ಭಾರತ ತಂಡವನ್ನು ತೆಗೆದು ಹಾಕಿ..: ಐಸಿಸಿಗೆ ಪಾಕ್ ದಿಗ್ಗಜನ ಮನವಿ
Team Udayavani, Feb 6, 2023, 3:25 PM IST
ಲಾಹೋರ್: ಭಾರತ ಮತ್ತು ಪಾಕಿಸ್ಥಾನ ನಡುವಿನ ಏಷ್ಯಾ ಕಪ್ ವಿವಾದ ಅಂತ್ಯ ಕಾಣುವ ಲಕ್ಷಣ ಕಾಣುತ್ತಿಲ್ಲ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆಯ ಹೊರತಾಗಿಯೂ, ಪಂದ್ಯಾವಳಿಯ ಭವಿಷ್ಯವು ಇನ್ನೂ ಅತಂತ್ರವಾಗಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ಆಟಗಾರರಿಗೆ ಪಾಕಿಸ್ತಾನಕ್ಕೆ ಪ್ರಯಾಣಿಸಲು ಅನುಮತಿ ನೀಡಲು ಸಿದ್ಧವಿಲ್ಲ. ಹೀಗಾಗಿ ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಕೂಟವೀಗ ತಟಸ್ಥ ಸ್ಥಳಕ್ಕೆ ಶಿಫ್ಟ್ ಆಗಿದೆ.
ಈ ಬಗ್ಗೆ ಮಾತನಾಡಿರುವ ಪಾಕಿಸ್ತಾನದ ಮಾಜಿ ಆಟಗಾರ ಜಾವೇದ್ ಮಿಯಾಂದಾದ್ ಭಾರತದ ವಿರುದ್ಧ ಕಟುವಾದ ಟೀಕೆ ಮಾಡಿದ್ದಾರೆ. ಅಲ್ಲದೆ ತಂಡವನ್ನು ತೆಗೆದು ಹಾಕಬೇಕು ಎಂದು ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ದೆಹಲಿ ಮೇಯರ್ ಆಯ್ಕೆ ಮಾಡಲು ಮತ್ತೆ ವಿಫಲ: ಸುಪ್ರೀಂ ಮೊರೆ ಹೋದ ಆಪ್
“ನಾನು ಮತ್ತೆ ಹೇಳುತ್ತೇನೆ, ಭಾರತ ಬರದಿದ್ದರೆ ನಾವು ಹೆದರುವುದಿಲ್ಲ. ನಮಗೆ ನಮ್ಮ ಕ್ರಿಕೆಟ್ ಸಿಗುತ್ತಿದೆ. ವಿಷಯಗಳನ್ನು ನಿಯಂತ್ರಿಸುವ ಕೆಲಸ ಐಸಿಸಿಯದ್ದು, ಇಲ್ಲದಿದ್ದರೆ ಅದು ಆಡಳಿತ ಮಂಡಳಿಯನ್ನು ಹೊಂದಿರುವುದರಲ್ಲಿ ಯಾವುದೇ ಅರ್ಥವಿಲ್ಲ. ಐಸಿಸಿ ಪ್ರತಿ ದೇಶಕ್ಕೂ ಒಂದು ನಿಯಮವನ್ನು ಹೊಂದಿರಬೇಕು. ಅಂತಹ ತಂಡಗಳು ಬರದಿದ್ದರೆ, ಅವರು ಎಷ್ಟೇ ಬಲಶಾಲಿಯಾಗಿದ್ದರೂ, ನೀವು ಅವರನ್ನು ತೆಗೆದುಹಾಕಬೇಕು”ಎಂದು ಮಿಯಾಂದಾದ್ ಹೇಳಿದರು.
ಪಾಕಿಸ್ತಾನದಲ್ಲಿ ಸೋಲನ್ನು ಅನುಭವಿಸುವ ಸಂದರ್ಭದಲ್ಲಿ ಸಾರ್ವಜನಿಕರ ವಿಪರೀತ ವರ್ತನೆಗೆ ಹೆದರಿ ಭಾರತವು ಬರಲು ಸಿದ್ಧರಿಲ್ಲ ಎಂದು ಮಿಯಾಂದಾದ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ