ಬಿಸಿಸಿಐನ ಕೆಲ ತಕರಾರಿನ ಮೇಲೆ ಪರಿಶೀಲನೆಗೆ ಸಿದ್ಧ: ಸುಪ್ರೀಂ


Team Udayavani, Jul 25, 2017, 6:30 AM IST

BCCCi-court.jpg

ನವದೆಹಲಿ: ಬಿಸಿಸಿಐಗೆ ಆಡಳಿತಾತ್ಮಕ ಸುಧಾರಣೆ ಕುರಿತು ಸರ್ವೋಚ್ಚ ನ್ಯಾಯಾಲಯದಲ್ಲಿ ಸೋಮವಾರ ಮಹತ್ವದ ವಿಚಾರಣೆ ನಡೆಯಿತು. ನ್ಯಾಯಾಲಯದ ತೀರ್ಪಿನ ಕೆಲ ಅಂಶಗಳ ವಿರುದ್ಧ ಬಹಳ ದಿನಗಳಿಂದ ಹೋರಾಟ ಮಾಡುತ್ತಿದ್ದ ಬಿಸಿಸಿಐಗೆ ಸಂತೋಷ ನೀಡುವಂತಹ ಕೆಲ ಅಭಿಪ್ರಾಯವನ್ನು ನ್ಯಾಯಪೀಠ ವ್ಯಕ್ತಪಡಿಸಿದೆ. ಒಂದು ರಾಜ್ಯಕ್ಕೆ ಒಂದೇ ಮತರದ್ದು, ಮತ್ತೆ ಐದು ಮಂದಿಯ ಆಯ್ಕೆ ಸಮಿತಿಗೆ ಅವಕಾಶ ನೀಡುವುದು, ಪೂರ್ಣಕಾಲೀನ ಸದಸ್ಯ ಸಂಸ್ಥೆಗಳು, ಸಹಸದಸ್ಯಗಳಿಗೆ ಮಾನ್ಯತೆ ಕುರಿತ ಮನವಿಯನ್ನು ಪರಿಶೀಲಿಸುವುದಾಗಿ ನ್ಯಾಯಪೀಠ ತಿಳಿಸಿದೆ.

ಲೋಧಾ ಶಿಫಾರಸನ್ನು ಪರಿಗಣಿಸಿ 2016ರಲ್ಲಿ ಬಿಸಿಸಿಐಗೆ ಸಮಗ್ರ ಆಡಳಿತಾತ್ಮಕ ಸುಧಾರಣೆಯನ್ನು ಸರ್ವೋಚ್ಚ ನ್ಯಾಯಾಲಯ ಘೋಷಿಸಿತ್ತು. ಇದರಲ್ಲಿನ ಕೆಲ ಸಂಗತಿಗಳ ಕುರಿತು ಬಿಸಿಸಿಐ ಆರಂಭದಿಂದಲೂ ತನ್ನ ತಕರಾರು ಎತ್ತಿತ್ತು. ಇಲ್ಲಿಯವರೆಗೆ ಬಿಸಿಸಿಐ ಬೇಡಿಕೆಗೆ ಮಾನ್ಯತೆ ಸಿಕ್ಕಿರಲಿಲ್ಲ. ನ್ಯಾಯಪೀಠದ ಒತ್ತಾಯದ ಮೇರೆಗೆ ಬಿಸಿಸಿಐ ಪೂರ್ಣವಾಗಿ ತೀರ್ಪನ್ನು ಪ್ಪಿಕೊಳ್ಳಲು ಸಿದ್ಧವಾಗಿದೆ. ಆದರೆ ರಾಜ್ಯಸಂಸ್ಥೆಗಳು ಸುತಾರಾಂ ತಮ್ಮ ವಿರೋಧ ಮುಂದುವರಿಸಿವೆ.

ಇದರಿಂದ ಸರ್ವೋಚ್ಚ ನ್ಯಾಯಾಲಯ ನಿಯೋಜಿತ ಆಡಳಿತಾಧಿಕಾರಿಗಳು ಇಕ್ಕಟ್ಟಿಗೆ ಸಿಲುಕಿದ್ದಾರೆ. ರಾಜ್ಯ ಸಂಸ್ಥೆಗಳ
ಅಭಿಪ್ರಾಯದ ಕುರಿತು ತುಸು ಮೃದು ಧೋರಣೆ ತೋರಿದ್ದಾರೆ. ನ್ಯಾಯಾಲಯವೂ ಇದಕ್ಕೆ ಸ್ಪಂದಿಸಿರುವುದರಿಂದ ಬಿಸಿಸಿಐ ನಿರಾಳೆಗೊಂಡಿದೆ. ಮುಂದಿನ ವಿಚಾರಣೆ ಆ.18ಕ್ಕೆ ನಡೆಯಲಿದೆ.

ಯಾವುದಕ್ಕೆಲ್ಲ ನ್ಯಾಯಪೀಠದ “ವಿನಾಯ್ತಿ’?: ನ್ಯಾಯಾಲಯದ ತೀರ್ಪಿನಲ್ಲಿ ಐದು ಮಂದಿಯ ಬಿಸಿಸಿಐ ಆಯ್ಕೆ ಸಮಿತಿಯನ್ನು ರದ್ದು ಮಾಡಲು ಹೇಳಿ ಮೂವರನ್ನು ಮಾತ್ರ ನೇಮಿಸಲು ಹೇಳಿತ್ತು. ಹೀಗಾದರೆ ಆಯ್ಕೆ ಬಹಳ ಕಷ್ಟ ಎನ್ನುವುದು ಬಿಸಿಸಿಐ ಅಭಿಪ್ರಾಯ. ಇಂದು ಕ್ರಿಕೆಟ್‌ ಪಂದ್ಯಗಳು ನಡೆಯುತ್ತಿರುವ ಪ್ರಮಾಣ ಗಮನಿಸಿದಾಗ ಬಿಸಿಸಿಐ ಬೇಡಿಕೆ ಸಾಧುವೆಂದು ನ್ಯಾಯಾಲಯ ಹೇಳಿದೆ.

ಒಂದು ರಾಜ್ಯಕ್ಕೆ ಒಂದೇ ಮತ ಭಾರತದಂತಹ ದೇಶದಲ್ಲಿ ಒಳ್ಳೆಯ ಯೋಚನೆಯಲ್ಲ ಎಂದು ನ್ಯಾಯಪೀಠವೇ ಅಭಿಪ್ರಾಯಪಟ್ಟಿದೆ. ಮಹಾರಾಷ್ಟ್ರ, ಬರೋಡಾ, ರೈಲ್ವೇಸ್‌, ಯೂನಿವರ್ಸಿಟೀಸ್‌ಗಳ ಅಭಿಪ್ರಾಯ ನಮಗೂ ಅರ್ಥವಾಗಿದೆ. ಇದನ್ನೂ ಮುಂದೆ ಪರಿಶೀಲಿಸುತ್ತೇವೆಂದು ನ್ಯಾಯಪೀಠ ಹೇಳಿದೆ. ಆದರೆ ಯಾವ ಸಂಸ್ಥೆಗಳಿಗೆ ಪೂರ್ಣ ಸದಸ್ಯತ್ವ ನೀಡಬೇಕು, ಯಾವುದಕ್ಕೆ ನೀಡಬಾರದು ಎಂಬ ಪ್ರಶ್ನೆಗಳ ಕುರಿತು ಚರ್ಚೆ ಮುಂದುವರಿದಿದೆ.

ಬಿಸಿಸಿಐನ ಇನ್ನೊಂದು ಮಹತ್ವದ ಬೇಡಿಕೆಯಾದ 3 ವರ್ಷಗಳ ನಂತರ ಪದಾಧಿಕಾರಿಗಳಿಗೆ ಕಡ್ಡಾಯ ವಿಶ್ರಾಂತಿಯನ್ನು ರದ್ದು ಮಾಡುವುದರ ಕುರಿತು ನ್ಯಾಯಾಲಯದ ಅಭಿಪ್ರಾಯ ಹೊರಬಿದ್ದಿಲ್ಲ.

ಬಿಸಿಸಿಐ ಸಭೆಯಲ್ಲಿ ಭಾಗವಹಿಸಬೇಡಿ: ಶ್ರೀನಿ, ಶಾಗೆ ತಾಕೀತು ನ್ಯಾಯಾಲಯದ ತೀರ್ಪಿನ ಪ್ರಕಾರ ಅನರ್ಹಗೊಂಡಿದ್ದರೂ ಬಿಸಿಸಿಐ ಪಾಲ್ಗೊಳ್ಳುತ್ತಿರುವ ಬಿಸಿಸಿಐ ಪದಚ್ಯುತ ಅಧ್ಯಕ್ಷ ಶ್ರೀನಿವಾಸನ್‌,ಮಾಜಿ ಕಾರ್ಯದರ್ಶಿ ನಿರಂಜನ್‌ ಶಾ ಬಗ್ಗೆ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಜು.26ರ ಬಿಸಿಸಿಐ ಸಭೆಯಲ್ಲಿ ಪಾಲ್ಗೊಳ್ಳಬೇಡಿ ಎಂದಿದೆ. ತಾಂತ್ರಿಕವಾಗಿ ಶ್ರೀನಿ ಹೇಳುವುದು ಸರಿಯಿದೆ. ಆದರೆ ಅದನ್ನೇ ಇಟ್ಟುಕೊಂಡು ಆದೇಶವನ್ನು ಉಲ್ಲಂಘಿಸಬಾರದು ಎಂದು ಸ್ಪಷ್ಟಪಡಿಸಿದೆ.

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.