
ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿ : ನಾಯಕ ರಾಹುಲ್ ಗಾಯಾಳಾಗಿ ಹೊರಗೆ
ನಾಯಕತ್ವ ಬದಲು, ಕುಲದೀಪ್ ಯಾದವ್ ಕೂಡ ಗಾಯಾಳು
Team Udayavani, Jun 8, 2022, 7:10 PM IST

ನವದೆಹಲಿ : ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಬೇಕಿದ್ದ ಕೆಎಲ್ ರಾಹುಲ್ ಗಾಯದ ಕಾರಣದಿಂದಾಗಿ ಸರಣಿಯಿಂದ ಹೊರಗುಳಿಯಬೇಕಾಗಿದೆ. ವಿಕೆಟ್ ಕೀಪರ್, ಬ್ಯಾಟ್ಸ್ಮನ್ ರಿಷಬ್ ಪಂತ್ ಅವರು ನಾಯಕತ್ವವನ್ನು ವಹಿಸಲಿದ್ದಾರೆ.
ಇದೆ ವೇಳೆ ಭಾರತ ತಂಡದ ಸ್ಪಿನ್ನರ್ ಕುಲದೀಪ್ ಯಾದವ್ ಅವರು ಐದು ಪಂದ್ಯಗಳ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ.
ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ದಕ್ಷಿಣ ಆಫ್ರಿಕಾ ವಿರುದ್ಧದ ಸ್ವದೇಶಿ ಸರಣಿಗೆ ವಿಕೆಟ್ ಕೀಪರ್ ರಿಷಬ್ ಪಂತ್ ಅವರನ್ನು ನಾಯಕ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನು ಉಪನಾಯಕರನ್ನಾಗಿ ನೇಮಿಸಿದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಮಂಗಳವಾರ ಸಂಜೆ ನೆಟ್ಸ್ನಲ್ಲಿ ಬ್ಯಾಟಿಂಗ್ ಮಾಡುತ್ತಿರುವಾಗ ಕುಲದೀಪ್ ಯಾದವ್ ಅವರ ಬಲಗೈಗೆ ಪೆಟ್ಟಾಗಿದ್ದು, ರಾಹುಲ್ ಅವರ ಬಲ ತೊಡೆಗೆ ಗಾಯವಾಗಿದೆ ಎಂದು ಬಿಸಿಸಿಐ ಬಹಿರಂಗಪಡಿಸಿದೆ.
NEWS ?- KL Rahul and Kuldeep Yadav ruled out of #INDvSA series owing to injury.
The All-India Senior Selection Committee has named wicket-keeper Rishabh Pant as Captain and Hardik Pandya as vice-captain for the home series against South Africa @Paytm #INDvSA
— BCCI (@BCCI) June 8, 2022
ಪಂದ್ಯದ ವೇಳಾಪಟ್ಟಿ
ಜೂನ್ 09 ರಂದು ದೆಹಲಿಯಲ್ಲಿ ಸರಣಿಯ ಮೊದಲ ಟಿ 20 ಪಂದ್ಯ ನಡೆಯಲಿದೆ. 12 ರಂದು ಕಟಕ್ ನಲ್ಲಿ 2 ನೇ ಪಂದ್ಯ, 14 ವಿಶಾಖಪಟ್ಟಣಂ ನಲ್ಲಿ ಮೂರನೇ ಪಂದ್ಯ, 17 ರಂದು ರಾಜಕೋಟ್ ನಲ್ಲಿ ನಾಲ್ಕನೇ ಪಂದ್ಯ ಮತ್ತು 19 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಸರಣಿಯ ಕೊನೆಯ ಪಂದ್ಯ ನಡೆಯಲಿದೆ. ಎಲ್ಲಾ ಪಂದ್ಯಗಳು ಸಂಜೆ 7 ಗಂಟೆಯಿಂದ ಆರಂಭವಾಗಲಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

India’s first ever ಬುಲೆಟ್ ಟ್ರೈನ್ ಟರ್ಮಿನಲ್ ಅನಾವರಣ ; Video

Chennai ದೊರೆಯಲಿದೆ ನಗರ ಪ್ರವಾಹ ನಿಯಂತ್ರಣ ವ್ಯವಸ್ಥೆ :ದೇಶದಲ್ಲಿಯೇ ಮೊದಲ ಬಾರಿಗೆ

South Africa Tour; ಭಾರತೀಯ ತಂಡ ಡರ್ಬಾನ್ಗೆ ಆಗಮನ

Politics: ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್,ಅರ್ಜುನ್ ಮುಂಡಾಗೆ ಹೆಚ್ಚುವರಿ ಖಾತೆ

ಬೆಳಗಾವಿ ಕಲಾಪದಲ್ಲಿ BJP ಗಲಿಬಿಲಿ!- ಅಶೋಕ್, ವಿಜಯೇಂದ್ರ ನಡುವೆ ಧರಣಿ, ಸಭಾತ್ಯಾಗ ಗೊಂದಲ