ಸದಾಭಿನಂದನೆ: ರಾಜ್ಯಮಟ್ಟದ ಕುಸ್ತಿ
Team Udayavani, Sep 2, 2017, 11:01 AM IST
ಮೂಡಬಿದಿರೆ: “ಸದಾಭಿನಂದನೆ’ ಕಾರ್ಯಕ್ರಮದ ಪ್ರಯುಕ್ತ ಶ್ರೀ ಶಾಸ್ತವು ಭೂತನಾಥೇಶ್ವರ ಟ್ರಸ್ಟ್ ಆಶ್ರಯದಲ್ಲಿ ರಾಜ್ಯಮಟ್ಟದ ಪುರುಷರ ಮತ್ತು ಮಹಿಳೆಯರ ಕುಸ್ತಿ ಪಂದ್ಯಾಟ ಆಳ್ವಾಸ್ನಲ್ಲಿ ಶುಕ್ರವಾರ ಜರಗಿತು.
ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ, ಶ್ರೀದೇವಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸದಾನಂದ ಶೆಟ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಮೋಹನ ಆಳ್ವ, ಕುಸ್ತಿ ಪಂದ್ಯಾಟದ ಪ್ರಾಯೋಜಕ ವಿಜಯನಾಥ ವಿಠಲ ಶೆಟ್ಟಿ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷ ಸುರೇಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ಎನ್.ಆರ್. ನರಸಿಂಹ, ಉಪಾಧ್ಯಕ್ಷ ಡಾ.ರಾಜ ಎಸ್.ಎನ್, ಜಿಲ್ಲಾ ಸಂಘದ ಅಧ್ಯಕ್ಷ ಪ್ರಕಾಶ್ ಕರ್ಕೇರ, ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ, ಪ್ರೇಮಲತಾ ಶೆಟ್ಟಿ, ಕೃಷ್ಣಾನಂದ ಶೆಟ್ಟಿ, ಜಿತೇಂದ್ರ ಕೊಟ್ಟಾರಿ, ದೇವಿಚರಣ್ ಶೆಟ್ಟಿ, ಸೀತಾರಾಮ್ ಶೆಟ್ಟಿ, ಜಯಶ್ರೀ ಅಮರನಾಥ ಶೆಟ್ಟಿ,ರಾಜಗೋಪಾಲ ಶೆಟ್ಟಿ ಸಹಿತ ಗಣ್ಯರು ಉಪಸ್ಥಿತರಿದ್ದರು.