

Team Udayavani, Dec 30, 2021, 9:18 AM IST
ವೆಲ್ಲಿಂಗ್ಟನ್: ನ್ಯೂಜಿಲ್ಯಾಂಡ್ ಕ್ರಿಕೆಟ್ ತಂಡದ ಹಿರಿಯ ಸದಸ್ಯ ರಾಸ್ ಟೇಲರ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ಈ ಬೇಸಿಗೆಯಲ್ಲಿ ತವರು ನೆಲದಲ್ಲಿ ನಡೆಯಲಿರುವ ಮೂರು ಸರಣಿಗಳ ಬಳಿಕ ತಾನು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರವಾಗುವುದಾಗಿ ಟೇಲರ್ ಹೇಳಿದ್ದಾರೆ.
ಶನಿವಾರದಿಂದ ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಇದೇ ತನ್ನ ಅಂತಿಮ ಟೆಸ್ಟ್ ಸರಣಿಯಾಗಲಿದೆ ಎಂದು ರಾಸ್ ಹೇಳಿದ್ದಾರೆ. ನಂತರ ನಡೆಯಲಿರುವ ಆಸ್ಟ್ರೇಲಿಯಾ ಮತ್ತು ನೆದರ್ಲ್ಯಾಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ:ಪ್ರಧಾನಿಗೆ ಮರ್ಸಿಡಿಸ್ ಕಾರು: ಬೆಲೆ ಸುರಕ್ಷತ ವಿಶ್ಲೇಷಣೆಗೆ ಕೇಂದ್ರದ ಅತೃಪ್ತಿ
“ಇದೊಂದು ಅದ್ಭುತ ಪ್ರಯಾಣವಾಗಿದೆ ಮತ್ತು ನಾನು ಇರುವವರೆಗೂ ನನ್ನ ದೇಶವನ್ನು ಪ್ರತಿನಿಧಿಸಿರುವುದು ನಂಬಲಾಗದಷ್ಟು ಅದೃಷ್ಟ ಎಂದು ಭಾವಿಸುತ್ತೇನೆ. ಆಟದ ಕೆಲವು ಶ್ರೇಷ್ಠರ ಜೊತೆಗೆ ಮತ್ತು ವಿರುದ್ಧವಾಗಿ ಆಡಲು ಮತ್ತು ದಾರಿಯುದ್ದಕ್ಕೂ ಹಲವಾರು ನೆನಪುಗಳು ಮತ್ತು ಸ್ನೇಹವನ್ನು ಕಂಡುಕೊಂಡಿರುವುದು ನನ್ನ ಸೌಭಾಗ್ಯ. ಆದರೆ ಎಲ್ಲಾ ಒಳ್ಳೆಯ ವಿಷಯಗಳು ಕೊನೆಗೊಳ್ಳಬೇಕು ಮತ್ತು ಸಮಯವು ನನಗೆ ಸರಿಯಾಗಿದೆ.” ಎಂದು ರಾಸ್ ಟೇಲರ್ ಟ್ವೀಟ್ ಮಾಡಿದ್ದಾರೆ.
Today I’m announcing my retirement from international cricket at the conclusion of the home summer, two more tests against Bangladesh, and six odi’s against Australia & the Netherlands. Thank you for 17 years of incredible support. It’s been an honour to represent my country #234 pic.twitter.com/OTy1rsxkYp
— Ross Taylor (@RossLTaylor) December 29, 2021
37 ವರ್ಷದ ರಾಸ್ ಟೇಲರ್ ಅವರು 2006ರಲ್ಲಿ ಪದಾರ್ಪಣೆ ಮಾಡಿದ್ದರು. 109 ಟೆಸ್ಟ್ ಪಂದ್ಯದಲ್ಲಿ 7,577 ರನ್ ಗಳು, 233 ಏಕದಿನ ಪಂದ್ಯಗಳಲ್ಲಿ 8,581 ರನ್ ಗಳು ಮತ್ತು 102 ಟಿ20 ಪಂದ್ಯಗಳಲ್ಲಿ 1,909 ರನ್ ಗಳನ್ನು ಗಳಿಸಿದ್ದಾರೆ. ಐಪಿಎಲ್ ನಲ್ಲೂ ಆಡಿರುವ ರಾಸ್ ಟೇಲರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು, ರಾಜಸ್ಥಾನ್ ರಾಯಲ್ಸ್, ಡೆಲ್ಲಿ ಡೇರ್ ಡೆವಿಲ್ಸ್, ಪುಣೆ ವಾರಿಯರ್ಸ್ ಪರವಾಗಿ ಆಡಿದ್ದಾರೆ.
Ad
INDvsENG: ಭಾರತ ವಿರುದ್ದದ ಟೆಸ್ಟ್ ಸರಣಿಯಿಂದ ಹೊರಬಿದ್ದ ಸ್ಪಿನ್ನರ್ ಶೋಯೆಬ್ ಬಶೀರ್
AUS vs WI : ಕೇವಲ 27 ರನ್ಗೆ ಆಲೌಟ್ ಆದ ವೆಸ್ಟ್ ಇಂಡೀಸ್ – ತವರಿನಲ್ಲೇ ವೈಟ್ ವಾಶ್
Karnataka: 173 ಕಿ.ಮೀ. ಓಡಿ ಜಪಾನ್ ರೇಸ್ ಗೆದ್ದ ಕನ್ನಡತಿ ಅಶ್ವಿನಿ ಗಣಪತಿ!
FIDE ಮಹಿಳಾ ವಿಶ್ವಕಪ್ ಚೆಸ್: ಪ್ರಿ ಕ್ವಾರ್ಟರ್ಗೆ ದಿವ್ಯಾ, ಹಂಪಿ
Tokyo ಜಪಾನ್ ಬ್ಯಾಡ್ಮಿಂಟನ್: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ
Udyavara: ಮೃತ ಮೀನುಗಾರ ಕುಟುಂಬಕ್ಕೆ ಪರಿಹಾರ ವಿತರಣೆ
ಕಾಸರಗೋಡು ಪೊಲೀಸರಿಂದ ವಿಶೇಷ ಕಾರ್ಯಾಚರಣೆ: ಹಲವು ಪ್ರಕರಣ ದಾಖಲು
Tragedy: ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ
ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ:ಇಬ್ಬರು ಉಪನ್ಯಾಸಕರು, ಗೆಳೆಯ ಸೇರಿ ಮೂವರು ಆರೋಪಿಗಳ ಬಂಧನ
ನಮ್ಮೂರ ಗೆಳೆಯರ ಬಳಗ; ಹಡಿಲು ಗದ್ದೆಗಳಲ್ಲಿ ಭತ್ತ ಬೆಳೆಯುವ ಸಗ್ರಿ ಯುವಕರು!
You seem to have an Ad Blocker on.
To continue reading, please turn it off or whitelist Udayavani.