ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಲು ಮುಂದಾದರೆ ರವೀಂದ್ರ ಜಡೇಜಾ?
Team Udayavani, Dec 11, 2021, 2:25 PM IST
ಮುಂಬೈ: ಭಾರತ ತಂಡದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಅವರು ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಲು ಮುಂದಾಗಿದ್ದಾರೆ ಎಂದು ವರದಿ ತಿಳಿಸಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ರವೀಂದ್ರ ಜಡೇಜಾ ಈ ನಿರ್ಧಾರ ಮಾಡಿದ್ದಾರೆಂದು ವರದಿಯಾಗಿದೆ.
ಸದ್ಯ ಮೊಣಕಾಲಿನ ಗಾಯದಿಂದ ಬಳಲುತ್ತಿರುವ ಸ್ಟಾರ್ ಆಲ್ ರೌಂಡರ್ ಜಡೇಜಾ ಸುಮಾರು ಆರು ತಿಂಗಳವರೆಗೆ ಅಲಭ್ಯರಾಗುತ್ತಾರೆ. ಜಡೇಜಾ ಅವರು ತಮ್ಮ ವೃತ್ತಿಜೀವನವನ್ನು ಸೀಮಿತ ಮಾದರಿಯಲ್ಲಿ ವಿಸ್ತರಿಸಲು ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ತೆಗೆದುಕೊಳ್ಳುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ಅವರ ತಂಡದ ಸಹ ಆಟಗಾರರೊಬ್ಬರು ದೈನಿಕ್ ಜಾಗರನ್ ಗೆ ಬಹಿರಂಗಪಡಿಸಿದ್ದಾರೆ.
ಇದನ್ನೂ ಓದಿ:ಆ್ಯಶಸ್ ಟ್ರೋಫಿ: ಸತತ ವಿಕೆಟ್ ಕಳೆದುಕೊಂಡ ಇಂಗ್ಲೆಂಡ್, ಮೊದಲ ಪಂದ್ಯ ಗೆದ್ದ ಆಸ್ಟ್ರೇಲಿಯಾ
ಟೆಸ್ಟ್ ಮಾದರಿಯನ್ನು ತೊರೆದು ರವೀಂದ್ರ ಜಡೇಜಾ ಅವರು ಏಕದಿನ, ಟಿ20 ಮತ್ತು ಐಪಿಎಲ್ ನಲ್ಲಿ ಆಡಲು ಬಯಸುತ್ತಾರೆ ಎಂದು ವರದಿಯಾಗಿದೆ.
ನ್ಯೂಜಿಲ್ಯಾಂಡ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಆಡಿದ್ದ ರವೀಂದ್ರ ಜಡೇಜಾ, ಎರಡನೇ ಪಂದ್ಯದಲ್ಲಿ ಗಾಯದಿಂದ ಆಡಿರಲಿಲ್ಲ. ಮುಂದೆ ನಡೆಯಲಿರುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಅವರನ್ನು ಆಯ್ಕೆ ಮಾಡಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ