ಟಿ20 ರ‍್ಯಾಂಕಿಂಗ್: ರೋಹಿತ್, ಶಿಖರ್ ಕುಸಿತ,ಮ್ಯಾಕ್ಸ್ ವೆಲ್ ಗೆ ಬಂಪರ್


Team Udayavani, Feb 28, 2019, 11:45 AM IST

maxi.jpg

ದುಬೈ: ಬುಧವಾರದಷ್ಟೇ ಮುಕ್ತಾಯಗೊಂಡ ಭಾರತ-ಆಸ್ಟ್ರೇಲಿಯಾ ಟಿ-ಟ್ವೆಂಟಿ ಸರಣಿಯ ನಂತರ ಐಸಿಸಿ ರ‍್ಯಾಂಕಿಂಗ್ ಪಟ್ಟಿ ಬಿಡುಗಡೆಗೊಂಡಿದ್ದು, ಶಿಖರ್ ಧವನ್, ಯುಜುವೇಂದ್ರ ಚಾಹಲ್ ಮತ್ತು ರೋಹಿತ್ ಶರ್ಮಾ ಕುಸಿತ ಕಂಡಿದ್ದರೆ, ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿದ ಆಸೀಸ್ ನ ಗ್ಲೆನ್ ಮ್ಯಾಕ್ಸ್ ವೆಲ್‌ಗೆ ಬಂಪರ್ ಹೊಡೆದಿದ್ದು ಮೂರನೇ ಸ್ಥಾನಕ್ಕೆ ಭಡ್ತಿ ಪಡೆದಿದ್ದಾರೆ. 

ಸರಣಿಗೂ ಮೊದಲು ಆರನೇ ಸ್ಥಾನದಲ್ಲಿದ್ದ ಆಸೀಸ್ ಆಟಗಾರ ಗ್ಲೆನ್ ಮ್ಯಾಕ್ಸ್ ವೆಲ್ ಮೂರು ಸ್ಥಾನ ಭಡ್ತಿ ಪಡೆದು ಮೂರನೇ ಸ್ಥಾನಕ್ಕೇರಿದರು. ಇದು ಮ್ಯಾಕ್ಸ್ ವೆಲ್ ಅವರ ಜೀವನಶ್ರೇಷ್ಠ ರ‍್ಯಾಕಿಂಗ್. ಆದರೆ ಮೂರನೇ ಸ್ಥಾನದಲ್ಲಿದ್ದ ಆಸೀಸ್ ನಾಯಕ ಆರೋನ್ ಫಿಂಚ್ ಒಂದು ಸ್ಥಾನ ಕೆಳಕ್ಕಿಳಿದು ನಾಲ್ಕನೇ ಸ್ಥಾನಕ್ಕೆ ಜಾರಿದರು. 

ದ್ವಿತೀಯ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಭಾರತದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಎರಡು ಸ್ಥಾನ ಪಡೆದರು. ಈ ಹಿಂದೆ 19ನೇ ರ‍್ಯಾಂಕ್ ನಲ್ಲಿದ್ದ ಕೊಹ್ಲಿ 17ನೇ ರ‍್ಯಾಂಕ್ ಗೆ ಏರಿದರು. ರೋಹಿತ್ ಶರ್ಮಾ ಎರಡು ಸ್ಥಾನ ಕಳೆದುಕೊಂಡು12ನೇ ರ‍್ಯಾಂಕ್ ಪಡೆದರೆ, ಶಿಖರ್ ಧವನ್ ಮೂರು ಸ್ಥಾನ ಕಳೆದುಕೊಂಡು 15ನೇ ಸ್ಥಾನಕ್ಕೆ ಜಾರಿದರು. 

ಏರಡೂ ಪಂದ್ಯಗಳಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಕೆ.ಎಲ್.ರಾಹುಲ್ ಒಂದು ಸ್ಥಾನ ಮುನ್ನಡೆಯೊಂದಿಗೆ ಆರನೇ ಸ್ಥಾನಕ್ಕೆ ಭಡ್ತಿ ಪಡೆದರೆ, ಎರಡನೇ ಪಂದ್ಯದಲ್ಲಿ ಉತ್ತಮವಾಗಿ ಬ್ಯಾಟ್ ಬೀಸಿದ ಮಹೇಂದ್ರ ಸಿಂಗ್ ಧೋನಿ ಒಂಬತ್ತು ಸ್ಥಾನ ಭಡ್ತಿ ಪಡೆದು 56ನೇ ಸ್ಥಾನಕ್ಕೆ ಬಂದರು. 

ಉಳಿದಂತೆ ಇತ್ತೀಚೆಗೆ ಐರ್ಲೆಂಡ್ ವಿರುದ್ಧ ಕೇವಲ 62 ಎಸೆತಗಳಿಂದ 162 ರನ್ ಬಾರಿಸಿ ವಿಶ್ವ ಕ್ರಿಕೆಟ್ ನ ಗಮನಸೆಳೆದ ಅಫ್ಘಾನಿಸ್ತಾನ ಹಜರುತುಲ್ಲಾಹ್ ಜಜಾಯ್ ಭರ್ಜರಿ 32 ಸ್ಥಾನ ಭಡ್ತಿ ಪಡೆದು ಏಳನೇ ರ‍್ಯಾಂಕಿಂಗ್ ಪಡೆದರು. ಟಿ-ಟ್ವೆಂಟಿ ಬ್ಯಾಟಿಂಗ್ ರ‍್ಯಾಂಕಿಂಗ್ ನ ಮೊದಲೆರಡು ಸ್ಥಾನವನ್ನು ಪಾಕಿಸ್ಥಾನದ ಬಾಬರ್ ಅಜಮ್ ಮತ್ತು ಕಾಲಿನ್ ಮನ್ರೊ ಅಲಂಕರಿಸಿದರು. 

ಭುವಿ, ಕುಲದೀಪ್, ಚಾಹಲ್ ಕುಸಿತ: ಬೌಲಿಂಗ್ ರ‍್ಯಾಂಕಿಂಗ್ ನಲ್ಲಿ ಸ್ಪಿನ್ನರ್ ಕುಲದೀಪ್ ಯಾದವ್, ಚಾಹಲ್ ಮತ್ತು ಭುವನೇಶ್ವರ್ ಕುಮಾರ್ ಹಿನ್ನಡೆ ಅನುಭವಿಸಿದರು. ಮೂರನೇ ಸ್ಥಾನದಲ್ಲಿದ್ದ ಕುಲದೀಪ್ ನಾಲ್ಕಕ್ಕಿಳಿದರೆ ಯುಜುವೇಂದ್ರ ಚಾಹಲ್ ಎಂಟು ಸ್ಥಾನ ಹಿನ್ನಡೆ ಪಡೆದು 19ನೇ ಸ್ಥಾನಕ್ಕೆ ಇಳಿದರು. ವೇಗಿ ಭುವನೇಶ್ವರ್ ಕುಮಾರ್ ನಾಲ್ಕು ಸ್ಥಾನ ಕಳೆದುಕೊಂಡು 23 ನೇ ಸ್ಥಾನಕ್ಕೆ ಜಾರಿದರು. ಬೌಲಿಂಗ್ ಪಟ್ಟಿಯಲ್ಲಿ ಮೊದಲೆರಡು ಸ್ಥಾನದಲ್ಲಿ ಅಫ್ಘಾನಿಸ್ತಾನದ ಸ್ಪಿನ್ನರ್ ರಶೀದ್ ಖಾನ್ ಮತ್ತು ಪಾಕ್ ನ ಶಾದಾಬ್ ಖಾನ್ ಇದ್ದಾರೆ.

ತಂಡಗಳ ಪಟ್ಟಿಯಲ್ಲಿ 2-0 ಅಂತರದಿಂದ ಸರಣಿ ಸೋತ ಭಾರತ ಎರಡು ಅಂಕ ಕಳೆದುಕೊಂಡರೂ ಎರಡನೇ ಸ್ಥಾನದಲ್ಲಿದೆ. ಸರಣಿ ಜಯದಿಂದ ಎರಡು ಅಂಕ ಪಡೆದ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾವನ್ನು ಹಿಂದಿಕ್ಕಿ ಮೂರನೇ ಸ್ಥಾನ ತಲುಪಿತು. ಪಾಕಿಸ್ಥಾನ ಮೊದಲ ಸ್ಥಾನದಲ್ಲಿದೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.