ಪೃಥ್ವೀ ಶಾ ಬೊಂಬಾಟ್ ಆಟ ; ಸಿಡಿದ ಸ್ಟೋಯ್ನ್ಸ್- ಪಂತ್ : RCB ಗೆಲುವಿಗೆ 197 ರನ್ ಸವಾಲು
Team Udayavani, Oct 5, 2020, 9:18 PM IST
ದುಬಾಯಿ: ಆರಂಭಿಕ ಆಟಗಾರ ಪೃಥ್ವೀ ಶಾ (42) ಅವರ ಬೊಂಬಾಟ್ ಬ್ಯಾಟಿಂಗ್ ಹಾಗೂ ಮಾರ್ಕಸ್ ಸ್ಟೋಯ್ನ್ಸ್ ಮತ್ತು ರಿಷಭ್ ಪಂತ್ ಅವರ ಹೊಡೆಬಡಿಯ ಜೊತೆಯಾಟದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿಗೆ 197 ರನ್ ಗಳ ಗುರಿ ನೀಡಿದೆ.
ಟಾಸ್ ಗೆದ್ದ ವಿರಾಟ್ ಕೊಹ್ಲಿ ಫೀಲ್ಡಿಂಗ್ ಆಯ್ದುಕೊಂಡರು. ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಜೋಡಿ ಪೃಥ್ವೀ ಶಾ (42) ಮತ್ತು ಅನುಭವಿ ಬ್ಯಾಟ್ಸ್ ಮನ್ ಶಿಖರ್ ಧವನ್ (32) ಮೊದಲ ವಿಕೆಟಿಗೆ 68 ರನ್ ಜೊತೆಯಾಟ ಕಟ್ಟಿದರು.
ಆದರೆ 23 ಎಸೆತಗಳಲ್ಲಿ 42 ರನ್ ಗಳಿಸಿದ್ದ ಪೃಥ್ವೀ ಶಾ ಔಟಾಗುತ್ತಲೇ ಕ್ಯಾಪಿಟಲ್ಸ್ ಕುಸಿತ ಆರಂಭವಾಯಿತು. ಶಿಖರ್ ಧವನ್ (32), ನಾಯಕ ಶ್ರೇಯಸ್ ಅಯ್ಯರ್ (11) ಔಟಾಗುತ್ತಲೇ ಕ್ಯಾಪಿಟಲ್ಸ್ ಸ್ಥಿತಿ 90 ರನ್ನಿಗೆ 3 ವಿಕೆಟ್ ಆಗಿತ್ತು.
ಈ ಹಂತದಲ್ಲಿ ಜೊತೆಯಾದ ರಿಷಭ್ ಪಂತ್ ಹಾಗೂ ಹೊಡೆಬಡಿಯ ದಾಂಢಿಗ ಮಾರ್ಕಸ್ ಸ್ಟೋಯ್ನ್ಸ್ ಸೇರಿಕೊಂಡು ಬಿರುಸಿನ ಆಟಕ್ಕಿಳಿದರು. ಈ ಜೋಡಿ ಕೇವಲ 45 ಎಸೆತಗಳಲ್ಲಿ 89 ರನ್ ಗಳ ಉತ್ತಮ ಜೊತೆಯಾಟ ನೀಡಿದರು.
ರಿಷಭ್ ಪಂತ್ 25 ಎಸೆತಗಳಲ್ಲಿ 37 ರನ್ ಗಳಿಸಿ ಔಟಾದರೆ, ಸ್ಟೋಯ್ನ್ಸ್ 26 ಎಸೆತಗಳಲ್ಲಿ 53 ರನ್ ಸಿಡಿಸಿ ಔಟಾಗದೇ ಉಳಿದರು.
ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟದಲ್ಲಿ 196 ರನ್ ಗಳಿಸಿತು. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿಗೆ 197 ರನ್ ಗಳ ಗುರಿ ನಿಗದಿಯಾಗಿದೆ.
ರಾಯಲ್ ಚಾಲೆಂಜರ್ಸ್ ಬೌಲರ್ ಗಳಲ್ಲಿ ಮಹಮ್ಮದ್ ಸಿರಾಜ್ 2 ವಿಕೆಟ್ ಪಡೆದರೆ, ಉದಾನ ಹಾಗೂ ಮೊಯೀನ್ ಆಲಿ ತಲಾ 1 ವಿಕೆಟ್ ಪಡೆದರು. 4 ಓವರ್ ಗಳಲ್ಲಿ 20 ರನ್ ನೀಡಿದ ವಾಷಿಂಗ್ಟನ್ ಸುಂದರ್ ಎಕಾನಮಿ ಬೌಲರ್ ಎಣಿಸಿಕೊಂಡರು. 3 ಓವರ್ ಗಳನ್ನು ಎಸೆದು 48 ರನ್ ನೀಡಿದ ನವದೀಪ್ ಸೈನಿ ಇಂದು ತುಸು ದುಬಾರಿಯೆಣಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ