![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ಟೆಸ್ಟ್ನಲ್ಲಿ ಅತೀ ವೇಗದ 250 ವಿಕೆಟ್; ಅಶ್ವಿನ್ ವಿಶ್ವ ದಾಖಲೆ
Team Udayavani, Feb 12, 2017, 2:54 PM IST
![544.jpg](https://www.udayavani.com/wp-content/uploads/2017/02/12/544-620x354.jpg)
ಹೈದರಾಬಾದ್: ಪ್ರವಾಸಿ ಬಾಂಗ್ಲಾ ವಿರುದ್ಧ ನಡೆಯುತ್ತಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತದ ಆಫ್ ಸ್ಪಿನ್ನರ್ ಆರ್.ಅಶ್ವಿನ್ ಅವರು ಇನ್ನೊಂದು ವಿಶ್ವದಾಖಲೆಗೆ ಭಾಜನರಾಗಿದ್ದಾರೆ. ಟೆಸ್ಟ್ನಲ್ಲಿ ಅತೀ ವೇಗದ 250 ವಿಕೆಟ್ ಪಡೆದ ಬೌಲರ್ ಎಂಬ ದಾಖಲೆಗೆ ಅಶ್ವಿನ್ ಪಾತ್ರರಾಗಿದ್ದಾರೆ.
ಪಂದ್ಯದಲ್ಲಿ 2ವಿಕೆಟ್ ಪಡೆಯುವ ಮೂಲಕ 250 ವಿಕೆಟ್ ಗಳಿಸಿದ ಆಸೀಸ್ ಬೌಲರ್ ಡೆನ್ನಿಸ್ ಲಿಲ್ಲಿ ಹೆಸರಲ್ಲಿದ್ದ ದಾಖಲೆಯನ್ನು ತನ್ನದಾಗಿಸಿಕೊಂಡರು. ಡೆನ್ನಿಸ್ ಲಿಲ್ಲಿ 48ಟೆಸ್ಟ್ ಪಂದ್ಯಗಳಲ್ಲಿ 250 ವಿಕೆಟ್ ಪಡೆದರೆ ಅಶ್ವಿನ್ 45 ಪಂದ್ಯಗಳಲ್ಲೇ ಸಾಧನೆ ಮಾಡಿದರು.
ಬಾಂಗ್ಲಾ ತಂಡ ಆಲೌಟ್ ಆಗುವ ಮುನ್ನ ಶತಕ ಸಿಡಿಸಿದ್ದ ಮುಶ್ಫಿಕರ್ ರಹೀಮ್ ಅವರ ವಿಕೆಟ್ ಕಬಳಿಸಿ 250 ನೇ ವಿಕೆಟ್ ಪಡೆದು ಸಂಭ್ರಮಿಸಿದರು.
159ಕ್ಕೆ ಡಿಕ್ಲೇರ್;ಬಾಂಗ್ಲಾ ಗೆಲುವಿಗೆ 459 ರನ್ಗುರಿ
ಮೂರನೇ ದಿನದಾಟದಲ್ಲಿ ಮೊದಲ ಇನ್ನಿಂಗ್ಸ್ನಲ್ಲಿ 6 ವಿಕೆಟ್ಗೆ 322 ರನ್ಗಳಿಸಿದ್ದ ಬಾಂಗ್ಲಾ ನಾಲ್ಕನೇ ದಿನದಾಟದಲ್ಲಿ 388 ಕ್ಕೆ ಆಲೌಟಾಯಿತು. ಮುಶ್ಫಿಕರ್ ಶತಕವೊಂದೆ ಬಾಂಗ್ಲಾದ ಗರಿಷ್ಠ ಗಳಿಕೆ. ಅವರು 127 ರನ್ಗಳಿಸಿ ಔಟಾದರು. ಮೆಹದಿ ಹಸನ್ ಮಿರಾಜ್ 51 ರನ್ಗಳಿಸಿದರು.
ಭಾರತದ ಪರ ಉಮೇಶ್ ಯಾದವ್ 3, ಜಡೇಜಾ, ಅಶ್ವಿನ್ ತಲಾ 2,ಭುವನೇಶ್ವರ್ ಕುಮಾರ್ ಇಶಾಂತ್ ಶರ್ಮಾ ತಲಾ 1 ವಿಕೆಟ್ ಪಡೆದರು.
2 ನೇ ಇನ್ನಿಂಗ್ಸ್ನ್ನು ಭಾರತ 4 ವಿಕೆಟ್ ನಷ್ಟಕ್ಕೆ 159 ರನ್ಗಳಿಸಿದ್ದ ವೇಳೆ ಡಿಕ್ಲೇರ್ ಮಾಡಿಕೊಂಡು ಬಾಂಗ್ಲಾ ಗೆಲುವಿಗೆ 459 ರನ್ ಮುಂದಿಟ್ಟಿದೆ. ಭಾರತದ ಪರ ವಿಜಯ್ 7,ರಾಹುಲ್ 10 ,ಪೂಜಾರಾ 54 ,ಕೊಹ್ಲಿ 38 ,ರೆಹಾನೆ 28 ರನ್ಗಳಿಸಿ ಔಟಾದರೆ ಜಡೇಜಾ 16 ರನ್ಗಳಿಸಿ ಅಜೇಯರಾಗಿ ಉಳಿದರು.
ಇತ್ತೀಚಿಗಿನ ವರದಿ ಬಂದಾಗ ಬಾಂಗ್ಲಾ ವಿಕೆಟ್ ನಷ್ಟವಿಲ್ಲದೆ 9 ರನ್ಗಳಿಸಿದೆ.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.