ರೋಹಿತ್ ಶರ್ಮಾ, ವಿನೇಶ್ ಪೋಗಾಟ್ ಸಹಿತ ನಾಲ್ವರು ಖೇಲ್ರತ್ನಕ್ಕೆ ಶಿಫಾರಸು
Team Udayavani, Aug 18, 2020, 4:49 PM IST
ಹೊಸದಿಲ್ಲಿ: ಭಾರತದ ಏಕದಿನ ಮತ್ತು ಟಿ20 ಕ್ರಿಕೆಟ್ ತಂಡದ ಉಪ ನಾಯಕ ರೋಹಿತ್ ಶರ್ಮಾ, ಸ್ಟಾರ್ ಕುಸ್ತಿಪಟು ವಿನೇಶ್ ಫೋಗಾಟ್, ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಹಾಗೂ ಪ್ಯಾರಾಲಿಂಪಿಕ್ಸ್ನಲ್ಲಿ ಚಿನ್ನದ ಪದಕ ವಿಜೇತ ಹೈಜಂಪ್ ಪಟು ಮರಿಯಪ್ಪನ್ ತಂಗವೇಲು ಅವರನ್ನು ಈ ವರ್ಷದ ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಕ್ರೀಡಾ ಸಚಿವಾಲಯದ ಆಯ್ಕೆ ಸಮಿತಿಯು ಮಂಗಳವಾರ ಶಿಫಾರಸು ಮಾಡಿದೆ.
2016ರ ಬಳಿಕ ಎರಡನೇ ಬಾರಿ ನಾಲ್ವರು ಕ್ರೀಡಾಪಟುಗಳನ್ನು ದೇಶದ ಅತ್ಯುನ್ನತ ಕ್ರೀಡಾಗೌರವ ಖೇಲ್ ರತ್ನ ಪ್ರಶಸ್ತಿಯ ಅಂತಿಮ ಪಟ್ಟಿಗೆ ಆಯ್ಕೆ ಮಾಡಲಾಗಿದೆ.
ವೀರೇಂದ್ರ ಸೆಹವಾಗ್ ಹಾಗೂ ಮಾಜಿ ಹಾಕಿ ನಾಯಕ ಸರ್ದಾರ್ ಸಿಂಗ್ ಅವರನ್ನೊಳಗೊಂಡ ಆಯ್ಕೆ ಸಮಿತಿಯು ಕ್ರೀಡಾ ಪ್ರಾಧಿಕಾರ (ಸಾಯ್)ಕೇಂದ್ರ ಕಚೇರಿಯಲ್ಲಿ ಸಭೆ ಸೇರಿ ಶಿಫಾರಸು ಮಾಡಿದೆ.
ಇದನ್ನೂ ಓದಿ: 222 ಕೋಟಿ ರೂ. ಗೆ ಬಿಡ್ ಗೆದ್ದ ಡ್ರೀಮ್ ಇಲೆವೆನ್ ಪಾಲಿಗೆ ಐಪಿಎಲ್ 2020 ಪ್ರಾಯೋಜಕತ್ವ
2016ರಲ್ಲಿ ಪಿ.ವಿ.ಸಿಂಧು, ದೀಪಾ ಕರ್ಮಾಕರ್, ಜಿತು ರಾಯ್ ಹಾಗೂ ಸಾಕ್ಷಿ ಮಲಿಕ್ಗೆ ಜಂಟಿಯಾಗಿ ಖೇಲ್ರತ್ನ ಪ್ರಶಸ್ತಿ ನೀಡಲಾಗಿತ್ತು. ಕಳೆದ ವರ್ಷದ ಖೇಲ್ ರತ್ನ ಪ್ರಶಸ್ತಿ ದೀಪಾ ಮಲಿಕ್ ಮತ್ತು ಬಜರಂಗ್ ಪೂನಿಯಾ ಗೆ ನೀಡಿ ಪುರಸ್ಕರಿಸಲಾಗಿತ್ತು.
ನಾಲ್ಕನೇ ಕ್ರಿಕೆಟಿಗ ರೋಹಿತ್: ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆಯಾದ ನಾಲ್ಕನೇ ಕ್ರಿಕೆಟಿಗ ಎಂಬ ಹಿರಿಮೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. ಈ ಹಿಂದೆ ಸಚಿನ್ ತೆಂಡೂಲ್ಕರ್, ಮಹೇಂದ್ರ ಸಿಂಗ್ ಧೋನಿ ಮತ್ತು ವಿರಾಟ್ ಕೊಹ್ಲಿ ಗೆ ನೀಡಿ ಪುರಸ್ಕರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ