ಸೋಲಿನೊಂದಿಗೆ ಟೆನ್ನಿಸ್ ಅಂಕಣಕ್ಕೆ ಅಂತಿಮ ವಿದಾಯ ಹೇಳಿದ ರೋಜರ್ ಫೆಡರರ್


Team Udayavani, Sep 24, 2022, 9:17 AM IST

Roger Federer bids adieu

ಲಂಡನ್: ಕೆಲ ದಿನಗಳ ಹಿಂದಷ್ಟೇ ವಿದಾಯ ಘೋಷಿಸಿದ್ದ ಸಾರ್ವಕಾಲಿಕ ಶ್ರೇಷ್ಠ ಟೆನ್ನಿಸ್ ಆಟಗಾರರಲ್ಲಿ ಒಬ್ಬರಾದ ರೋಜರ್ ಫೆಡರರ್ ಶುಕ್ರವಾರ ತಮ್ಮ ಅಂತಿಮ ಪಂದ್ಯವಾಡಿದರು. ಲಂಡನ್ ನ ಲೇವರ್ ಕಪ್ ನಲ್ಲಿ ದೀರ್ಘಕಾಲದ ಕೋರ್ಟ್ ಎದುರಾಳಿ ರಾಫೆಲ್ ನಡಾಲ್ ಜೊತೆಗೂಡಿ ಡಬಲ್ಸ್ ಆಡಿದ ರೋಜರ್ ಫೆಡರರ್ ಅಂತಿಮ ಪಂದ್ಯದಲ್ಲಿ ಸೋಲನುಭವಿಸಿದರು.

ಯೂರೋಪ್ ತಂಡವನ್ನು ಪ್ರತಿನಿಧಿಸಿದ ‘ಫೆಡಲ್’ ಶುಕ್ರವಾರದ ಪಂದ್ಯದಲ್ಲಿ ಟೀಮ್ ವರ್ಲ್ಡ್‌ ನ ಜಾಕ್ ಸಾಕ್ ಮತ್ತು ಫ್ರಾನ್ಸಿಸ್ ಟಿಯಾಫೊ ವಿರುದ್ಧ 6-4, 6(2)-7, 9-11 ಸೆಟ್‌ಗಳಿಂದ ಸೋತರು.

ಆದಾಗ್ಯೂ, ಟೆನಿಸ್‌ ಗೆ ಸೇವೆ ಸಲ್ಲಿಸಿದ ಶ್ರೇಷ್ಠ ಆಟಗಾರರೊಬ್ಬರ ನಿವೃತ್ತಿಯ ಸಂದರ್ಭವಾದ ಕಾರಣ ಫಲಿತಾಂಶವು ಅಪ್ರಸ್ತುತವಾಯಿತು. ಪೂರ್ಣ ಸ್ಟೇಡಿಯಂ ಫೆಡರರ್ ಮಯವಾಗಿತ್ತು. “ಇದು ಪರಿಪೂರ್ಣ ಪ್ರಯಾಣವಾಗಿದೆ” ಎಂದು ಫೆಡರರ್ ತಮ್ಮ ಆನ್-ಕೋರ್ಟ್ ಸಂದರ್ಶನದಲ್ಲಿ ಹೇಳಿದರು.

ಪಂದ್ಯದ ನಂತರ ಕೆಲ ಹೊತ್ತು ಭಾವುಕ ಸನ್ನಿವೇಶಕ್ಕೆ ಅಂಕಣ ಸಾಕ್ಷಿಯಾಯಿತು. ನಡಾಲ್ ಮತ್ತು ಎದುರಾಳಿಗಳಾದ ಸಾಕ್ ಹಾಗು ಟಿಯಾಫೊ ಅವರು ಫೆಡರರ್ ಅವರನ್ನು ತಬ್ಬಿಕೊಂಡರು. ದಿಗ್ಗಜ ಆಟಗಾರರಾದ ರಾಫೆಲ್ ನಡಾಲ್, ಜೋಕೊವಿಕ್ ಕಣ್ಣಾಲಿಗಳು ತುಂಬಿ ಬಂದಿದ್ದವು. ಪ್ರೇಕ್ಷಕರು ಸ್ಟ್ಯಾಂಡ್‌ ನಿಂದ ಫೆಡರರ್‌ ಗೆ ಚಪ್ಪಾಳೆಗಳ ಸುರಿಮಳೆಗೈದು ಟೆನ್ನಿಸ್ ಕೂಟದ ಕ್ಲಾಸ್ ಆಟಗಾರನಿಗೆ ವಿದಾಯ ಹೇಳಿದರು.

ಫೆಡರರ್ ಅವರ ಕುಟುಂಬ, ಪತ್ನಿ ಮಿರ್ಕಾ, ನಾಲ್ವರು ಮಕ್ಕಳು ಮತ್ತು ಪೋಷಕರು ಅಂಕಣದಲ್ಲಿ ಸೇರಿಕೊಂಡರು. ಫೆಡರರ್ ತಂಡದ ಸಹ ಆಟಗಾರರು ಮತ್ತು ಎದುರಾಳಿಗಳು ಫೆಡರರ್ ಅವರನ್ನು ಭುಜದ ಮೇಲೆತ್ತಿ ಸಂಭ್ರಮಿಸಿದರು.

ಟಾಪ್ ನ್ಯೂಸ್

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.