ರಿಷಭ್ ಪಂತ್ ಮತ್ತೆ ಮೈದಾನಕ್ಕಿಳಿಯಲು ಇಷ್ಟು ಸಮಯ ಬೇಕಾಗಬಹುದು… ಸೌರವ್ ಗಂಗೂಲಿ
Team Udayavani, Feb 27, 2023, 5:33 PM IST
ಮುಂಬಯಿ: ಟೀಮ್ ಇಂಡಿಯಾ ಕ್ರಿಕೆಟಿಗ ರಿಷಭ್ ಪಂತ್ ಕಾರು ಅಪಘಾತದ ಬಳಿಕ ವಿಶ್ರಾಂತಿಯಲ್ಲಿದ್ದು, ಚೇತರಿಕೆ ಕಾಣುತ್ತಿದ್ದಾರೆ. ಪಂತ್ ಮತ್ತೆ ಮೈದಾನದಲ್ಲಿ ಬ್ಯಾಟ್ ಹಿಡಿದು ಅಬ್ಬರಿಸಲು ಕೆಲ ತಿಂಗಳುಗಳೇ ಕಳೆದು ಹೋಗಬಹುದು. ಈ ಬಾರಿಯ ಐಪಿಎಲ್ ನಲ್ಲಿ ಪಂತ್ ಕಾಣಿಸಿಕೊಳ್ಳುವುದಿಲ್ಲ ಎನ್ನುವುದು ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ ನಲ್ಲಿ ಕ್ಯಾಪ್ಟನ್ ಆಗಿದ್ದ ಪಂತ್, ತನ್ನ ನಾಯಕತ್ವದಿಂದ ತಂಡವನ್ನು ಶ್ರೇಷ್ಠವಾಗಿ ಮುನ್ನೆಡಸುತ್ತಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಿರ್ದೇಶಕ ಸೌರವ್ ಗಂಗೂಲಿ ಅವರು ರಿಷಭ್ ಪಂತ್ ಅವರ ಬಗ್ಗೆ ಮಾತನಾಡಿದ್ದಾರೆ.
ತಂಡದಲ್ಲಿ ರಿಷಭ್ ಪಂತ್ ಅವರ ಜಾಗವನ್ನು ತುಂಬುವುದು ಕಷ್ಟ. ಅವರ ಜಾಗದಲ್ಲಿ ಯಾವ ಆಟಗಾರವನ್ನು ಸೇರಿಸಬೇಕೆನ್ನುವುದು ಇನ್ನಷ್ಟೇ ಅಂತಿಮವಾಗಬೇಕಿದೆ. ಅಪಘಾತದ ಬಳಿಕ ಪಂತ್ ಅವರ ಬಳಿ ನಾನು ಅನೇಕ ಬಾರಿ ಮಾತನಾಡಿದ್ದೇನೆ ಎಂದು ಗಂಗೂಲಿ ಹೇಳಿದ್ದಾರೆ.
ಇದನ್ನೂ ಓದಿ: ಗ್ಲಾಮರಸ್ ಲುಕ್ ನಲ್ಲಿ ಕಾಣಿಸಿಕೊಂಡ ರಶ್ಮಿಕಾ: ಉರ್ಫಿ ಜಾವೇದ್ಗೆ ಹೋಲಿಸಿದ ನೆಟ್ಟಿಗರು
ಪಂತ್ ಅಪಘಾತದಿಂದ ಗಾಯ, ಶಸ್ತ್ರಚಿಕಿತ್ಸೆಯಿಂದ ಜೀವನದ ಕಠಿಣ ಸಮಯವನ್ನು ಎದುರಿಸುತ್ತಿದ್ದಾರೆ. ಪಂತ್ ಮತ್ತೆ ಟೀಮ್ ಇಂಡಿಯಾಕ್ಕೆ ಮರಳಲು ಕನಿಷ್ಠ 2 ವರ್ಷವಾಗಬಹುದು ಎಂದು ಪಿಟಿಐಗೆ ಹೇಳಿದ್ದಾರೆ.
ಸದ್ಯ ಪಂತ್ ಅವರ ಜಾಗಕ್ಕೆ ಅಭಿಷೇಕ್ ಪೊರೆಲ್ ಮತ್ತು ದೇಶೀಯ ಅನುಭವಿ ಆಟಗಾರ ಶೆಲ್ಡನ್ ಜಾಕ್ಸನ್ ಈ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಯಿದೆ. ತಂಡದ ನಾಯಕತ್ವವನ್ನು ಡೇವಿಡ್ ವಾರ್ನರ್ ವಹಿಸಿಕೊಳ್ಳುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ