ಗಂಗೂಲಿ ತಂತ್ರಕ್ಕೆ ರವಿಶಾಸ್ತ್ರಿಯಿಂದ ಪ್ರತಿತಂತ್ರ!
Team Udayavani, Jul 14, 2017, 3:20 AM IST
ಹೊಸದಿಲ್ಲಿ: ಭಾರತ ಕ್ರಿಕೆಟ್ನ ಮುಖ್ಯ ಕೋಚ್ ಆಗಿ ರವಿಶಾಸ್ತ್ರಿ ಆಯ್ಕೆಯಾಗಿರುವುದು ಈಗ ಹಳೆಯ ಸುದ್ದಿ. ಮಳೆ ನಿಂತರೂ ಹನಿ ನಿಲ್ಲಲಿಲ್ಲವೆಂಬಂತೆ ವಿವಾದಗಳು ಮಾತ್ರ ಮುಂದು ವರಿಯುತ್ತಲೇ ಇವೆ. ಬೌಲಿಂಗ್ ಕೋಚ್ ಆಗಿ ಜಹೀರ್ ಖಾನ್ರನ್ನು ಬಿಸಿಸಿಐ ನೇಮಿಸಿದ್ದರೂ ತಮ್ಮ ಆಪ್ತ ಭರತ್ ಅರುಣ್ರನ್ನೂ ಸಹಾಯಕರನ್ನಾಗಿ ನೇಮಿಸಬೇಕೆಂದು ರವಿಶಾಸ್ತ್ರಿ ಆಗ್ರಹಿಸಲಿದ್ದಾರೆಂದು ವರದಿಯಾಗಿದೆ. ಇದು ಬಿಸಿಸಿಐ ಸಲಹಾ ಸಮಿತಿಯಲ್ಲಿರುವ ಸೌರವ್ ಗಂಗೂಲಿ ವಿರುದ್ಧ ಸೇಡು ತೀರಿಸಿಕೊಳ್ಳುವ ಯತ್ನ ಎಂದೂ ಹೇಳಲಾಗಿದೆ.
ಗಂಗೂಲಿ ತೀವ್ರ ವಿರೋ ಧದ ನಡುವೆಯೂ ಮೊನ್ನೆ ಯಷ್ಟೇ ರವಿಶಾಸ್ತ್ರಿ ಕೋಚ್ ಆಗಿ ಆಯ್ಕೆಯಾಗಲು ಯಶಸ್ವಿಯಾಗಿದ್ದರು. ಇದಕ್ಕೆ ಪ್ರತಿತಂತ್ರ ಮಾಡಿದ ಗಂಗೂಲಿ, ಜಹೀರ್ ಖಾನ್ರನ್ನು ಬೌಲಿಂಗ್ ಕೋಚ್ ಮಾಡಿದರೆ ಒಪ್ಪಿಕೊಳ್ಳುವುದಾಗಿ ತಿಳಿಸಿದ್ದಾರೆ. ಮತ್ತೂಂದು ಕಡೆ ದ್ರಾವಿಡ್ರನ್ನು ಬ್ಯಾಟಿಂಗ್ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಇದಕ್ಕೆ ತಿರುಗೇಟು ನೀಡಲು ಶಾಸ್ತ್ರಿ ಯತ್ನಿಸುತ್ತಿದ್ದಾರೆ ಎಂದು ವರದಿಗಳು ಹೇಳಿವೆ.
ಜಹೀರ್ ಅಗತ್ಯವಿರುವ 250 ದಿನಗಳನ್ನು ವರ್ಷದಲ್ಲಿ ನೀಡುವುದಿಲ್ಲ. ಅಲ್ಲದೇ ಅವರ ವೇತನ ಕೂಡ ಇನ್ನೂ ನಿಗದಿಯಾಗಿಲ್ಲ. ಆದ್ದರಿಂದ ಒಬ್ಬ ಪೂರ್ಣಾವಧಿ ಬೌಲಿಂಗ್ ಕೋಚ್ ಬೇಕೆಂಬುದು ಶಾಸ್ತ್ರಿ ವಾದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ