ಮುಂಬೈ ವಿರುದ್ಧ ರೋಚಕ ಗೆಲುವು: ‘ಪಂಜಾಬ್ ಕಿಂಗ್ಸ್’ ತಂಡಕ್ಕೆ ಥ್ಯಾಂಕ್ಸ್ ಹೇಳಿದ್ದೇಕೆ RCB ?
Team Udayavani, Apr 10, 2021, 3:13 PM IST
ಬೆಂಗಳೂರು: ಶುಕ್ರವಾರ ನಡೆದ ಐಪಿಎಲ್ 14 ನೇ ಆವೃತ್ತಿಯ ಚೊಚ್ಚಲ ಪಂದ್ಯದಲ್ಲಿ ಗೆಲುವು ಪಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ‘ಪಂಜಾಬ್ ಕಿಂಗ್ಸ್’ ತಂಡಕ್ಕೆ ಧನ್ಯವಾದ ಹೇಳಿದೆ.
ಅರೇ…ಆರ್ ಸಿಬಿಯವರು ಪಂಜಾಬ್ ತಂಡಕ್ಕೆ ಏಕೆ ಥ್ಯಾಂಕ್ಸ್ ಹೇಳಿದರು ಎನ್ನುವ ಪ್ರಶ್ನೆ ನಿಮಗೆ ಮೂಡಿರಬಹುದು. ಅದಕ್ಕೆ ಕಾರಣ ಗ್ಲೆನ್ ಮ್ಯಾಕ್ಸ್ವೆಲ್.
ಹೌದು, ಹಿಟ್ ಮ್ಯಾನ್ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ ತಂಡದ ವಿರುದ್ಧ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಗೆಲುವು ಪಡೆಯಿತು. ರೋಚಕತೆಯಿಂದ ಕೂಡಿದ್ದ ಈ ಪಂದ್ಯದ ಗೆಲುವಿಗೆ ಗ್ಲೆನ್ ಮ್ಯಾಕ್ಸ್ವೆಲ್ ಕೊಡುಗೆ ಅಪಾರ. ಬೆಂಗಳೂರು ತಂಡದ ಪರವಾಗಿ ಕಣಕ್ಕಿಳಿದ ಅವರು, 28 ಎಸೆತಗಳಲ್ಲಿ ಮೂರು ಫೋರ್ ಹಾಗೂ ಅಮೋಘ ಎರಡು ಸಿಕ್ಸ್ ಚಚ್ಚಿ 39 ರನ್ ಕಲೆ ಹಾಕಿದರು. ಇದು ಆರ್ ಸಿಬಿ ಗೆಲುವಿಗೆ ಸಹಕಾರಿಯಾಯಿತು.
2020ರ 13 ನೇ ಆವೃತ್ತಿಯ ಐಪಿಎಲ್ ಟೋರ್ನಿಯಲ್ಲಿ ಪಂಜಾಬ್ ತಂಡದ ಪರ ಆಡಿದ್ದ ಸ್ಫೋಟಕ ಬ್ಯಾಟ್ಸ್ಮನ್ ಗ್ಲೆನ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ಪರಿಣಾಮ ಈ ವರ್ಷದ ಹರಾಜಿನಲ್ಲಿ ಪಂಜಾಬ್ ತಂಡ ಅವರನ್ನು ಕೈ ಬಿಟ್ಟಿತು. ಪಂಜಾಬ್ ತಂಡದಿಂದ ತಿರಸ್ಕೃತಗೊಂಡಿದ್ದ ಮ್ಯಾಕ್ಸ್ವೆಲ್ ಅವರನ್ನು ಬೆಂಗಳೂರು ತಂಡ ಬರೋಬ್ಬರಿ 14.25 ಕೋಟಿ ನೀಡಿ ಖರೀದಿಸಿದೆ. ನಿನ್ನೆ ನಡೆದ ಪಂದ್ಯದಲ್ಲಿ ಗ್ಲೆನ್ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡರು.
ಮ್ಯಾಚ್ ಗೆಲುವಿನ ನಂತರ ಟ್ವೀಟ್ ಮಾಡಿರುವ ಆರ್ ಸಿಬಿ, ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ಬಿಟ್ಟುಕೊಟ್ಟಿದ್ದಕ್ಕೆ ಪಂಜಾಬ್ ತಂಡಕ್ಕೆ ಧನ್ಯವಾದ ತಿಳಿಸಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಮಯ ಜಾರಿಯಲ್ಲಿರದಿದ್ದರೆ ನಿಮ್ಮನ್ನು ಅಪ್ಪಿಕೊಳ್ಳುತ್ತಿದ್ದೇವು ಎಂದು ಹೇಳಿಕೊಂಡಿದೆ.
First Maxi-mum in Red and Gold and he nearly hits it out of Chennai!?
Thank you @PunjabKingsIPL. We would hug you if not for social distancing ?#PlayBold #WeAreChallengers #MIvRCB #DareToDream
— Royal Challengers Bangalore (@RCBTweets) April 9, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ