ಮಾಯಾಂಕ್ ಅಗರ್ವಾಲ್ಗೆ ವಿಶ್ರಾಂತಿ
ರಣಜಿ: ಜ. 3ರಿಂದ ಮುಂಬಯಿ-ಕರ್ನಾಟಕ ನಡುವೆ ಹೋರಾಟ
Team Udayavani, Jan 1, 2020, 12:52 AM IST
ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಪ್ರಮುಖ ಬ್ಯಾಟ್ಸ್ಮನ್ ಕರ್ನಾಟಕದ ಮಾಯಾಂಕ್ ಅಗರ್ವಾಲ್ ಅವರಿಗೆ ಜ. 3ರಿಂದ ಮುಂಬಯಿ ವಿರುದ್ಧ ಆರಂಭವಾಗಲಿರುವ ರಣಜಿ ಪಂದ್ಯದಿಂದ ವಿಶ್ರಾಂತಿ ನೀಡಲಾಗಿದೆ.
ನ್ಯೂಜಿಲ್ಯಾಂಡ್ ವಿರುದ್ಧ ಭಾರತ “ಎ’ ತಂಡದ ಪ್ರವಾಸದ ಹಿನ್ನೆಲೆಯಲ್ಲಿ ಈ ಕ್ರಮವನ್ನು ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ತೆಗೆದುಕೊಂಡಿದೆ ಎಂದು ಹೇಳಲಾಗಿದೆ. ಮಾಯಾಂಕ್ ಬದಲಿಗೆ ಆರ್. ಸಮರ್ಥ್ ಅವರನ್ನು ತಂಡಕ್ಕೆ ಮರಳಿ ಕರೆಸಿಕೊಳ್ಳಲಾಗಿದೆ. ಸೋಮವಾರ ವಷ್ಟೇ ಮುಂಬಯಿ ವಿರುದ್ಧದ ಪಂದ್ಯಕ್ಕೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದ್ದು ಸಮರ್ಥ್ ಅವರನ್ನು ಹೊರಗಿಡಲಾಗಿತ್ತು. ಪರಿಷ್ಕೃತ ತಂಡದಲ್ಲಿ ಅವರು ಸ್ಥಾನ ಪಡೆದಿದ್ದಾರೆ.
ರಹಾನೆ, ಶಾ ಕಣಕ್ಕೆ
ಅನುಭವಿ ಟೆಸ್ಟ್ ಕ್ರಿಕೆಟಿಗ ರಹಾನೆ ಹಾಗೂ ಪೃಥ್ವಿ ಶಾ ಕರ್ನಾಟಕ ವಿರುದ್ಧ ನಡೆಯಲಿರುವ ರಣಜಿ ಲೀಗ್ ಪಂದ್ಯಕ್ಕೆ ಲಭ್ಯವಾಗಲಿದ್ದಾರೆ ಎಂದು ಮುಂಬೈ ಕ್ರಿಕೆಟ್ ಸಂಸ್ಥೆ ತಿಳಿಸಿದೆ. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಆಡಿರುವ ಅನುಭವ ಹೊಂದಿರುವ ರಹಾನೆ ಹಾಗೂ ಪೃಥ್ವಿ ಶಾ ತಂಡಕ್ಕೆ ಬಂದಿರುವುದರಿಂದ ತಂಡದ ಬಲ ಸಹಜವಾಗಿಯೇ ಹೆಚ್ಚಿದಂತಾಗಿದೆ.
ಕರ್ನಾಟಕ ತಂಡ
ಕರುಣ್ ನಾಯರ್ (ನಾಯಕ), ದೇವದತ್ತ ಪಡಿಕ್ಕಲ್, ಡಿ.ನಿಶ್ಚಲ್, ಆರ್. ಸಮರ್ಥ್, ಅಭಿಷೇಕ್ ರೆಡ್ಡಿ, ಬಿ.ಆರ್. ಶರತ್, ರೋಹನ್ ಕದಮ್, ಶ್ರೇಯಸ್ ಗೋಪಾಲ್ (ಉಪನಾಯಕ), ಜೆ.ಸುಚಿತ್, ಅಭಿಮನ್ಯು ಮಿಥುನ್, ವಿ.ಕೌಶಿಕ್, ಪ್ರತೀಕ್ ಜೈನ್, ರೋನಿತ್ ಮೋರೆ, ಶರತ್ ಶ್ರೀನಿವಾಸ್, ಪ್ರವೀಣ್ ದುಬೆ.
ಮುಂಬಯಿ ತಂಡ
ಸೂರ್ಯಕುಮಾರ್ ಯಾದವ್ (ನಾಯಕ), ಆದಿತ್ಯ ತಾರೆ, ಅಜಿಂಕ್ಯ ರಹಾನೆ, ಪೃಥ್ವಿ ಶಾ, ಸಫ್ರಾìಜ್ ಖಾನ್, ಶುಭಂ ರಂಜನೆ, ಆಕಾಶ್ ಪರ್ಕರ್, ಸಿದ್ದೇಶ್ ಲಾಡ್, ಶಾಮ್ಸ್ ಮಲಾನಿ, ವಿನಾಯಕ್ ಭೋಯಿರ್, ಶಶಾಂಕ್ ಅತ್ತಾರಡೆ, ರೋಯಿಸ್ಟನ್ ದಿಯಾಸ್, ತುಷಾರ್ ದೇಶಪಾಂಡೆ, ದೀಪಕ್ ಶೆಟ್ಟಿ, ಏಕನಾಥ್ ಕೆರ್ಕರ್.