ವೇಗಿಗಳಿಗೆ ಬಿಸಿನೆಸ್ ಕ್ಲಾಸ್ ಸೀಟು ಬಿಟ್ಟುಕೊಟ್ಟ ರೋಹಿತ್, ವಿರಾಟ್, ದ್ರಾವಿಡ್


Team Udayavani, Nov 8, 2022, 10:02 AM IST

fast

ಅಡಿಲೇಡ್: ಐಸಿಸಿ ಟಿ20 ವಿಶ್ವಕಪ್ 2022ರಲ್ಲಿ ಭಾರತ ತಂಡದ ಪ್ರದರ್ಶನ ಉನ್ನತ ಮಟ್ಟದಲ್ಲಿದೆ. ಸೂಪರ್ 12 ಹಂತದ ಗ್ರೂಪ್ 2ರಲ್ಲಿ ಅಗ್ರಸ್ಥಾನ ಪಡೆದಿರುವ ರೋಹಿತ್ ಶರ್ಮಾ ಬಳಗವು ಸೆಮಿ ಫೈನಲ್ ತಲುಪಿದೆ.

ನ.10ರಂದು ಅಡಿಲೇಡ್ ಅಂಗಳದಲ್ಲಿ ನಡೆಯಲಿರುವ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಕಳೆದ ರವಿವಾರ ಮೆಲ್ಬರ್ನ್ ನಲ್ಲಿ ಜಿಂಬಾಬ್ವೆ ವಿರುದ್ಧ ತಂಡವು ಅಡಿಲೇಡ್ ಗೆ ಪ್ರಯಾಣಿಸಿದೆ.

ಆಸ್ಟ್ರೇಲಿಯಾ ಖಂಡದಾದ್ಯಂತ ನಡೆಯುತ್ತಿರುವ ಟಿ20 ವಿಶ್ವಕಪ್‌ ನಲ್ಲಿ ಒಂದೊಂದು ಸ್ಥಳಗಳಿಗೆ ಪ್ರಯಾಣಿಸುವುದೇ ತಂಡಗಳಿಗೆ ದೊಡ್ಡ ಸಮಸ್ಯೆಯಾಗಿದೆ. ವಿವಿಧ ಸ್ಥಳಗಳ ನಡುವೆ ತೆರಳಲು ತಂಡಗಳು ಐದು ಗಂಟೆಗಳವರೆಗೆ ದೇಶೀಯ ವಿಮಾನಗಳಲ್ಲಿ ಪ್ರಯಾಣಿಸಬೇಕಾಗಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಎಲ್ಲಾ ತಂಡಗಳಿಗೆ ದೇಶೀಯ ವಿಮಾನದಲ್ಲಿ ತಲಾ ನಾಲ್ಕು ಬಿಸಿನೆಸ್ ಕ್ಲಾಸ್ ಸೀಟುಗಳನ್ನು ನಿಗದಿಪಡಿಸುತ್ತದೆ. ಇವುಗಳನ್ನು ಸಾಮಾನ್ಯವಾಗಿ ನಾಯಕ, ಮುಖ್ಯ ಕೋಚ್ ಮತ್ತು ತಂಡದ ಹಿರಿಯ ಸದಸ್ಯರಿಗೆ ಮೀಸಲಿಡಲಾಗುತ್ತದೆ. ಭಾರತದ ತಂಡದಲ್ಲಿ ಈ ಸೀಟುಗಳನ್ನು ಸಾಮಾನ್ಯವಾಗಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್‌ ಗೆ ಮೀಸಲಿಡಲಾಗಿದೆ.

ಆದರೆ ರೋಹಿತ್, ಕೊಹ್ಲಿ ಮತ್ತು ದ್ರಾವಿಡ್ ಅವರು ಮೆಲ್ಬರ್ನ್‌ ನಿಂದ ಅಡಿಲೇಡ್‌ ಗೆ ತೆರಳುವ ವಿಮಾನದಲ್ಲಿ ತಮ್ಮ ಬಿಸಿನೆಸ್ ಕ್ಲಾಸ್ ಸೀಟುಗಳನ್ನು ವೇಗಿಗಳಿಗೆ ಬಿಟ್ಟುಕೊಟ್ಟಿದ್ದಾರೆ ಎಂದು ವರದಿಯಾಗಿದೆ. ಇದರಿಂದಾಗಿ ವೇಗದ ಬೌಲರ್‌ ಗಳಾದ ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್ ಮತ್ತು ಭುವನೇಶ್ವರ್ ಕುಮಾರ್ ಆರಾಮವಾಗಿ ಪ್ರಯಾಣಿಸಿದ್ದಾರೆ.

“ಟೂರ್ನಮೆಂಟ್‌ ನಲ್ಲಿ ವೇಗದ ಬೌಲರ್‌ಗಳು ಮೈದಾನದ ದಿನದಲ್ಲಿ ಗರಿಷ್ಠ ಓಡಾಟ ನಡೆಸುವುದರ ಕಾರಣ ಅವರು ತಮ್ಮ ಕಾಲುಗಳನ್ನು ಚಾಚಲಿ ಎಂದು ಬಯಸಿದೆವು” ಎಂದು ಭಾರತೀಯ ತಂಡದ ಸಹಾಯಕ ಸಿಬ್ಬಂದಿಯೊಬ್ಬರು ದಿ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಗೆ ತಿಳಿಸಿದ್ದಾರೆ.

ಟೀಮ್ ಇಂಡಿಯಾ ತಮ್ಮ ಅಭಿಯಾನವನ್ನು ಮುಗಿಸುವ ಹೊತ್ತಿಗೆ, ಈ ಟಿ20 ವಿಶ್ವಕಪ್ ನಲ್ಲಿ ತಂಡವು ಸುಮಾರು 34,000 ಕಿಮೀ ಪ್ರಯಾಣಿಸುತ್ತದೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.