ICC ODI Rankings: ಭಾರತ ನಂ.1, ರೋಹಿತ್‌ ನಂ.5


Team Udayavani, Oct 3, 2017, 7:15 AM IST

Ranking.jpg

ದುಬಾೖ: ಐಸಿಸಿಯ ನೂತನ ಏಕದಿನ ರ್‍ಯಾಂಕಿಂಗ್‌ ಯಾದಿ ಸೋಮವಾರ ಅಧಿಕೃತವಾಗಿ ಪ್ರಕಟಗೊಂಡಿದೆ. ಭಾರತ ಒಟ್ಟು 120 ಅಂಕಗಳೊಂದಿಗೆ ನಂ.1 ತಂಡವಾಗಿ ಮೂಡಿಬಂದರೆ, ಆರಂಭಕಾರ ರೋಹಿತ್‌ ಶರ್ಮ 5ನೇ ಸ್ಥಾನ ಅಲಂಕರಿಸಿದರು.

ಆಸ್ಟ್ರೇಲಿಯ ವಿರುದ್ಧದ ಸರಣಿಗೂ ಮುನ್ನ ಭಾರತ 3ನೇ ಸ್ಥಾನದಲ್ಲಿತ್ತು. ಆಗ ದಕ್ಷಿಣ ಆಫ್ರಿಕಾ ನಂ.1, ಆಸ್ಟ್ರೇಲಿಯ ನಂ.2 ಆಗಿತ್ತು. ಈಗ ಈ ಮೂರೂ ತಂಡಗಳ ಸ್ಥಾನಪಲ್ಲಟವಾಗಿದೆ. ಭಾರತ ಅಗ್ರಸ್ಥಾನ ಅಲಂಕರಿಸಿದೆ (120). ದಕ್ಷಿಣ ಆಫ್ರಿಕಾ 2ನೇ ಸ್ಥಾನಕ್ಕೆ ಇಳಿದಿದೆ (119). ಆಸ್ಟ್ರೇಲಿಯ ಮೂರಕ್ಕೆ ಕುಸಿದಿದೆ (114). ಇಂಗ್ಲೆಂಡ್‌ ಕೂಡ 114 ಅಂಕ ಹೊಂದಿದ್ದರೂ ದಶಮಾಂಶ ಲೆಕ್ಕಾಚಾರದಲ್ಲಿ ಆಸೀಸ್‌ ಸ್ವಲ್ಪ ಮುಂದಿದೆ. ಇಂಗ್ಲೆಂಡ್‌ ಇತ್ತೀಚೆಗಷ್ಟೇ ವೆಸ್ಟ್‌ ಇಂಡೀಸ್‌ ಎದುರಿನ 5 ಪಂದ್ಯಗಳ ಸರಣಿಯನ್ನು 4-0 ಅಂತರದಿಂದ ಗೆದ್ದಿತ್ತು.

ಆಸ್ಟ್ರೇಲಿಯ ವಿರುದ್ಧ 3-0 ಮುನ್ನಡೆ ಸಾಧಿಸಿದಾಗ ಭಾರತ ನಂ.1 ಸ್ಥಾನಕ್ಕೆ ಏರಿತಾದರೂ ಬೆಂಗಳೂರಿನಲ್ಲಿ ಸೋತೊಡನೆ ಮತ್ತೆ ಎರಡಕ್ಕೆ ಜಾರಿತ್ತು. ನಾಗ್ಪುರ ಗೆಲುವು ಮತ್ತೆ ಟೀಮ್‌ ಇಂಡಿಯಾವನ್ನು ಅಗ್ರಸ್ಥಾನಕ್ಕೇರಿಸಿದೆ. ಭಾರತ ಟೆಸ್ಟ್‌ ಕ್ರಿಕೆಟಿನ ಅಗ್ರಮಾನ್ಯ ತಂಡವೂ ಹೌದು.

ರೋಹಿತ್‌ 790 ಅಂಕ
ಆಸ್ಟ್ರೇಲಿಯ ವಿರುದ್ಧದ ಸರಣಿಯಲ್ಲಿ ಒಂದು ಶತಕ ಸಹಿತ 296 ರನ್‌ ಬಾರಿಸಿದ ರೋಹಿತ್‌ ಶರ್ಮ ತಮ್ಮ ರೇಟಿಂಗ್‌ ಆಂಕವನ್ನು 790ಕ್ಕೆ ಹೆಚ್ಚಿಸಿಕೊಂಡರು. ಇದು ಅವರ ಜೀವನಶ್ರೇಷ್ಠ ಅಂಕವಾಗಿದೆ. ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ ಅವರು 9ರಿಂದ 5ನೇ ಸ್ಥಾನಕ್ಕೆ ನೆಗೆದಿದ್ದಾರೆ. 2016ರ ಫೆಬ್ರವರಿಯಲ್ಲಿ 3ನೇ ಸ್ಥಾನ ಅಲಂಕರಿಸಿದ್ದು ರೋಹಿತ್‌ ಅವರ ಜೀವನಶ್ರೇಷ್ಠ ರ್‍ಯಾಂಕಿಂಗ್‌. ರೋಹಿತ್‌ ಜತೆಗಾರ ಅಜಿಂಕ್ಯ ರಹಾನೆ 4 ಸ್ಥಾನ ಮೇಲೇರಿ 24ನೇ ಕ್ರಮಾಂಕಕ್ಕೆ ಬಂದಿದ್ದಾರೆ.

ಭಾರತ-ಆಸ್ಟ್ರೇಲಿಯ, ಇಂಗ್ಲೆಂಡ್‌-ವೆಸ್ಟ್‌ ಇಂಡೀಸ್‌ ಸರಣಿ ಬಳಿಕ ರ್‍ಯಾಂಕಿಂಗ್‌ ಪ್ರಗತಿ ಸಾಧಿಸಿದ ಪ್ರಮುಖರೆಂದರೆ ಕೇದಾರ್‌ ಜಾಧವ್‌ (44ರಿಂದ 36), ಮಾರ್ಕಸ್‌ ಸ್ಟೊಯಿನಿಸ್‌ (128ರಿಂದ 54), ಜಾಸನ್‌ ರಾಯ್‌ (37ರಿಂದ 30), ಜಾನಿ ಬೇರ್‌ಸ್ಟೊ (88ರಿಂದ 40), ಮೊಯಿನ್‌ ಅಲಿ (78ರಿಂದ 56), ಜಾಸನ್‌ ಹೋಲ್ಡರ್‌ (84ರಿಂದ 73) ಮತ್ತು ಎವಿನ್‌ ಲೆವಿಸ್‌ (109ರಿಂದ 78).

ತಾಹಿರ್‌ ಮತ್ತೆ ನಂ.1
ಏಕದಿನ ಬೌಲಿಂಗ್‌ ರ್‍ಯಾಂಕಿಂಗ್‌ನಲ್ಲಿ ದಕ್ಷಿಣ ಆಫ್ರಿಕಾದ ಇಮ್ರಾನ್‌ ತಾಹಿರ್‌ ಮತ್ತೆ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಗಾಯಾಳಾಗಿ ಭಾರತ ಸರಣಿಯಿಂದ ಹೊರಗುಳಿದ ಜೋಶ್‌ ಹ್ಯಾಝಲ್‌ವುಡ್‌ 18 ಅಂಕ ಕಳೆದುಕೊಂಡು 2ನೇ ಸ್ಥಾನಕ್ಕೆ ಇಳಿಯಬೇಕಾಯಿತು.

ಭಾರತದ ಸ್ಪಿನ್ನರ್‌ಗಳಾದ ಯಜುವೇಂದ್ರ ಚಾಹಲ್‌ (99ರಿಂದ 75), ಕುಲದೀಪ್‌ ಯಾದವ್‌ (89ರಿಂದ 80) ರ್‍ಯಾಂಕಿಂಗ್‌ನಲ್ಲಿ ಏರಿಕೆ ಕಂಡಿದ್ದಾರೆ. ಅಕ್ಷರ್‌ ಪಟೇಲ್‌ ಜೀವನಶ್ರೇಷ್ಠ 7ನೇ ಸ್ಥಾನ ಅಲಂಕರಿಸಿದ್ದಾರೆ.

ಟಾಪ್ ನ್ಯೂಸ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

28

T20: ಬಾಂಗ್ಲಾ ವಿರುದ್ಧ 7 ವಿಕೆಟ್‌ ಜಯ: ಭಾರತದ ವನಿತೆಯರ ಸರಣಿ ವಿಕ್ರಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.