅವರನ್ನು ಬಹಳ ಬೇಗ ಕಳೆದುಕೊಂಡಿತು. 5 ರನ್‌ ಮಾಡಿದ ಅವರನ್ನು ಮಿಥುನ್‌ ಪೆವಿಲಿಯನ್‌ಗೆ ಕಳುಹಿಸಿದರು. 23 ರನ್‌ ಮಾಡಿದ ಆಶಯ್‌ ಸರ್ದೇಸಾಯಿ ಔಟಾದೊಡನೆ ದಿನದಾಟವನ್ನು ಕೊನೆಗೊಳಿಸಲಾಯಿತು. ಈ ವಿಕೆಟ್‌ ರೋನಿತ್‌ ಮೋರೆ ಪಾಲಾಯಿತು. ಬಿಷ್ಟಾ-ಸರ್ದೇಸಾಯಿ 2ನೇ ವಿಕೆಟಿಗೆ 57 ರನ್‌ ಒಟ್ಟುಗೂಡಿಸಿದರು. 69 ರನ್‌ ಮಾಡಿರುವ ಜಾಯ್‌ ಬಿಷ್ಟಾ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ. 111 ಎಸೆತ ಎದುರಿಸಿದ ಬಿಸ್ಟಾ 11 ಬೌಂಡರಿ ಸಿಡಿಸಿ ತಂಡದ ನೆರವಿಗೆ ನಿಂತಿದ್ದಾರೆ.

ಕರ್ನಾಟಕ ಕುಸಿತ
ಕರ್ನಾಟಕ ಮೊದಲ ದಿನದಾಟದಲ್ಲಿ 4ಕ್ಕೆ 263 ರನ್‌ ಗಳಿಸಿತ್ತು. ಬುಧವಾರದ 3ನೇ ಓವರ್‌ನಲ್ಲಿಯೇ ಧವಳ್‌ ಕುಲಕರ್ಣಿ ಎಸೆತಕ್ಕೆ ಶ್ರೇಯಸ್‌ ಗೋಪಾಲ್‌ (48) ಎಲ್‌ಬಿ ಆದರು. ಅನಂತರ ಬಂದ ಬಿ.ಆರ್‌. ಶರತ್‌ ಖಾತೆ ತೆರೆಯುವ ಮೊದಲೇ ಕುಲಕರ್ಣಿ ಎಸೆತಕ್ಕೆ ಎಲ್‌ಬಿ ಆಗಿ ತೆರಳಿದರು. 104 ರನ್‌ ಹೊಡೆದು ಬ್ಯಾಟಿಂಗ್‌ ಕಾಯ್ದುಕೊಂಡಿದ್ದ ಕೆ.ವಿ. ಸಿದ್ಧಾರ್ಥ್ ಮಾತ್ರ ಗಟ್ಟಿಯಾಗಿ ನಿಂತು ಮುಂಬಯಿ ಬೌಲರ್‌ಗಳಿಗೆ ಬೆವರಿಳಿಸುತ್ತ ಹೋದರು. ಅಂತಿಮವಾಗಿ 161 ರನ್‌ ಬಾರಿಸಿ ದುಬೆಗೆ ವಿಕೆಟ್‌ ಒಪ್ಪಿಸಿದರು. 299 ಎಸೆತಗಳ ಈ ಜವಾಬ್ದಾರಿಯುತ ಆಟದಲ್ಲಿ 19 ಬೌಂಡರಿ, 2 ಸಿಕ್ಸರ್‌ ಒಳಗೊಂಡಿತ್ತು. 

ಸಂಕ್ಷಿಪ್ತ ಸ್ಕೋರ್‌: ಕರ್ನಾಟಕ ಪ್ರಥಮ ಇನ್ನಿಂಗ್ಸ್‌-400 (ಕೆ.ವಿ.ಸಿದ್ಧಾರ್ಥ್ 161,  ಅಬ್ಟಾಸ್‌ 64, ಶ್ರೇಯಸ್‌ ಗೋಪಾಲ್‌ 48, ಶಿವಂ ದುಬೆ 53ಕ್ಕೆ 7, ಕುಲಕರ್ಣಿ 54ಕ್ಕೆ 2). ಮುಂಬಯಿ ಪ್ರಥಮ ಇನ್ನಿಂಗ್ಸ್‌- (ಜಾಯ್‌ ಬಿಷ್ಟಾ ಬ್ಯಾಟಿಂಗ್‌ 69, ಸರ್ದೇಸಾಯಿ 23, ಮಿಥುನ್‌ 22ಕ್ಕೆ 1, ಮೋರೆ 22ಕ್ಕೆ 1).

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.