ಕ್ಯಾಪ್ಟನ್ ಕಮಾಲ್: ಭರ್ಜರಿ ದ್ವಿಶತಕ ಸಿಡಿಸಿದ ರೋಹಿತ್ ಶರ್ಮಾ
Team Udayavani, Dec 13, 2017, 3:17 PM IST
ಮೊಹಾಲಿ : ಇಲ್ಲಿ ಬುಧವಾರ ಪ್ರವಾಸಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಭರ್ಜರಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದು ದ್ವಿಶತಕ ಸಿಡಿಸಿ (208) ಅಜೇಯರಾಗಿ ಉಳಿದಿದ್ದಾರೆ.
ಇದು ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ನಲ್ಲಿ ಸಿಡಿಸಿದ ಮೂರನೇ ದ್ವಿಶತಕದ ದಾಖಲೆಯಾಗಿದೆ. 2014 ರಲ್ಲಿ ಕೋಲ್ಕತಾದಲ್ಲಿ ಶ್ರೀಲಂಕಾ ವಿರುದ್ಧವೇ 264 ರನ್ ಸಿಡಿಸಿದ್ದರು. 2013 ರಲ್ಲಿ ಬೆಂಗಳೂರಿನಲ್ಲಿ ಆಸೀಸ್ ವಿರುದ್ಧ 209 ಸಿಡಿಸಿದ್ದರು.
ಆರಂಭದಲ್ಲಿ ತಾಳ್ಮೆಯ ಆಟವಾಡಿದ ರೋಹಿತ್ 117 ಎಸೆತಗಳನ್ನು ಬಳಸಿಕೊಂಡು ಶತಕ ಪೂರೈಸಿದರು. ಶತಕದ ಬಳಿಕ ಸಿಡಿದೆದ್ದ ರೋಹಿತ್ ಬೌಂಡರಿ ಸಿಕ್ಸರ್ಗಳ ಮಳೆಯನ್ನೇ ಸುರಿಸಿದರು. ಕೇವಲ 36 ಎಸೆತಗಳಲ್ಲಿ ಇನ್ನೂ ನೂರು ರನ್ ಪೂರೈಸಿ ಸಂಭ್ರಮಿಸಿದರು. ಅವರ ಇನ್ನಿಂಗ್ಸ್ನಲ್ಲಿ ಬರೋಬ್ಬರಿ 12 ಸಿಕ್ಸರ್ಗಳು ಮತ್ತು 13 ಬೌಂಡರಿಗಳಿದ್ದವು.
ಧರ್ಮಶಾಲಾ ಪಂದ್ಯದಲ್ಲಿ ಹೀನಾಯ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ತಂಡ ಪುಟಿದೆದ್ದು ಬಂದಿರುವುದಕ್ಕೆ ಈ ಪಂದ್ಯ ಸಾಕ್ಷಿಯಾಗಿದೆ.
ನಿಗದಿತ 50 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 392 ರನ್ ಗಳಿಸಿ ಶ್ರೀಲಂಕಾ ತಂಡಕ್ಕೆ 393 ರನ್ಗಳಭಾರೀ ಸವಾಲು ಮುಂದಿಟ್ಟಿದೆ.
ತಂಡದ ಪರ ರೋಹಿತ್ಗೆ ಭರ್ಜರಿ ಸಾಥ್ ನೀಡಿದ ಶಿಖರ್ ಧವನ್ 68, ಶ್ರೇಯಸ್ ಅಯ್ಯರ್ 88 ರನ್ಗಳಿಸಿ ಫಾರ್ಮ್ ಪ್ರದರ್ಶಿಸಿದರು. ಧೋನಿ 7 ರನ್ಗಳಿಸಿ ಔಟಾದರೆ, ಹಾರ್ದಿಕ್ ಪಾಂಡ್ಯಾ 8 ರನ್ಗಳಿಸಿ ಔಟಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ