ಆರ್‌ಸಿಬಿ-ರಾಜಸ್ಥಾನ್‌: ಜೈಪುರ ಜಯ ನಿರ್ಣಾಯಕ


Team Udayavani, May 19, 2018, 6:00 AM IST

l-9.jpg

ಜೈಪುರ: ಐಪಿಎಲ್‌ ಲೀಗ್‌ ಹಣಾಹಣಿ ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದಿದೆ. ಹೈದರಾಬಾದ್‌, ಚೆನ್ನೈ ತಂಡಗಳ ಪ್ಲೇ-ಆಫ್ ಪ್ರವೇಶ, ಡೆಲ್ಲಿ ತಂಡಗಳ ನಿರ್ಗಮನ ಹೊರತುಪಡಿಸಿದರೆ ಉಳಿದಂತೆ ಪ್ಲೇ-ಆಫ್ ಅವಕಾಶ ಉಳಿದೈದೂ ತಂಡಗಳಿಗೆ ಮುಕ್ತವಾಗಿರುವುದರಿಂದ ಕ್ರಿಕೆಟ್‌ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಅದರಲ್ಲೂ “ಕಪ್‌ ನಮ್ದೇ’ ಎಂದು ಹಾಡುತ್ತ ಹಾರಾಡುತ್ತಿದ್ದ ಕರ್ನಾಟಕದ ಕ್ರಿಕೆಟ್‌ ಪ್ರೇಮಿಗಳು ಮರಳಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಇದಕ್ಕೆ ಕಾರಣ, ಆರ್‌ಸಿಬಿ ತಂಡದ ದಿಢೀರ್‌ ಪ್ರಗತಿ. 13ರಲ್ಲಿ 6 ಪಂದ್ಯ ಗೆದ್ದು 5ನೇ ಸ್ಥಾನದಲ್ಲಿರುವ ಕೊಹ್ಲಿ ಪಡೆ ಶನಿವಾರ ತನ್ನ ಕೊನೆಯ ಲೀಗ್‌ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ಜೈಪುರದಲ್ಲಿ ಸೆಣಸಲಿದೆ. ಇನ್ನೊಂದೆಡೆ ರಾಜಸ್ಥಾನ್‌ ಕೂಡ ಇಷ್ಟೇ ಪಂದ್ಯಗಳಿಂದ 12 ಅಂಕ ಸಂಪಾದಿಸಿದೆಯಾದರೂ ರನ್‌ರೇಟ್‌ನಲ್ಲಿ ಬೆಂಗಳೂರಿಗಿಂತ ಹಿಂದಿದೆ. ಹೀಗಾಗಿ ಜೈಪುರದಲ್ಲಿ ಜಯಿಸಿದವರಿಗೆ ಪ್ಲೇ-ಆಫ್ ಟಿಕೆಟ್‌ ಲಭಿ ಸುವ ಎಲ್ಲ ಸಾಧ್ಯತೆ ಇದೆ ಎಂಬುದು ಸದ್ಯದ ಲೆಕ್ಕಾಚಾರ.

ಬಟ್ಲರ್‌, ಸ್ಟೋಕ್ಸ್‌ ಸೇವೆ ಇಲ್ಲ
ಎಂದೋ ಹೊರಬೀಳಬೇಕಿದ್ದ ರಾಜಸ್ಥಾನ್‌ ಇಲ್ಲಿಯ ತನಕ ಪ್ಲೇ-ಆಫ್ ರೇಸ್‌ನಲ್ಲಿ ಉಳಿದದ್ದು ಇಂಗ್ಲೆಂಡಿನ ಬಿಗ್‌ ಹಿಟ್ಟರ್‌ ಜಾಸ್‌ ಬಟ್ಲರ್‌ ಸಾಹಸದಿಂದ ಎಂಬುದರಲ್ಲಿ ರಹಸ್ಯವೇನಿಲ್ಲ. ಯಾವಾಗ ಬಟ್ಲರ್‌ಗೆ ಆರಂಭಿಕನಾಗಿ ಭಡ್ತಿ ನೀಡಲಾಯಿತೋ ರಹಾನೆ ಬಳಗದ ದೆಸೆ ಬದಲಾಗತೊಡಗಿತು. ಬಟ್ಲರ್‌ ಏಕಾಂಗಿ ಹೋರಾಟದ ಮೂಲಕ ತಂಡಕ್ಕೆ ಅತ್ಯಗತ್ಯ ಜಯವನ್ನು ತಂದುಕೊಡುತ್ತ ಹೋದರು. ರಾಜಸ್ಥಾನ್‌ ರಾಯಲ್ಸ್‌ ಅಂದರೆ ಜಾಸ್‌ ಬಟ್ಲರ್‌ ಎಂಬಂತಾಗಿತ್ತು ತಂಡದ ಸ್ಥಿತಿ. 

ಆದರೆ ಅತ್ಯಂತ ಮಹತ್ವದ ಕೊನೆಯ ಲೀಗ್‌ ಪಂದ್ಯದಲ್ಲಿ ರಾಜಸ್ಥಾನ್‌ಗೆ ಬಟ್ಲರ್‌ ಸೇವೆ ಲಭಿಸುತ್ತಿಲ್ಲ. ಇಂಗ್ಲೆಂಡ್‌ ಟೆಸ್ಟ್‌ ತಂಡಕ್ಕೆ ಆಯ್ಕೆಯಾಗಿರುವ ಅವರು ತವರಿಗೆ ವಾಪಸಾಗಿದ್ದಾರೆ. ಇವರೊಂದಿಗೆ ಬೆನ್‌ ಸ್ಟೋಕ್ಸ್‌ ಕೂಡ ಹೋಗಿದ್ದಾರೆ. ತಂಡ ತೀವ್ರ ಒತ್ತಡಕ್ಕೆ ಸಿಲುಕಿದೆ. ತ್ರಿಪಾಠಿ, ಶಾರ್ಟ್‌, ರಹಾನೆ, ಸ್ಯಾಮ್ಸನ್‌ ಸೇರಿಕೊಂಡು ತಂಡವನ್ನು ಬಲಪಡಿಸಬೇಕಿದೆ. ಇವರಲ್ಲಿ ತ್ರಿಪಾಠಿ ಹೊರತುಪಡಿಸಿ ಉಳಿದವರ ಫಾರ್ಮ್ ಬಗ್ಗೆ ಏನೂ ಹೇಳುವಂತಿಲ್ಲ.

ಆರ್‌ಸಿಬಿ ಗೆಲುವಿನ ಹ್ಯಾಟ್ರಿಕ್‌
ಆರಂಭದಲ್ಲಿ ಮಂಕಾಗಿದ್ದ ಆರ್‌ಸಿಬಿ ಈಗ ಹ್ಯಾಟ್ರಿಕ್‌ ಜಯದೊಂದಿಗೆ ಮುನ್ನುಗ್ಗುತ್ತಿದೆ. ಡೆಲ್ಲಿ, ಪಂಜಾಬ್‌ ಮತ್ತು ಹೈದರಾಬಾದ್‌ ತಂಡಗಳನ್ನು ಕೆಡವಿದ ಬಳಿಕ ಈಗ ರಾಜಸ್ಥಾನ್‌ ಬೇಟೆಯ ಮೇಲೆ ಕಣ್ಣಿಟ್ಟಿದೆ. ಇದರಲ್ಲಿ ಯಶಸ್ವಿಯಾದರೆ ಬೆಂಗಳೂರಿಗೆ ಜಾಕ್‌ಪಾಟ್‌ ಖಂಡಿತ! ಬೆಂಗಳೂರಿನಲ್ಲೇ ನಡೆದ ಮೊದಲ ಸುತ್ತಿನಲ್ಲಿ ರಾಜಸ್ಥಾನ್‌ ವಿರುದ್ಧ ಅನುಭವಿಸಿದ 19 ರನ್‌ ಸೋಲಿಗೆ ಸೇಡು ತೀರಿಸಿಕೊಳ್ಳುವ ಯೋಜನೆ ಕೂಡ ಆರ್‌ಸಿಬಿ ಮುಂದಿದೆ.

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.