Ravi Bishnoi: ಟಿ20 ವಿಶ್ವಕಪ್‌ಗೆ ತೃತೀಯ ಸ್ಪಿನ್ನರ್‌?


Team Udayavani, Dec 5, 2023, 6:14 AM IST

1-sdasdas

ಹೊಸದಿಲ್ಲಿ: ಲೆಗ್‌ಸ್ಪಿನ್ನರ್‌ ರವಿ ಬಿಷ್ಣೋಯಿ ಮುಂದಿನ ವರ್ಷದ ಟಿ20 ವಿಶ್ವಕಪ್‌ ಪಂದ್ಯಾವಳಿಗೆ ಟೀಮ್‌ ಇಂಡಿಯಾದ ತೃತೀಯ ಸ್ಪಿನ್ನರ್‌ ಸ್ಥಾನವನ್ನು ಗಟ್ಟಿ ಮಾಡಿಕೊಳ್ಳುವುದು ಬಹುತೇಕ ಖಚಿತ. ಅವರು ದಕ್ಷಿಣ ಆಫ್ರಿಕಾ ಪ್ರವಾಸದ ಟಿ20 ತಂಡಕ್ಕೆ ಆಯ್ಕೆಯಾಗು ವುದರೊಂದಿಗೆ ಇಂಥದೊಂದು ಸಾಧ್ಯತೆ ತೆರೆದುಕೊಂಡಿದೆ.

ಇದರಿಂದ ಹಿರಿಯ ಲೆಗ್‌ಸ್ಪಿನ್ನರ್‌ ಯಜುವೇಂದ್ರ ಚಹಲ್‌ ಅವರಿಗೆ ಟಿ20 ಬಾಗಿಲು ಬಹುತೇಕ ಮುಚ್ಚಲ್ಪಟ್ಟಿದೆ. ದಕ್ಷಿಣ ಆಫ್ರಿಕಾ ಸರಣಿಗೆ ಚಹಲ್‌ ಬದಲು ಬಿಷ್ಣೋಯಿ ಅವಕಾಶ ಪಡೆದ ಕಾರಣ, ಟಿ20 ವಿಶ್ವಕಪ್‌ಗ್ೂ ಇವರೇ ಮುಂದುವರಿಯುವುದು ಖಚಿತ ಎಂದೇ ವಿಶ್ಲೇಷಿಸಲಾಗುತ್ತಿದೆ.

ಚಹಲ್‌ಗಿಂತ ಕಿರಿಯ
ಚಹಲ್‌ಗೆ ಹೋಲಿಸಿದರೆ ಬಿಷ್ಣೋಯಿ 10 ವರ್ಷ ಕಿರಿಯ. ಚಹಲ್‌ಗೆ 33 ವರ್ಷವಾದರೆ, ಬಿಷ್ಣೋಯಿಗೆ 23 ವರ್ಷ. ಚಹಲ್‌ ಈ ವರ್ಷದ 9 ಟಿ20 ಪಂದ್ಯಗಳಲ್ಲಿ 9 ವಿಕೆಟ್‌ ಉರುಳಿಸಿದರೆ, ಬಿಷ್ಣೋಯಿ 11 ಪಂದ್ಯಗಳಿಂದ 18 ವಿಕೆಟ್‌ ಕೆಡವಿದ್ದಾರೆ. ರವಿವಾರವಷ್ಟೇ ಮುಗಿದ ಆಸ್ಟ್ರೇಲಿಯ ವಿರುದ್ಧದ ಟಿ20 ಸರಣಿಯಲ್ಲಿ ಬಿಷ್ಣೋಯಿ “ಮ್ಯಾನ್‌ ಆಫ್ ದ ಸೀರಿಸ್‌’ ಗೌರವಕ್ಕೆ ಭಾಜನ ರಾಗಿದ್ದನ್ನು ಮರೆಯುವಂತಿಲ್ಲ.

ಇಲ್ಲಿ ಸಾಧನೆ ಹಾಗೂ ಭವಿಷ್ಯಕ್ಕಿಂತ ಮುಖ್ಯವಾಗಿ ಯಾವುದೇ ಪರಿಸ್ಥಿತಿ ಯಲ್ಲೂ ವಿಕೆಟ್‌ ಕೀಳುವ ಸಾಮರ್ಥ್ಯ ಹೊಂದಿ ರುವುದು ರವಿ ಬಿಷ್ಣೋಯಿ ವೈಶಿಷ್ಟé. ಆದರೆ ಇದಕ್ಕೆ ವಿಶಾಖಪಟ್ಟಣ ದಲ್ಲಿ ಸಾಗಿದ ಆಸ್ಟ್ರೇಲಿಯ ವಿರುದ್ಧದ ಮೊದಲ ಪಂದ್ಯ ಮಾತ್ರ ಅಪವಾದ ವಾಗಿತ್ತು. ಅಲ್ಲಿ 54 ರನ್‌ ಸೋರಿ ಹೋಗಿತ್ತು. ಜತೆಗೆ ಫೀಲ್ಡಿಂಗ್‌ ಕೂಡ ಕಳಪೆ ಆಗಿತ್ತು. ಆದರೆ ಸರಣಿ ಮುಂದು ವರಿದಂತೆ ಬಿಷ್ಣೋಯಿ ತಮ್ಮ ತಪ್ಪನ್ನು ತಿದ್ದಿಕೊಳ್ಳುವಲ್ಲಿ ಯಶಸ್ವಿ ಯಾದರು.

ಈ ಸರಣಿಯಲ್ಲಿ ಬಿಷ್ಣೋಯಿ 20 ಓವರ್‌ ಎಸೆದಿದ್ದು, ಇದರಲ್ಲಿ 7 ಓವರ್‌ಗಳನ್ನು ಪವರ್‌ ಪ್ಲೇಯಲ್ಲಿ ಎಸೆದಿರುವುದು ಗಮನಾರ್ಹ. ಇಲ್ಲಿ 6.45ರ ಇಕಾನಮಿ ರೇಟ್‌ನಲ್ಲಿ 5 ವಿಕೆಟ್‌ ಉರುಳಿಸಿದ್ದು, 20 ಡಾಟ್‌ ಬಾಲ್‌ ಎಸೆದಿದ್ದೆಲ್ಲ ಬಿಷ್ಣೋಯಿ ಸಾಧನೆಗೆ ಸಾಕ್ಷಿ. ಬ್ಯಾಟಿಂಗ್‌ ಟ್ರ್ಯಾಕ್‌ನಲ್ಲೂ ಬಿಷ್ಣೋಯಿ ಎಸೆತಗಳನ್ನು ಎದುರಿಸುವುದು ಸುಲಭ ವಲ್ಲ ಎಂದು ಆಸ್ಟ್ರೇಲಿಯ ತಂಡದ ನಾಯಕ ಮ್ಯಾಥ್ಯೂ ವೇಡ್‌ ಹೇಳಿರು ವುದು ಭಾರತದ ಯುವ ಬೌಲರ್‌ಗೆ ನೀಡಿದ ಸರ್ಟಿಫಿಕೆಟ್‌ ಆಗಿದೆ!

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.