ರಿಷಭ್ ಪಂತ್ ನಾಯಕ್ವವನ್ನು ಗೌರವಿಸುವೆ: ಶ್ರೇಯಸ್ ಐಯ್ಯರ್
Team Udayavani, Sep 23, 2021, 9:34 PM IST
ದುಬೈ: ರಿಷಭ್ ಪಂತ್ ಅವರನ್ನು ನಾಯಕನನ್ನಾಗಿ ನೇಮಿಸಿರುವುದು ಫ್ರಾಂಚೈಸಿಯ ನಿರ್ಧಾರ. ನಾಯಕತ್ವದಲ್ಲಿ ಅವರನ್ನೇ ಮುಂದುವರಿಸಿದರೂ ಮುಕ್ತ ಮನಸ್ಸಿನಿಂದ ಗೌರವಿಸುತ್ತೇನೆಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಜಿ ನಾಯಕ ಶ್ರೇಯಸ್ ಐಯ್ಯರ್ ಹೇಳಿದ್ದಾರೆ.
ಬುಧವಾರ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ 8 ವಿಕೆಟ್ಗಳ ಗೆಲುವು ದಾಖಲಿಸಿದ ಬಳಿಕ ಮಾತನಾಡಿದ ಐಯ್ಯರ್ ನಾನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾದಾಗ ನನ್ನ ಮನಸ್ಸು ವಿಭಿನ್ನವಾಗಿತ್ತು. ನಿರ್ಧಾರ ತೆಗೆದುಕೊಳ್ಳುವುದು ಹಾಗೂ ಮನೋಧರ್ಮದ ಮಟ್ಟ ಉತ್ತಮವಾಗಿತ್ತು. ಕಳೆದ ಎರಡು ವರ್ಷಗಳಿಂದ ಇದು ನನಗೆ ಸಹಾಯವಾಗಿದೆ. ಆದರೆ, ಪಂತ್ಗೆ ನಾಯಕತ್ವ ನೀಡಿರುವುದು ಫ್ರಾಂಚೈಸಿಯ ನಿರ್ಧಾರ. ಆದ್ದರಿಂದ ಪಂತ್ ನಾಯಕನಾಗಿ ಮುಂದುವರಿಸುವ ತೀರ್ಮಾನವನ್ನು ನಾನು ಗೌರವಿಸುತ್ತೇನೆ ಎಂದರು.
2021ರ ಆವೃತ್ತಿಯ ಐಪಿಎಲ್ ಕೂಟ ಆರಂಭವಾದಾಗಿನಿಂದಲೂ ಪಂತ್ ತಂಡವನ್ನು ಉತ್ತಮವಾಗಿ ಮುನ್ನಡೆಸುತ್ತಿದ್ದಾರೆ. ಈ ಕಾರಣದಿಂದಲೇ ಫ್ರಾಂಚೈಸಿ ಅವರನ್ನು ನಾಯಕನಾಗಿ ಮುಂದುವರಿಸಿದೆ. ಇದನ್ನು ನಾನು ಸಂಪೂರ್ಣವಾಗಿ ಗೌರವಿಸುತ್ತೇನೆ. ಆದರೆ ಬ್ಯಾಟಿಂಗ್ ಮೇಲೆ ಗಮನ ಕೇಂದ್ರಿಕರಿಸುವ ವಿಚಾರದಲ್ಲಿ ನನ್ನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಒತ್ತಡವನ್ನು ನಾನು ಇಷ್ಟಪಡುತ್ತೇನೆ. ಏಕೆಂದರೆ ಒತ್ತಡವಿದ್ದಾಗ ನಾವು ಖಂಡಿತಾ ಉತ್ತಮ ಪ್ರದರ್ಶನ ತೋರುತ್ತೇವೆ ಎಂದು ಶ್ರೇಯಸ್ ಐಯ್ಯರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ