ಕಾಮನ್ವೆಲ್ತ್‌ ಗೇಮ್ಸ್‌ ಬಹಿಷ್ಕರಿಸುವ ಪ್ರಸ್ತಾವಕ್ಕೆ ರೈಫ‌ಲ್‌ ಸಂಸ್ಥೆ ಬೆಂಬಲ


Team Udayavani, Jul 29, 2019, 10:23 AM IST

bitminhgjjk

ಹೊಸದಿಲ್ಲಿ: ಶೂಟಿಂಗ್‌ ಸ್ಪರ್ಧೆಯನ್ನು ಕೈಬಿಟ್ಟಿರುವ ಕಾರಣಕ್ಕಾಗಿ 2022ರ ಕಾಮನ್ವೆಲ್ತ್‌ ಗೇಮ್ಸ್‌ ಅನ್ನು ಬಹಿಷ್ಕರಿಸುವ ಭಾರತೀಯ ಒಲಿಂಪಿಕ್‌ ಅಸೋಸಿಯೇಶನ್‌ (ಐಒಎ) ಪ್ರಸ್ತಾವವನ್ನು ಭಾರತೀಯ ರಾಷ್ಟ್ರೀಯ ರೈಫ‌ಲ್‌ ಅಸೋಸಿ ಯೇಶನ್‌ (ಎನ್‌ಆರ್‌ಎಐ) ಬೆಂಬಲಿಸಲಿದೆ.

“ಐಒಎ ಮೇಲೆ ನಮಗೆ ಪೂರ್ಣ ನಂಬಿಕೆ ಇದೆ ಮತ್ತು ಐಒಎ ತೆಗೆದುಕೊಳ್ಳುವ ನಿರ್ಧಾರವನ್ನು ಬೆಂಬಲಿಸಲಿ ದ್ದೇವೆ’ ಎಂದು ಎನ್‌ಆರ್‌ಎಐ ಕಾರ್ಯದರ್ಶಿ ರಾಜೀವ್‌ ಭಾಟಿಯ ಮತ್ತು ಪ್ರಧಾನ ಕಾರ್ಯದರ್ಶಿ ಡಿ.ವಿ. ಸೀತಾ ರಾಮ ರಾವ್‌ ಹೇಳಿದ್ದಾರೆ.

ಶೂಟಿಂಗ್‌ ಸ್ಪರ್ಧೆಯನ್ನು 2022ರ ಕಾಮನ್ವೆಲ್ತ್‌ ಗೇಮ್ಸ್‌ನಿಂದ ಕೈಬಿಟ್ಟ ಹಿನ್ನೆಲೆಯಲ್ಲಿ ಇಂಗ್ಲೆಂಡಿನಲ್ಲಿ ನಡೆಯಲಿರುವ ಗೇಮ್ಸ್‌ ಕೂಟವನ್ನು ಬಹಿಷ್ಕರಿಸುವಂತೆ ಐಒಎ ಅಧ್ಯಕ್ಷ ನರೀಂದರ್‌ ಬಾತ್ರ ಅವರು ಯುವಜನ ಮತ್ತು ಕ್ರೀಡಾ ಸಚಿವ ಕಿರಣ್‌ ರಿಜಿಜು ಅವರಿಗೆ ಪತ್ರ ಬಳಿಕ ಎನ್‌ಆರ್‌ಎಐ ಈ ರೀತಿ ಪ್ರತಿಕ್ರಿಯೆ ನೀಡಿದೆ.

ಗೇಮ್ಸ್‌ ಸಮ್ಮೇಳನಕ್ಕೆ ಬಹಿಷ್ಕಾರ
ಈ ವರ್ಷದ ಸೆ. 3ರಿಂದ 5ರ ವರೆಗೆ ರುವಾಂಡದ ಕಿಗಾಲಿಯಲ್ಲಿ ನಡೆಯಲಿರುವ ಕಾಮನ್ವೆಲ್ತ್‌ ಗೇಮ್ಸ್‌ನ ಸಮ್ಮೇಳನದಲ್ಲಿ ಭಾರತ ಭಾಗವಹಿಸದಿರಲು ನಿರ್ಧರಿಸಿದೆ ಎಂದು ರಿಜಿಜು ಅವರಿಗೆ ಬರೆದ ಪತ್ರದಲ್ಲಿ ಬಾತ್ರ ಉಲ್ಲೇಖೀಸಿದ್ದಾರೆ.

“ನಮ್ಮದು ರಾಷ್ಟ್ರೀಯ ಕ್ರೀಡಾ ಫೆಡರೇಶನ್‌, ನಾವು ಐಒಎಯ ಅಂಗವಾಗಿ ಕಾರ್ಯ ನಿರ್ವ ಹಿಸುತ್ತೇವೆ. ಹಾಗಾಗಿ ಐಒಎ ತೆಗೆದುಕೊಳ್ಳುವ ನಿರ್ಧಾರವನ್ನು ನಾವು ಬೆಂಬಲಿಸುತ್ತೇವೆ. ಶೂಟಿಂಗ್‌ನಲ್ಲಿ ನಾವೀಗ ನಂಬರ್‌ ವನ್‌ ಸ್ಥಾನದಲ್ಲಿದ್ದೇವೆ. ಭಾರತೀಯ ಶೂಟರ್‌ ಗಳು ಚೀನ, ಇಂಗ್ಲೆಂಡಿಗಿಂತ ಮಿಗಿ ಲಾದ ನಿರ್ವಹಣೆ ನೀಡುತ್ತಿದ್ದಾರೆ. ಸರಕಾರ ಒಳ್ಳೆಯ ನಿರ್ಧಾರ ತೆಗೆದು ಕೊಳ್ಳಲಿ’ ಎಂದು ಸೀತಾರಾಮ ರಾವ್‌ ಹೇಳಿದ್ದಾರೆ.

ಗೇಮ್ಸ್‌ ಬಿಕ್ಕಟ್ಟು: ಭಾರತಕ್ಕೆ ಬಾಗಿದ ಒಕ್ಕೂಟ
2022ರಲ್ಲಿ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುವ ಕಾಮನ್ವೆಲ್ತ್‌ ಗೇಮ್ಸ್‌ ಅನ್ನು ಬಹಿಷ್ಕರಿಸಲು ಭಾರತ ಒಲಿಂಪಿಕ್ಸ್‌ ಸಂಸ್ಥೆ ಐಒಎ)ಮುಂದಾಗಿದೆ. ಇದ ರಿಂದ ಕಂಗಾಲಾಗಿರುವ ಕಾಮನ್ವೆಲ್ತ್‌ ಗೇಮ್ಸ್‌ ಒಕ್ಕೂಟ, ಸದ್ಯದಲ್ಲೇ ಐಒಎ ಪದಾಧಿಕಾರಿಗಳನ್ನು ಭೇಟಿ ಮಾಡಲಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಜಿಎಫ್
ಮಾಧ್ಯಮ ಮತ್ತು ಸಂವಹನ ವ್ಯವ ಸ್ಥಾಪಕ ಟಾಮ್‌ ಡೆಗನ್‌, ಭಾರತ 2022ರ ಕಾಮನ್ವೆಲ್ತ್‌ ಕೂಟದಲ್ಲಿ ಭಾಗ ವಹಿಸಬೇಕೆನ್ನುವುದು ನಮ್ಮ ಬಲ ವಾದ ಹಾರೈಕೆ. ಆದ್ದರಿಂದ ಐಒಎ ಅಧಿಕಾರಿ ಗಳ ಜತೆ ಮಾತುಕತೆ ನಡೆಸಿ ಸೂಕ್ತ ಪರಿಹಾರ ಕಂಡುಕೊಳ್ಳುತ್ತೇವೆ’ ಎಂದಿದ್ದಾರೆ.

ಇದೇ ವೇಳೆ ಸೆಪ್ಟೆಂಬರ್‌ನಲ್ಲಿ ನಡೆ ಯುವ ಸಭೆಯಲ್ಲಿ ಭಾರತ ಭಾಗವಹಿಸ ದಿರುವುದು ನಮಗೆ ಬೇಸರ ತರಿಸಿದೆ. ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಭೆ ಇದಾಗಿರುವುದರಿಂದ ಭಾರತ ಅಲ್ಲಿ ಭಾಗವಹಿಸಬೇಕಾಗುತ್ತದೆ ಎಂದು ಸಿಜಿಎಫ್ ತಿಳಿಸಿದೆ.

“ಉದ್ದೇಶಪೂರ್ವಕವಾಗಿ ರದ್ದು’
ಗೇಮ್ಸ್‌ನಲ್ಲಿ ಶೂಟಿಂಗ್‌ ರದ್ದಾಗಿರುವ ಕುರಿತು ಐಒಎ ಅಧ್ಯಕ್ಷ ನರೇಂದ್ರ ಬಾತ್ರಾ ಕಿಡಿಕಿಡಿಯಾಗಿದ್ದಾರೆ. ಭಾರತ ಯಾವ ಕ್ರೀಡೆಯಲ್ಲಿ ಬೆಳವಣಿಗೆ ಸಾಧಿಸಿದರೂ ಅದಕ್ಕೆ ಕತ್ತರಿ ಹಾಕುವ ಕೆಲಸ ನಡೆಯು ತ್ತದೆ. ಇನ್ನೇನು ಒಂದು ಕ್ರೀಡೆಯಲ್ಲಿ ಬೆಳವಣಿಗೆ ಸಾಧಿಸಿದೆವು ಎಂದಾಗ, ಒಂದೋ ಆಟವೇ ಇರುವುದಿಲ್ಲ, ಇಲ್ಲ ನಿಯಮಗಳು ಬದಲಾಗಿರುತ್ತದೆ. ನಾವು ಈಗ ಯಾವ ದೇಶದ ವಸಾಹತು ಕೂಡ ಅಲ್ಲ. ಇದು ಜಗತ್ತಿನ ಇತರ ದೇಶಗಳಿಗೆ ಕಠಿನ ಪ್ರಶ್ನೆಗಳನ್ನು ಕೇಳುವ ಸಮಯ ಎಂದು ಬಾತ್ರಾ ಹೇಳಿದ್ದಾರೆ.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.