INDvsAFG; ಭಾರತದ ವಿರುದ್ಧದ ಸರಣಿಯಿಂದ ಹೊರಬಿದ್ದ ಸ್ಪಿನ್ನರ್ ರಶೀದ್ ಖಾನ್
Team Udayavani, Jan 10, 2024, 3:48 PM IST
ಮುಂಬೈ: ಭಾರತ ವಿರುದ್ಧದ ಟಿ20 ಸರಣಿಗೆ ಸಿದ್ದವಾಗಿತ್ತಿರುವ ಅಫ್ಘಾನಿಸ್ತಾನ ಕ್ರಿಕೆಟ್ ತಂಡಕ್ಕೆ ಹಿನ್ನಡೆಯಾಗಿದೆ. ಪ್ರಮುಖ ಸ್ಪಿನ್ನರ್ ರಶೀದ್ ಖಾನ್ ಅವರು ಸರಣಿಯಿಂದಲೇ ಹೊರಬಿದ್ದಿದ್ದಾರೆ.
ಸ್ಟಾರ್ ಲೆಗ್ ಸ್ಪಿನ್ನರ್ ರಶೀದ್ ಒಂದೆರಡು ತಿಂಗಳ ಹಿಂದೆ ಬೆನ್ನಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಭಾರತ ವಿರುದ್ಧದ ಪಂದ್ಯಗಳಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಮೊಹಾಲಿಯಲ್ಲಿ ಬುಧವಾರ ನಡೆದ ಪಂದ್ಯ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ರಶೀದ್ ಅನುಪಸ್ಥಿತಿಯನ್ನು ನಾಯಕ ಇಬ್ರಾಹಿಂ ಜದ್ರಾನ್ ದೃಢಪಡಿಸಿದರು.
ಅಫ್ಘಾನಿಸ್ತಾನ ತಂಡವು ಭಾರತದ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಆಡಲಿದೆ. ಜ.11ರಂದು ಮೊಹಾಲಿ ಪಂದ್ಯದೊಂದಿಗೆ ಈ ಸರಣಿ ಪ್ರಾಂಭವಾಗಲಿದೆ.
“ಅವರು ಸಂಪೂರ್ಣವಾಗಿ ಫಿಟ್ ಆಗಿಲ್ಲ. ಅವರು ತನ್ನ ರಿಹ್ಯಾಬ್ ಮಾಡುತ್ತಿದ್ದಾರೆ. ನಾವು ಅವರನ್ನು ಸರಣಿಯಲ್ಲಿ ಕಳೆದುಕೊಳ್ಳುತ್ತಿದ್ದೇವೆ. ರಶೀದ್ ಇಲ್ಲದೆ ನಾವು ನಂಬುವ ಕೆಲವು ಆಟಗಾರರಿದ್ದಾರೆ” ಎಂದು ಜದ್ರಾನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಇದನ್ನೂ ಓದಿ:ಭಾರತ $35 ಟ್ರಿಲಿಯನ್ ಆರ್ಥಿಕತೆಯಾಗುವುದನ್ನು ತಡೆಯಲು ಯಾವುದೂ ಸಾಧ್ಯವಿಲ್ಲ: ಮುಕೇಶ್ ಅಂಬಾನಿ
“ನಾವು ವಿಶ್ವದ ಅತ್ಯುತ್ತಮ ಸ್ಪಿನ್ನರ್ ಗಳನ್ನು ಹೊಂದಿದ್ದೇವೆ, ನಮ್ಮಲ್ಲಿ ವೇಗದ ಬೌಲರ್ ಗಳೂ ಇದ್ದಾರೆ. ಆದರೆ ಬ್ಯಾಟಿಂಗ್ ಕೌಶಲ್ಯಗಳನ್ನು ಸುಧಾರಿಸುವುದು ನಮ್ಮ ಗುರಿಯಾಗಿದೆ. ನಾವು ಕಳೆದ ಎರಡು-ಮೂರು ದಿನಗಳಿಂದ ಇಲ್ಲಿ ತರಬೇತಿ ಪಡೆಯುತ್ತಿದ್ದೇವೆ” ಎಂದು ಜದ್ರಾನ್ ಹೇಳಿದರು.
ಅಕ್ಟೋಬರ್-ನವೆಂಬರ್ ನಲ್ಲಿ ನಡೆದ ಏಕದಿನ ವಿಶ್ವಕಪ್ ನಿಂದ ರಶೀದ್ ಸ್ಪರ್ಧಾತ್ಮಕ ಆಟವನ್ನು ಆಡಿಲ್ಲ. ಇತ್ತೀಚೆಗೆ ರಶೀದ್ ಅನುಪಸ್ಥಿತಿಯಲ್ಲಿ ಅಫ್ಗಾನಿಸ್ಥಾನ ತಂಡವು ಯುಎಇ ವಿರುದ್ಧ 2-1 ಟಿ20 ಸರಣಿಯನ್ನು ಗೆದ್ದುಕೊಂಡಿತ್ತು. ಭಾರತ ವಿರುದ್ಧದ ಸರಣಿಗಾಗಿ ಅಫ್ಘಾನಿಸ್ತಾನದ ಸ್ಪಿನ್ ವರ್ಕ್ಲೋಡ್ ನಿಭಾಯಿಸಲು ಮುಜೀಬ್ ಉರ್ ರೆಹಮಾನ್, ಮೊಹಮ್ಮದ್ ನಬಿ, ನೂರ್ ಅಹ್ಮದ್, ಖೈಸ್ ಅಹ್ಮದ್ ಮತ್ತು ಶರಫುದ್ದೀನ್ ಅಶ್ರಫ್ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ