ನಿಧಾನಗತಿ ಓವರ್‌ಗಳಿಗೆ ಇನ್ನು ರನ್‌ ರೂಪದ ದಂಡ!


Team Udayavani, Aug 10, 2018, 6:30 AM IST

cricket-bowl-one-day.jpg

ಲಂಡನ್‌: ಕ್ರಿಕೆಟ್‌ ಪಂದ್ಯಗಳ ಮೇಲೆ ನಿಧಾನಗತಿಯ ಓವರ್‌ಗಳ ಮೇಲೆ ಇನ್ನು ಪೆನಾಲ್ಟಿ ರೂಪದಲ್ಲಿ ಎದುರಾಳಿ ತಂಡಕ್ಕೆ ರನ್‌ಗಳನ್ನು ನೀಡುವ ಹೊಸ ಪ್ರಸ್ತಾವನೆಯನ್ನು ಕ್ರಿಕೆಟ್‌ ನಿಯಮಗಳ ರಕ್ಷಕ ಸಂಸ್ಥೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಮೆರಿಲ್‌ಬಾನ್‌ ಕ್ರಿಕೆಟ್‌ ಕ್ಲಬ್‌ (ಎಂಸಿಸಿ) ವಿಶ್ವ ಕ್ರಿಕೆಟ್‌ ಸಮಿತಿಗೆ ಪ್ರಸ್ತಾವಿಸಿದೆ.

ಮಾಜಿ ನಾಯಕಾದ ಮೈಕ್‌ ಗ್ಯಾಟಿಂಗ್‌ ಮುಖ್ಯಸ್ಥರಾಗಿರುವ ಈ ಸಮಿತಿಯಲ್ಲಿ ಸೌರವ್‌ ಗಂಗೂಲಿ ಹಾಗೂ ರಿಕಿ ಪಾಂಟಿಂಗ್‌ ಪ್ರಮುಖ ಸದಸ್ಯರಾಗಿದ್ದಾರೆ. ಇತ್ತೀಚೆಗೆ ಸಭೆ ಸೇರಿದ ಪ್ರಮುಖರು, ಓವರ್‌ ಗತಿ ಮೇಲೆ ನಿಗಾ ಇರಿಸಲು ಶಾಟ್‌ ಕ್ಲಾಕ್‌ ಬಳಸುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ. ಬಾಸ್ಕೆಟ್‌ಬಾಲ್‌ನಲ್ಲಿ ಆಟದ ವೇಗ ಹೆಚ್ಚಿಸಲು “ಟೈಮರ್‌’ ಶಾಟ್‌ ಕ್ಲಾಕ್‌ ಬಳಸಲಾಗುತ್ತದೆ. ಇತ್ತೀಚೆಗೆ ಇದು ಟೆನಿಸ್‌ ಪಂದ್ಯಾವಳಿಗಳಲ್ಲೂ ಚಾಲ್ತಿಗೆ ಬಂದಿದೆ. ಪ್ರತಿ ಓವರ್‌ ನಡುವಿನ ವಿರಾಮದ ಅವಧಿಯಲ್ಲಿ ಶಾಟ್‌ ಕ್ಲಾಕ್‌ ಚಲಿಸುತ್ತಿರುತ್ತದೆ. ಬೌಲರ್‌ ರನ್‌ ಅಪ್‌ಗೆ ಬಂದಾಗ ಸ್ಥಗಿತಗೊಳ್ಳುತ್ತದೆ. ಇಂತಿಷ್ಟೇ ಸಮಯದಲ್ಲಿ ಪ್ರತಿ ಓವರ್‌ ಮುಕ್ತಾಯಗೊಳ್ಳಬೇಕು ಎಂದು ಬೌಲರ್‌ನನ್ನು ನಿರ್ಬಂಧಿಸಲು ಸಾಧ್ಯವಿಲ್ಲ. ವೇಗದ ಬೌಲರ್‌ಗಳಿಗೆ ಹೆಚ್ಚಿನ ಅವಧಿ ಬೇಕಾಗುತ್ತದೆ. ಬೌಂಡರಿ, ಸಿಕ್ಸರ್‌ ಸಿಡಿಸಿದಾಗ, ಔಟಾದಾಗ ವಿಳಂಬವಾಗುತ್ತದೆ. ಆದರೆ, ಎರಡು ಓವರ್‌ಗಳ ಮಧ್ಯೆ ಎಷ್ಟು ಸಮಯ ತೆಗೆದುಕೊಂಡರೆಂಬ ಲೆಕ್ಕ ಇಡಬೇಕಾಗುತ್ತದೆ. ಹೊಸ ಬ್ಯಾಟ್ಸ್‌ಮನ್‌ ಕ್ರೀಸ್‌ಗೆ ಬಂದು ಆಟಕ್ಕೆ ಸಿದ್ಧವಾಗಲು ತೆಗೆದುಕೊಳ್ಳುವ ಸಮಯವನ್ನೂ ಲೆಕ್ಕ ಹಾಕಲಾಗುತ್ತದೆ ಎಂದು ಪಾಂಟಿಂಗ್‌ ವಿವರಿಸಿದ್ದಾರೆ.

11 ವರ್ಷಗಳಲ್ಲೇ ಕನಿಷ್ಠ ಓವರ್‌ ರೇಟ್‌
ಐಸಿಸಿ ಅಂಕಿ-ಅಂಶಗಳ ಪ್ರಕಾರ ಕಳೆದ ವರ್ಷ ಆಡಿದ ಟೆಸ್ಟ್‌ ಪಂದ್ಯಗಳಲ್ಲಿ 11 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಓವರ್‌ ರೇಟ್‌ ದಾಖಲಾಗಿದೆ. ಟಿ20 ಪಂದ್ಯಗಳಲ್ಲಿ ಇನ್ನೂ ನಿಧಾನ. ಹಾಲಿ ನಿಯಮಗಳ ಪ್ರಕಾರ ಓವರ್‌ ಗತಿ ವಿಳಂಬವಾದರೆ ಆಟಗಾರರಿಗೆ ಮತ್ತು ತಂಡದ ನಾಯಕನಿಗೆ ದಂಡ ಶಿಕ್ಷೆಯಿದೆ. 

ಪುನರಾವರ್ತನೆಯಾದರೆ ತಂಡದ ನಾಯಕನಿಗೆ ಪಂದ್ಯಗಳ ಮೇಲೆ ನಿಷೇಧ ಹೇರಲಾಗುತ್ತದೆ. ಹೀಗಾಗಿ, ಐಸಿಸಿ ಸಮಿತಿ ಶಾಟ್‌ ಕ್ಲಾಕ್‌ ಬಳಕೆ ಮತ್ತು ರನ್‌ ಪೆನಾಲ್ಟಿ ವಿಧಿಸುವ ಕುರಿತು ಚರ್ಚಿಸಿದೆ. ನಾಯಕನಿಗೆ ಹೆಚ್ಚಿನ ಜವಾಬ್ದಾರಿ ವಹಿಸುವ ಜತೆಗೆ, ನಿಗದಿತ ಅವಧಿಯಲ್ಲಿ ತಂಡವೊಂದು 3-4 ಓವರ್‌ಗಳಷ್ಟು ಹಿಂದುಳಿದರೆ 20 ರನ್‌ಗಳ ವರೆಗೆ ಪೆನಾಲ್ಟಿ ವಿಧಿಸುವ ಚಿಂತನೆ ಇದೆ. ನಿರ್ದಿಷ್ಟವಾಗಿ ಎಷ್ಟೆಂಬುದು ಇನ್ನೂ ನಿರ್ಧಾರವಾಗಿಲ್ಲ.

ಬೌಲರ್‌ಗಳಿಗೂ ಹೆಲ್ಮೆಟ್‌
ಇದೇ ವೇಳೆ ಬೌಲರ್‌ಗಳೂ ಹೆಲ್ಮೆಟ್‌ ಒದಗಿಸುವ ಕುರಿತು ಚರ್ಚೆ ನಡೆದಿದೆ. 2022ರ ಕಾಮನ್ವೆಲ್ತ್‌ ಗೇಮ್ಸ್‌ ಹಾಗೂ 2028ರ ಒಲಿಂಪಿಕ್ಸ್‌ಗೆ ಮಹಿಳಾ ಕ್ರಿಕೆಟ್‌ ಸೇರಿಸುವ ಐಸಿಸಿ ಪ್ರಯತ್ನಕ್ಕೂ ಸಮಿತಿ ಮೆಚ್ಚುಗೆ ಸೂಚಿಸಿದೆ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.