ಮೇಜರ್ ಸರ್ಜರಿಗೆ ಮುಂದಾದ ಬಿಸಿಸಿಐ: ನಾಯಕತ್ವ ಕಳೆದುಕೊಳ್ಳುವ ಭೀತಿಯಲ್ಲಿ ರೋಹಿತ್

ಕೋಚ್ ರಾಹುಲ್ ದ್ರಾವಿಡ್ ಅವರ ಕೆಲಸಕ್ಕೂ ಕುತ್ತು

Team Udayavani, Nov 19, 2022, 9:51 AM IST

rohit sharma

 ಮುಂಬೈ: ಟಿ20 ವಿಶ್ವಕಪ್ ಕೂಟ ಅಂತ್ಯವಾಗಿ ವಾರ ಕಳೆಯವಷ್ಟರಲ್ಲಿ ಭಾರತ ತಂಡದಲ್ಲಿ ಬದಲಾವಣೆಯ ಲಕ್ಷಣಗಳು ಕಾಣಲಾರಂಭಿಸಿದೆ. ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್ ನಲ್ಲಿ ಭಾರತ ತಂಡವು ಸೆಮಿ ಫೈನಲ್ ನಲ್ಲಿ ತನ್ನ ಅಭಿಯಾನ ಅಂತ್ಯಗೊಳಿಸಿತ್ತು. ಆದರೆ ಭಾರತ ತಂಡದ ಹಿರಿಯರ ಪ್ರದರ್ಶನದ ಮೇಲೆ ಟೀಕೆಗಳು ಕೇಳಿಬಂದಿದೆ.

ಭಾರತದಲ್ಲಿ ಇಷ್ಟೆಲ್ಲಾ ಯುವ ಪ್ರತಿಭೆಗಳಿದ್ದರೂ ಇನ್ನೂ ಹಿರಿಯರ ಅವಲಂಬನೆ ಯಾಕೆ? ಟಿ20ಯಲ್ಲಿ ಏಕದಿನ ಕ್ರಿಕೆಟ್ ನಂತೆ ಆಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಮುಂದಿನ ಟಿ20 ವಿಶ್ವಕಪ್ ಗೆ ಇನ್ನೂ ಎರಡು ವರ್ಷ ಬಾಕಿ ಇರುವಾಗ ಹಲವು ಪ್ರಯೋಗಗಳನ್ನು ಮಾಡಲು ಬಿಸಿಸಿಐ ಮುಂದಾಗಿದೆ.

ಇದರ ಮೊದಲ ಭಾಗ ಎಂಬಂತೆ ಬಿಸಿಸಿಐ ಶುಕ್ರವಾರ ರಾಷ್ಟ್ರೀಯ ಆಯ್ಕೆ ಸಮಿತಿಯನ್ನು ವಜಾ ಮಾಡಿದೆ. ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯ ಬಗ್ಗೆ ಕಳೆದೊಂದು ವರ್ಷದಿಂದ ಕೆಲವು ಅಪಸ್ವರಗಳು ಕೇಳಿಬಂದಿತ್ತು. ಇದೀಗ ಪೂರ್ಣ ಸಮಿತಿಯನ್ನೇ ಬರ್ಖಾಸ್ತು ಮಾಡಿರುವ ಬಿಸಿಸಿಐ, ಹೊಸ ಅರ್ಜಿ ಆಹ್ವಾನ ಮಾಡಿದೆ.

ಇದನ್ನೂ ಓದಿ:ತನ್ನ ಪತ್ನಿಯನ್ನು ಹಿಡಿದುಕೊಂಡ ಎಂಬ ವಿಚಾರಕ್ಕೆ ಕೆಲಸಗಾರನ ಕೊಲೆ; ಆರೋಪಿಗೆ ಜೀವವಾಧಿ ಶಿಕ್ಷೆ

ಇದೀಗ ಟೀಂ ಇಂಡಿಯಾದ ನಾಯಕತ್ವ ಬದಲಾವಣೆಗೆ ಬಿಸಿಸಿಐ ಮುಂದಾಗಿದೆ ಎನ್ನಲಾಗಿದೆ. ಮೂರು ಮಾದರಿಗೆ ಮೂವರು ನಾಯಕರನ್ನು ನೇಮಿಸಲು ಬಿಸಿಸಿಐ ಯೋಜನೆ ರೂಪಿಸಿದೆ ಎಂದು ವರದಿಯಾಗಿದೆ. ಹೊಸ ಆಯ್ಕೆ ಸಮಿತಿಯು ಈ ಪ್ರತ್ಯೇಕ ನಾಯಕರನ್ನು ನೇಮಿಸುವ ಜವಾಬ್ದಾರಿಯನ್ನು ಹೊಂದಿದೆ ಎನ್ನುತ್ತಿವೆ ವರದಿಗಳು.

ಪ್ರಸ್ತುತ, ರೋಹಿತ್ ಶರ್ಮಾ ಎಲ್ಲಾ ಫಾರ್ಮಾಟ್‌ ಗಳಲ್ಲಿ ತಂಡವನ್ನು ಮುನ್ನಡೆಸುತ್ತಿದ್ದಾರೆ, ಆದರೆ ಹಾರ್ದಿಕ್ ಪಾಂಡ್ಯ ನ್ಯೂಜಿಲೆಂಡ್‌ ನ ನಡೆಯುತ್ತಿರುವ ಟಿ20 ಕ್ರಿಕೆಟ್ ಪ್ರವಾಸಕ್ಕೆ ತಂಡದ ನಾಯಕರಾಗಿದ್ದಾರೆ. ಮುಂದಿನ ಟಿ20 ತಂಡದ ನಾಯಕತ್ವ ಪಾಂಡ್ಯ ಪಾಲಾಗುವ ಸಾಧ್ಯತೆ ಹೆಚ್ಚಿದೆ.

35 ವರ್ಷ ವಯಸ್ಸಿನ ರೋಹಿತ್ ಶರ್ಮಾ ಮುಂದಿನ ವರ್ಷ ತವರು ನೆಲದಲ್ಲಿ ನಡೆಯಲಿರುವ 50 ಓವರ್‌ಗಳ ವಿಶ್ವಕಪ್‌ಗೆ ಅವರನ್ನು ನಾಯಕನಾಗಿ ಇರಿಸಿಕೊಳ್ಳಲು ಮಂಡಳಿಯು ಬಯಸಬಹುದು. ಆದರೆ 2024 ರಲ್ಲಿ ಟಿ 20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ಪಾಂಡ್ಯ ಅವರನ್ನು ಬೆಂಬಲಿಸಲಾಗುತ್ತಿದೆ. ಇತ್ತೀಚಿನ ಆವೃತ್ತಿಯಲ್ಲಿ ಕಾಣಿಸಿಕೊಂಡಿರುವ ಹೆಚ್ಚಿನ ಹಿರಿಯ ಆಟಗಾರರು ಮುಂದಿನ ಆವೃತ್ತಿಗೆ ತಂಡದಲ್ಲಿ ಇರುವ ಸಾಧ್ಯತೆಯಿಲ್ಲ.

ಮತ್ತೊಂದೆಡೆ ಕೋಚ್ ರಾಹುಲ್ ದ್ರಾವಿಡ್ ಅವರ ಕೆಲಸಕ್ಕೂ ಕುತ್ತು ಬಂದಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.