ವಿಶ್ವಕಪ್‌: ಪಂತ್‌, ರಾಯುಡು ಮೀಸಲು ಆಟಗಾರರು


Team Udayavani, Apr 18, 2019, 5:41 AM IST

28

ಹೊಸದಿಲ್ಲಿ: ಯುವ ವಿಕೆಟ್‌ ಕೀಪರ್‌ ರಿಷಬ್‌ ಪಂತ್‌, ಬ್ಯಾಟ್ಸ್‌ಮನ್‌ ಅಂಬಾಟಿ ರಾಯುಡು ಅವರನ್ನು ಭಾರತದ ವಿಶ್ವಕಪ್‌ ತಂಡಕ್ಕೆ ಹೆಚ್ಚುವರಿ ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಯುವ ವೇಗಿ ನವದೀಪ್‌ ಸೈನಿ ಕೂಡ ಸ್ಥಾನ ಪಡೆದಿದ್ದಾರೆ.

ಈ ಬಾರಿಯ ವಿಶ್ವಕಪ್‌ಗಾಗಿ ವಿರಾಟ್‌ ಕೊಹ್ಲಿ ನೇತೃತ್ವದ ಭಾರತ ತಂಡವನ್ನು ಈಗಾಗಲೇ ಬಿಸಿಸಿಐ ಬಿಡುಗಡೆ ಮಾಡಿದ್ದು, ಪಂತ್‌ ಮತ್ತು ರಾಯುಡು ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫ‌ಲರಾಗಿದ್ದರು. ಇದು ಭಾರತೀಯ ಕ್ರಿಕೆಟ್‌ ಅಭಿಮಾನಿಗಳನ್ನು ಕಂಗೆಡಿಸಿತ್ತಲ್ಲದೆ, ದೊಡ್ಡ ಮಟ್ಟದಲ್ಲಿ ಸಾರ್ವಜನಿಕ ಚರ್ಚೆಗೂ ಒಳಗಾಗಿತ್ತು.

ಮಾಜಿಗಳ ಅಚ್ಚರಿ
ಪಂತ್‌ ಅವರನ್ನು ಆಯ್ಕೆ ಮಾಡ ದಿದ್ದುದಕ್ಕೆ ಮಾಜಿ ಕ್ರಿಕೆಟಿಗ ಸುನೀಲ್‌ ಗವಾಸ್ಕರ್‌ ಅಚ್ಚರಿ ವ್ಯಕ್ತಪಡಿಸಿದ್ದರು. ಇನ್ನೊಂದೆಡೆ ರಾಯುಡು ಅವರನ್ನು ಕೈಬಿಟ್ಟಿದ್ದಕ್ಕೆ ಗೌತಮ್‌ ಗಂಭೀರ್‌ ಬೇಸರ ವ್ಯಕ್ತಪಡಿಸಿದ್ದರು. ಆದರೀಗ ಬಿಸಿಸಿಐ ಹೆಚ್ಚುವರಿ ಆಟಗಾರರನ್ನು ಆಯ್ಕೆ ಮಾಡಿರು ವುದರಿಂದ ಕ್ರಿಕೆಟಿನ ಮಹಾಕೂಟದಲ್ಲಿ ಭಾಗಿಯಾಗುವ ಅವಕಾಶದಿಂದ ವಂಚಿತರಾಗಿದ್ದ ಈ ಇಬ್ಬರೂ ಆಟಗಾರರಲ್ಲಿ ಪುನಃ ಆಸೆ ಚಿಗುರಿದೆ.

ಅಗತ್ಯ ಬಿದ್ದರೆ ಇವರು ರೆಡಿ…
ಮೀಸಲು ಆಟಗಾರರ ಆಯ್ಕೆ ಬಗ್ಗೆ ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, “ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಸಂದರ್ಭದಲ್ಲಿ ಮಾಡಿದಂತೆಯೇ ಈ ಬಾರಿಯೂ ಹೆಚ್ಚುವರಿ ಆಟಗಾರರನ್ನು ಹೊಂದಿರಲಿದ್ದೇವೆ. ಹಾಗಾಗಿ, ಒಬ್ಬ ವಿಕೆಟ್‌ ಕೀಪರ್‌ (ಪಂತ್‌), ಒಬ್ಬ ಬ್ಯಾಟ್ಸ್‌ಮನ್‌ (ರಾಯುಡು) ಮತ್ತು ಬೌಲರ್‌ನನ್ನು (ನವದೀಪ್‌) ಹೊಂದಿರುವ ಹೆಚ್ಚುವರಿ ಆಟಗಾರರ ತಂಡ ಸಿದ್ಧವಿರಲಿದೆ. ವಿಶ್ವಕಪ್‌ ಪಂದ್ಯಗಳಲ್ಲಿ ಭಾರತದ ಆಟಗಾರರ್ಯಾರಾದರೂ ಗಾಯಗೊಂಡರೆ ಅಥವಾ ತಂಡಕ್ಕೆ ಆವಶ್ಯಕವೆನಿಸಿದರೆ ಈ ಹೆಚ್ಚುವರಿ ಆಟಗಾರರನ್ನು ಕಳಿಸಲಾಗುತ್ತದೆ’ ಎಂದು ತಿಳಿಸಿದ್ದಾರೆ.

“ಈಗಾಗಲೇ ನೆಟ್‌ ಬೌಲರ್‌ಗಳಾಗಿ ತಂಡದೊಂದಿಗೆ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಲಿರುವ ಅಹ್ಮದ್‌, ಆವೇಶ್‌ ಖಾನ್‌ ಮತ್ತು ದೀಪಕ್‌ ಚಹರ್‌ ಅವರನ್ನು ಅಗತ್ಯ ಬಿದ್ದಲ್ಲಿ ಹೆಚ್ಚುವರಿ ಬೌಲರ್‌ಗಳೆಂದು ತಂಡದ ವ್ಯವಸ್ಥಾಪಕ ಮಂಡಳಿ ಪರಿಗಣಿಸಬಹುದು’ ಎಂದೂ ಆವರು ಹೇಳಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.