ಇಂದು ಪ್ರಶಸ್ತಿ ಸ್ವೀಕಾರದ ಸಂಭ್ರಮದಲ್ಲಿದ್ದ ‘ದ್ರೋಣಾಚಾರ್ಯ’ ಪುರುಷೋತ್ತಮ ರೈ ನಿಧನ!


Team Udayavani, Aug 29, 2020, 6:00 AM IST

ಇಂದು ಪ್ರಶಸ್ತಿ ಸ್ವೀಕಾರದ ಸಂಭ್ರಮದಲ್ಲಿದ್ದ ‘ದ್ರೋಣಾಚಾರ್ಯ’ ಪುರುಷೋತ್ತಮ ರೈ ನಿಧನ!

ಬೆಂಗಳೂರು: ದೇಶ ಕಂಡ ಖ್ಯಾತ ಅಥ್ಲೆಟಿಕ್ಸ್‌ ತರಬೇತುದಾರ ಪುರುಷೋತ್ತಮ ರೈ ತಮ್ಮ 79ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ.

ಶುಕ್ರವಾರ ರಾತ್ರಿ 7.30ಕ್ಕೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತ ಹೊಂದಿದ ಪರಿಣಾಮ, ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಶನಿವಾರ ಆನ್‌ಲೈನ್‌ ಮೂಲಕ ದ್ರೋಣಾಚಾರ್ಯ ಪ್ರಶಸ್ತಿಯನ್ನು ಸ್ವೀಕರಿಸುವ ಸಂಭ್ರಮದಲ್ಲಿದ್ದ ಅವರು, ಹಿಂದಿನ ದಿನವಾದ ಶುಕ್ರವಾರ ನಿಧನ ಹೊಂದಿರುವುದು ನೋವಿನ ಸಂಗತಿಯಾಗಿದೆ.

ದ್ರೋಣಾಚಾರ್ಯ ಭಾರತೀಯ ಕ್ರೀಡಾ ತರಬೇತುದಾರರಿಗೆ ನೀಡುವ ಸರ್ವೋಚ್ಚ ಪ್ರಶಸ್ತಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರಾದ ಪುರುಷೋತ್ತಮ ರೈ ಅವರು, ರಾಷ್ಟ್ರೀಯ ಕ್ರೀಡಾ ಪ್ರಾಧಿಕಾರದ ತರಬೇತುದಾರರಾಗಿ ನಿವೃತ್ತರಾಗಿದ್ದರು.

ಅವರಿಗೆ ಹತ್ತಾರುವರ್ಷಗಳ ಹಿಂದೆಯೇ ಸಿಗಬೇಕಾಗಿದ್ದ ದ್ರೋಣಾಚಾರ್ಯ, ತಡವಾಗಿಯಾದರೂ ಸಿಕ್ಕಿತ್ತು. ಸ್ವತಃ ರೈಯವರು ಈ ಪ್ರಶಸ್ತಿ ತನಗೆ 20 ವರ್ಷಗಳ ಹಿಂದೆಯೇ ಬರಬೇಕಿತ್ತೆಂದು ಹೇಳಿದ್ದರು. ಪ್ರಸ್ತುತ ತರಬೇತುದಾರರಾಗಿ ಅವರು ಮಾಡಿದ ಆಜೀವ ಸಾಧನೆಗೆ ದ್ರೋಣಾಚಾರ್ಯ ಲಭಿಸಿದೆ.

ಪುರುಷೋತ್ತಮ ಅವರು, 1974ರಿಂದಲೇ ತರಬೇತುದಾರಿಕೆಯನ್ನು ಆರಂಭಿಸಿದರು. ಹಲವಾರು ಏಷ್ಯನ್‌ ಗೇಮ್ಸ್‌ಗಳು, ಸ್ಯಾಫ್ ಗೇಮ್ಸ್‌ಗಳು, ಏಷ್ಯಾಮಟ್ಟದ ಇತರೆ ಕೂಟಗಳಿಗಾಗಿ ಅವರು ಅಥ್ಲೀಟ್‌ಗಳನ್ನು ತಯಾರು ಮಾಡಿದ್ದರು.

1987ರಲ್ಲಿ ಇಟಲಿಯ ರೋಮ್‌ನಲ್ಲಿ ವಿಶ್ವ ಅಥ್ಲೆಟಿಕ್‌ ಕೂಟಕ್ಕೆ ಭಾರತೀಯ ತಂಡದ ತರಬೇತುದಾರರಾಗಿ ತೆರಳಿದ್ದರು.

ಇವರ ಗರಡಿಯಲ್ಲಿ ತಯಾರಾಗಿದ್ದ ಖ್ಯಾತ ಕ್ರೀಡಾಪಟುಗಳು: ಪುರುಷೋತ್ತಮ ಅವರ ಗರಡಿಯಲ್ಲಿ ಹಲವಾರು ಕ್ರೀಡಾರತ್ನಗಳು ಸಿದ್ಧವಾಗಿವೆ ಅಚರಲ್ಲಿ ಪ್ರಮುಖರೆಂದರೆ, ಮುರಳಿಕುಟ್ಟನ್‌, ಅಶ್ವಿ‌ನಿ ನಾಚಪ್ಪ, ಎಸ್‌.ಡಿ.ಈಶನ್‌, ರೋಸಾ ಕುಟ್ಟಿ, ಜಿ.ಜಿ.ಪ್ರಮೀಳಾ, ಎಂ.ಕೆ.ಆಶಾ, ಇ.ಬಿ.ಶೈಲಾ, ಜೈಸಿ ಥಾಮಸ್‌ ಇವರಿಂದ ತರಬೇತಾದ ಪ್ರಮುಖರು.

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.